Get Updates
Get notified of breaking news, exclusive insights, and must-see stories!

ಜಾನಪದ ಲೋಕದಲ್ಲಿ ವಿಶ್ವ ಜಾನಪದ ದಿನಾಚರಣೆ ಸಂಭ್ರಮ

ರಾಮನಗರ, ಆಗಸ್ಟ್ 24: ಜನಪದರ ತವರು, ಜಾನಪದ ಕಾಶಿ ಎಂಬ ಹೆಗ್ಗಳಿಕೆಯ ಜಾನಪದ ಲೋಕದಲ್ಲಿ ಕೊರೊನಾ ಭೀತಿಯ ನಡುವೆಯೂ ನಿನ್ನೆ ಸಂಜೆ ವಿಶ್ವ ಜಾನಪದ ದಿನಾಚರಣೆಯ ಸಂಭ್ರಮ ಮನೆ ಮಾಡಿತ್ತು.

Recommended Video

      ಜೋಕೆ..!! ಸದ್ಯಕಿಲ್ಲ ಕೊರೋನಾದಿಂದ ಮುಕ್ತಿ | Oneindia Kannada

      ಪ್ರತಿವರ್ಷ ಬಹಳ ಅದ್ಧೂರಿಯಾಗಿ ನಡೆಯುತ್ತಿದ್ದ ಜಾನಪದ ದಿನಾಚರಣೆಯನ್ನು ಈ ಬಾರಿ ಸರಳವಾಗಿ ಆಚರಿಸಲಾಯಿತು. ಪ್ರತಿ ಬಾರಿ ರಾಜ್ಯಾದ್ಯಂತ ಸರಿಸುಮಾರು 30ಕ್ಕೂ ಹೆಚ್ಚು ತಂಡಗಳು ಆಗಮಿಸುತ್ತಿದ್ದವು. ಆದರೆ ಈ ಬಾರಿ ಕಲಾತಂಡಗಳ ಕೊರತೆ ಎದ್ದು ಕಾಣುತ್ತಿತ್ತು. ಆಗಸ್ಟ್‌ 23, ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮೈಸೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಕಲಾವಿದರು ಆಗಮಿಸಿದ್ದರು. ವೀರಗಾಸೆ ಕುಣಿತ, ಡೊಳ್ಳುಕುಣಿತ, ಕಂಸಾಳೆ ಕುಣಿತ, ಜಾನಪದ ಕುಣಿತ ನೋಡುಗರ ಗಮನ ಸೆಳೆಯಿತು.

      ಈ ಸಂದರ್ಭ ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಟಿ.ತಿಮ್ಮೇಗೌಡ ಮಾತನಾಡಿ, ಪ್ರತಿವರ್ಷ ಬಹಳ ಅದ್ಧೂರಿಯಾಗಿ ಜಾನಪದ ಹಬ್ಬ ಆಚರಣೆ ಮಾಡುತ್ತಿದ್ದೆವು. ಆದರೆ ಈ ಬಾರಿ ಕೊರೊನಾದಿಂದ ಕಲಾವಿದರು ಕೂಡ ಅಷ್ಟಾಗಿ ಆಸಕ್ತಿ ತೋರಲಿಲ್ಲ. ಜೊತೆಗೆ ಪ್ರತಿವರ್ಷ ಜಾನಪದ ಲೋಕಕ್ಕೆ ರಾಜ್ಯ ಸರ್ಕಾರದಿಂದ 1 ಕೋಟಿ ರೂಪಾಯಿ ಅನುದಾನ ಬರುತ್ತಿತ್ತು. ಆದರೆ ಈ ಬಾರಿ ಕೇವಲ 30 ಲಕ್ಷ ರೂಪಾಯಿ ಮಾತ್ರ ಬಿಡುಗಡೆಯಾಗಿದೆ ಎಂದರು.

      Ramanagar: World Folk Day Celebrated At Janapada Loka

      ಸರ್ಕಾರದ ಅನುದಾನದ ಕೊರತೆಯಿಂದ ಕಲಾವಿದರಿಗೂ ಬಹಳಷ್ಟು ಕಷ್ಟವಾಗಿದೆ. ಈ ಬಾರಿ ಅನುದಾನದಲ್ಲಿ ಜಾನಪದ ಲೋಕದ ಸಿಬ್ಬಂದಿಗೆ ಸಂಬಳ ಮಾತ್ರ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಕೊರೊನಾದಿಂದ ಸಂಕಷ್ಟದಲ್ಲಿ ಜೀವನ ಸಾಗಿಸುತ್ತಿರುವ ಕಲಾವಿದರ ಬಗ್ಗೆಯೂ ಸರ್ಕಾರ ಗಮನ ಹರಿಸಬೇಕೆಂದು ತಿಮ್ಮೇಗೌಡ ಆಗ್ರಹಿಸಿದರು.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+