ಮರ್ಯಾದಾ ಹತ್ಯೆ: ರಾಮನಗರದಲ್ಲಿ ಮಗಳ ಪ್ರೇಮಿಯನ್ನು ಕೊಂದ ತಂದೆ
ರಾಮನಗರ, ಅಕ್ಟೋಬರ್ 9: ಮಗಳನ್ನು ಪ್ರೀತಿ ಮಾಡುತ್ತಿದ್ದ ಅನ್ಯಧರ್ಮದ ಯುವಕನನ್ನು ಹುಡುಗಿಯ ತಂದೆಯೇ ಕೊಲೆ ಮಾಡಿರುವ ಘಟನೆ ರಾಮನಗರದ ಸೋಲೂರು ಸಮೀಪದ ಕಂಕೇನಹಳ್ಳಿ ಲಾಯದ ದರ್ಗಾ ಬಳಿ ನಡೆದಿದೆ.
ನೆಲಮಂಗಲ ಸಮೀಪದ ಮಾಗಡಿ ತಾಲೂಕಿನ ಕಂಕೇನಹಳ್ಳಿ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ನೆಲಮಂಗಲದ ಬಸವನಹಳ್ಳಿ ನಿವಾಸಿ ಲಕ್ಷ್ಮೀಪತಿ (24) ಕೊಲೆಯಾದ ಯುವಕ ಎಂದು ತಿಳಿದುಬಂದಿದೆ. ಮಗಳೊಂದಿಗೆ ಮದುವೆ ಮಾಡಿಕೊಡುವುದಾಗಿ ಆತನನ್ನು ಕರೆಸಿ ಕೈ ಕಾಲು ಕಟ್ಟಿ ಆತನ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಲಾಗಿದೆ. ಜೊತೆಗೆ ಮದ್ಯದ ಬಾಟಲಿಯಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಕಳೆದ ಮೂರು ವರ್ಷಗಳಿಂದ ಲಕ್ಷ್ಮೀಪತಿ ಹಾಗೂ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಇವರ ಪ್ರೀತಿಯ ವಿಷಯ ಹುಡುಗಿಯ ಕುಟುಂಬಸ್ಥರಿಗೆ ತಿಳಿದಿತ್ತು. ಇದಕ್ಕೆ ಯುವತಿ ಮನೆಯಲ್ಲಿ ವಿರೋಧವೂ ವ್ಯಕ್ತವಾಗಿತ್ತು. ಈ ಮುಂಚೆಯೇ ಈ ಪ್ರೇಮಿಗಳು ಎರಡು ಬಾರಿ ಮನೆ ಬಿಟ್ಟು ಓಡಿ ಹೋಗಿದ್ದರು. ಈ ಸಂಗತಿಯಿಂದಾಗಿ ಯುವತಿ ಕುಟುಂಬದವರು ಲಕ್ಷ್ಮಿಪತಿ ಮೇಲೆ ಆಕ್ರೋಶಗೊಂಡು ಕೊಲೆಗೆ ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ.

ಮಂಗಳವಾರ, ಅ.6 ರಂದು ಯುವತಿಯ ಸಂಬಂಧಿಯೊಬ್ಬ ಲಕ್ಷ್ಮೀಪತಿಗೆ ಕರೆ ಮಾಡಿ ಮದುವೆ ವಿಷಯ ಮಾತನಾಡುವುದಾಗಿ ಇಸ್ಲಾಂಪುರದ ಬಸವನಹಳ್ಳಿ ರಸ್ತೆಯ ವೈನ್ ಶಾಪ್ ವೊಂದಕ್ಕೆ ಬರಲು ತಿಳಿಸಿದ್ದಾನೆ. ನಂತರ ಆತನಿಗೆ ಚೆನ್ನಾಗಿ ಮದ್ಯ ಕುಡಿಸಿ ಯುವತಿಯ ಮನೆಗೆ ಕರೆದೊಯ್ದಿದ್ದಾನೆ. ಅಲ್ಲಿಂದ ಯುವತಿ ತಂದೆ ಹಾಗೂ ಇತರರು ಕಂಕೇನಹಳ್ಳಿ ಬಳಿಯ ಬೆಟ್ಟಕ್ಕೆ ಆತನನ್ನು ಕರೆದೊಯ್ದಿದ್ದಾರೆ. ಅಲ್ಲಿ ಬಲವಂತವಾಗಿ ಮತ್ತಷ್ಟು ಕುಡಿಸಿ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾರೆ. ಲಕ್ಷ್ಮೀಪತಿ ಜೊತೆಗೆ ಬಂದಿದ್ದ ನಟರಾಜ್ ಎಂಬಾತನಿಗೂ ಕೊಲೆ ಬೆದರಿಕೆ ಹಾಕಿ ಕಳುಹಿಸಿದ್ದಾರೆ.
ಈ ಘಟನೆ ಬಗ್ಗೆ ನಟರಾಜ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾನೆ. ಸ್ಥಳಕ್ಕೆ ಕುದೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ತನಿಖೆ ನಡೆಸಿದ್ದಾರೆ. ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ಸಂಬಂಧ ಇಂದು ಯುವತಿ ತಂದೆ ಹಾಗೂ ಸಿಖಂದರ್ ಎಂಬಾತನನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications