ರಾಮನಗರ: ಮಹಿಳೆಯರಿಂದ ಡಿವೈಎಸ್ಪಿ ಕಚೇರಿ ಮುಂದೆ ಅಹೋರಾತ್ರಿ ಧರಣಿ
ರಾಮನಗರ, ಜೂನ್ 30: ಸಿಎಂ ಎಚ್.ಡಿ.ಕುಮಾರಸ್ವಾಮಿಯವರ ಕ್ಷೇತ್ರ ಚನ್ನಪಟ್ಟಣದಲ್ಲಿ ಪೊಲೀಸರ ದೌರ್ಜನ್ಯ ಖಂಡಿಸಿ ಮಹಿಳೆಯರು ಡಿವೈಎಸ್ಪಿ ಕಚೇರಿ ಎದುರು ಜೂನ್ 30ರಂದು ಅಹೋರಾತ್ರಿ ಪ್ರತಿಭಟನೆ ಘಟನೆ ನಡೆದಿದೆ.
ಸ್ನೇಹಿತನಿಂದಲೇ ಬರ್ಬರ ಹತ್ಯೆಯಾದ ನಿವೃತ್ತ ಪೊಲೀಸ್ ಅಧಿಕಾರಿ
ಚನ್ನಪಟ್ಟಣ ತಾಲ್ಲೂಕಿನ ಅಂಬಾಡಹಳ್ಳಿ ಗ್ರಾಮದ ವ್ಯಕ್ತಿಯೊರ್ವ ಮೂರು ಮದುವೆಯಾಗಿದ್ದ. ಈ ವಿಚಾರವಾಗಿ ಕಳೆದ ಏಪ್ರಿಲ್ ವೇಳೆ ಸ್ವರಾಜ್ ಮಹಿಳಾ ಸಂಘಟನೆ ಕಾರ್ಯಕರ್ತರು ದೂರು ನೀಡಿದ್ದರು. ಆದರೆ ಚನ್ನಪಟ್ಟಣದ ಪೊಲೀಸರು ಕ್ರಮ ಕೈಗೊಂಡಿಲ್ಲ ಮೂರು ಮದುವೆಯಾದ ವ್ಯಕ್ತಿ ನಿರ್ಭಯವಾಗಿ ಓಡಾಡಿಕೊಂಡಿದ್ದಾನೆ ಕಾನೂನು ಸುವ್ಯವಸ್ಥೆ ಕೆಟ್ಟಿದೆ ಎಂದು ಮಹಿಳಾ ಸಂಘಟನೆಯ ಕಾರ್ಯಕರ್ತರು ಆರೋಪಿಸಿದ್ದಾರೆ.
ಪೊಲೀಸ್ ಅಧಿಕಾರಿಗಾಳು ರಾಜಕೀಯ ವ್ಯಕ್ತಿಗಳ ಕೃಪಾಕಟಾಕ್ಷ ಗಳಿಸಲು ಭಧ್ರತಾ ಸೇವೆಯನ್ನು ರಾಜಕೀಯ ವ್ಯಕ್ತಿಗಳಿಗೆ ಸೀಮಿತವಾಗಿಸಿದ್ದರೆ. ಜನಸಾಮಾನ್ಯರ ಕಷ್ಟ ಕೇಳುತ್ತಿಲ್ಲ ಅದರಲ್ಲು ನೂಂದ ಮಹಿಳೆಯಗೆ ನ್ಯಾಯ ಒದಗಿಸಬೇಕಾದ ಆರಕ್ಷಕರೇ ಕಣ್ಣುಮುಚ್ಚಿ ಕುಳಿತಿದ್ದಾರೆ ಇದನ್ನು ಪ್ರಶ್ನಿಸಿದವರ ಮೇಲೆ ದೌರ್ಜನ್ಯದ ಮಾಡುತ್ತಿದ್ದಾರೆ ಎಂದು ಮಹಿಳೆಯರು ಆರೋಪಿಸಿದರು.
ಪೊಲೀಸರ ನಡೆಯನ್ನು ಖಂಡಿಸಿದ ಸ್ವರಾಜ್ ಮಹಿಳಾ ಸಂಘಟನೆಯ ಸದಸ್ಯರು ಮಧ್ಯರಾತ್ರಿಯವರೆಗೆ ಡಿವೈಎಸ್ಪಿ ಕಚೇರಿ ಬಾಗಿಲಲ್ಲೇ ಕುಳಿತು ಪ್ರತಿಭಟನೆ ನಡೆದಿದ್ದಾರು. ತಮ್ಮ ಕ್ಷೇತ್ರದಲ್ಲಿ ಹದಗೆಟ್ಟಿರುವ ಕಾನೂನು ವ್ಯವಸ್ಥೆಯನ್ನ ಸರಿಪಡಿಸುವಂತೆ ಸಿಎಂ ಎಚ್.ಡಿ. ಕುಮಾರಸ್ವಾಮಿಗೆ ಪ್ರತಿಭಟಣಾ ನಿರತರು ಮನವಿ ಮಾಡಿದ್ದಾರೆ.