ಜಾನಪದ ಲೋಕದಲ್ಲಿ ವಿಶ್ವ ಜಾನಪದ ದಿನಾಚರಣೆ ಸಂಭ್ರಮ
ರಾಮನಗರ, ಆಗಸ್ಟ್ 24: ಜನಪದರ ತವರು, ಜಾನಪದ ಕಾಶಿ ಎಂಬ ಹೆಗ್ಗಳಿಕೆಯ ಜಾನಪದ ಲೋಕದಲ್ಲಿ ಕೊರೊನಾ ಭೀತಿಯ ನಡುವೆಯೂ ನಿನ್ನೆ ಸಂಜೆ ವಿಶ್ವ ಜಾನಪದ ದಿನಾಚರಣೆಯ ಸಂಭ್ರಮ ಮನೆ ಮಾಡಿತ್ತು.
Recommended Video
ಪ್ರತಿವರ್ಷ ಬಹಳ ಅದ್ಧೂರಿಯಾಗಿ ನಡೆಯುತ್ತಿದ್ದ ಜಾನಪದ ದಿನಾಚರಣೆಯನ್ನು ಈ ಬಾರಿ ಸರಳವಾಗಿ ಆಚರಿಸಲಾಯಿತು. ಪ್ರತಿ ಬಾರಿ ರಾಜ್ಯಾದ್ಯಂತ ಸರಿಸುಮಾರು 30ಕ್ಕೂ ಹೆಚ್ಚು ತಂಡಗಳು ಆಗಮಿಸುತ್ತಿದ್ದವು. ಆದರೆ ಈ ಬಾರಿ ಕಲಾತಂಡಗಳ ಕೊರತೆ ಎದ್ದು ಕಾಣುತ್ತಿತ್ತು. ಆಗಸ್ಟ್ 23, ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮೈಸೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಕಲಾವಿದರು ಆಗಮಿಸಿದ್ದರು. ವೀರಗಾಸೆ ಕುಣಿತ, ಡೊಳ್ಳುಕುಣಿತ, ಕಂಸಾಳೆ ಕುಣಿತ, ಜಾನಪದ ಕುಣಿತ ನೋಡುಗರ ಗಮನ ಸೆಳೆಯಿತು.
ಈ ಸಂದರ್ಭ ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಟಿ.ತಿಮ್ಮೇಗೌಡ ಮಾತನಾಡಿ, ಪ್ರತಿವರ್ಷ ಬಹಳ ಅದ್ಧೂರಿಯಾಗಿ ಜಾನಪದ ಹಬ್ಬ ಆಚರಣೆ ಮಾಡುತ್ತಿದ್ದೆವು. ಆದರೆ ಈ ಬಾರಿ ಕೊರೊನಾದಿಂದ ಕಲಾವಿದರು ಕೂಡ ಅಷ್ಟಾಗಿ ಆಸಕ್ತಿ ತೋರಲಿಲ್ಲ. ಜೊತೆಗೆ ಪ್ರತಿವರ್ಷ ಜಾನಪದ ಲೋಕಕ್ಕೆ ರಾಜ್ಯ ಸರ್ಕಾರದಿಂದ 1 ಕೋಟಿ ರೂಪಾಯಿ ಅನುದಾನ ಬರುತ್ತಿತ್ತು. ಆದರೆ ಈ ಬಾರಿ ಕೇವಲ 30 ಲಕ್ಷ ರೂಪಾಯಿ ಮಾತ್ರ ಬಿಡುಗಡೆಯಾಗಿದೆ ಎಂದರು.

ಸರ್ಕಾರದ ಅನುದಾನದ ಕೊರತೆಯಿಂದ ಕಲಾವಿದರಿಗೂ ಬಹಳಷ್ಟು ಕಷ್ಟವಾಗಿದೆ. ಈ ಬಾರಿ ಅನುದಾನದಲ್ಲಿ ಜಾನಪದ ಲೋಕದ ಸಿಬ್ಬಂದಿಗೆ ಸಂಬಳ ಮಾತ್ರ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಕೊರೊನಾದಿಂದ ಸಂಕಷ್ಟದಲ್ಲಿ ಜೀವನ ಸಾಗಿಸುತ್ತಿರುವ ಕಲಾವಿದರ ಬಗ್ಗೆಯೂ ಸರ್ಕಾರ ಗಮನ ಹರಿಸಬೇಕೆಂದು ತಿಮ್ಮೇಗೌಡ ಆಗ್ರಹಿಸಿದರು.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications