ರಾಮನಗರ; ಏಕಾಏಕಿ ಕೆಲಸದಿಂದ ತೆಗೆದ ಕಂಪನಿ, ಧರಣಿ ಕುಳಿತ ನೌಕರರು
ರಾಮನಗರ, ಸೆಪ್ಟೆಂಬರ್ 3: ಮಾಹಿತಿ ನೀಡದೆ, ಏಕಾಏಕಿ ಕೆಲಸದಿಂದ ತೆಗೆದುಹಾಕಿದ್ದಾರೆ ಎಂದು ಆರೋಪಿಸಿ ತಾಲೂಕಿನ ಅಚ್ಚಲು ಗ್ರಾಮದ ಲಕ್ಷ್ಮಣನ್ ಐಸೋಲಾ ಕಂಪನಿಯ ಕಾರ್ಮಿಕರು ಮಂಗಳವಾರ ಪ್ರತಿಭಟನೆ ನಡೆಸಿದ್ದಾರೆ.
ಎಂಟಕ್ಕೂ ಹೆಚ್ಚು ಮಂದಿ ಕಾರ್ಮಿಕರನ್ನು ಕಂಪನಿಯಿಂದ ತೆಗೆದುಹಾಕಲಾಗಿದ್ದು, ಕಂಪನಿ ಆಡಳಿತ ಮಂಡಳಿಯ ಕ್ರಮದ ವಿರುದ್ಧ ಕಾರ್ಮಿಕರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಕಾರ್ಮಿಕ ವಿನೋದ್ ಕುಮಾರ್ ಮಾತನಾಡಿ, "ಕಳೆದ 8 ವರ್ಷಗಳಿಂದ ಕಡಿಮೆ ವೇತನಕ್ಕೆ ದುಡಿಯುತ್ತಿದ್ದೇವೆ. ಆದರೆ, ಕಂಪನಿ ಯಾವುದೇ ಮಾಹಿತಿ ನೀಡದೇ ಏಕಾಏಕಿ ಕೆಲಸದಿಂದ ಹೊರಹಾಕಿದೆ. ಮೊದಲ ಮೂರು ವರ್ಷ ತರಬೇತಿ ನೀಡುವ ನೆಪದಲ್ಲಿ ದುಡಿಸಿಕೊಳ್ಳಲಾಯಿತು. ನಂತರ 5 ವರ್ಷ ತಾತ್ಕಾಲಿಕ ನೌಕರರಾಗಿ ನೇಮಿಸಿಕೊಂಡಿತು. ಕಾಯಂ ನೌಕರಿಯಲ್ಲೇ ಸತತ 8 ವರ್ಷಗಳ ಕಾಲ ನಮ್ಮನ್ನು ದುಡಿಸಿಕೊಳ್ಳಲಾಗಿದೆ" ಎಂದು ದೂರಿದರು.

"ಹೊರ ಕಳುಹಿಸಿರುವ ಎಲ್ಲಾ ಕಾರ್ಮಿಕರು ಐಟಿಐ, ಜೆಒಸಿ ವಿದ್ಯಾರ್ಹತೆ ಹೊಂದಿದವರು. ನಮಗೆ ಈಗಾಗಲೇ 30 ವರ್ಷ ವಯಸ್ಸಾಗಿದೆ. ಬೇರೆ ಕಡೆ ಕೆಲಸ ಸಿಗುವುದು ಅನುಮಾನ. ಇಂಥ ಸ್ಥಿತಿಯಲ್ಲಿ ಕಂಪನಿ ನಮ್ಮನ್ನು ಬೀದಿಗೆ ತಂದು ನಿಲ್ಲಿಸಿದೆ. 2 ವರ್ಷಗಳ ಹಿಂದಿನವರನ್ನು ಕಾಯಂಗೊಳಿಸಲಾಗಿದೆ. ಜತೆಗೆ, ಅನಕ್ಷರಸ್ಥರು ಈ ಕಾರ್ಖಾನೆಯಲ್ಲಿ ದುಡಿಯುತ್ತಿದ್ದಾರೆ. ವಿದ್ಯಾರ್ಹತೆ ಜತೆಗೆ ಅನುಭವ ಇದ್ದರೂ, ನಮ್ಮನ್ನು ಹೊರ ಹಾಕಲಾಗಿದೆ" ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಮಿಕ ಸಂಘದ ಅಧ್ಯಕ್ಷ ಸುರೇಶ್ ಮಾತನಾಡಿ, "ಮಾಹಿತಿ ನೀಡದೇ ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಿರುವುದನ್ನು ಪ್ರಶ್ನಿಸಿದರೆ, ಉತ್ಪಾದನೆ ಕಡಿಮೆಯಾಗಿದೆ ಎಂದು ನೆಪ ಹೇಳುತ್ತಾರೆ. ಇದೇ ರೀತಿ ಹಲವು ತಿಂಗಳಿನಿಂದಲೂ ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಲಾಗಿದೆ" ಎಂದು ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿರುವ ಕಂಪನಿಯ ಮಾನವ ಸಂಪನ್ಮೂಲ ವಿಭಾಗದ ಸಿದ್ದರಾಜು, "ಉತ್ಪಾದನೆ ಕಡಿಮೆಯಾಗಿರುವುದರಿಂದ ಹಲವು ತಿಂಗಳಿನಿಂದಲೂ ಕಾರ್ಮಿಕರನ್ನು ತೆಗೆದು ಹಾಕಲಾಗುತ್ತಿದೆ. ಇರುವ ಕಾರ್ಮಿಕರನ್ನು ವಿಆರ್ ಎಸ್ ಪಡೆಯುವಂತೆ ಮನವಿ ಮಾಡುತ್ತಿದ್ದೇವೆ. ಉತ್ಪಾದನೆ ಕಡಿಮೆಯಾಗಿರುವುದರಿಂದ ಹೀಗೆ ಮಾಡಬೇಕಿದೆ" ಎಂದು ತಿಳಿಸಿದ್ದಾರೆ.
ಪ್ರತಿಭಟನೆಯಲ್ಲಿ ಕಾರ್ಮಿಕರಾದ ಕಿರಣ್, ಸುರೇಶ್, ಶ್ರೀನಿವಾಸ್, ಶೇಖರ್, ಜಗದೀಶ್ ಸೇರಿದಂತೆ ಇತರರು ಇದ್ದರು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications