ಪಾಂಡಿಚೆರಿ ಟು ಮುಂಬೈ; ಸಂಸ್ಕೃತಿ ಅರಿಯಲು 70 ದಿನ, 1400 ಕಿ.ಮೀ ಕಾಲ್ನಡಿಗೆ!
ರಾಮನಗರ, ಫೆಬ್ರವರಿ 06: ನಮ್ಮ ದೇಶ ಹಲವು ವಿಭಿನ್ನ ಸಂಸ್ಕೃತಿಗಳ ನೆಲೆ. ಪ್ರತಿ ರಾಜ್ಯದಲ್ಲೂ ಭಾಷೆ, ಕಲೆ, ಪರಿಸರ ವಿಭಿನ್ನ. ವಿಭಿನ್ನತೆಯೇ ಈ ದೇಶವನ್ನು ಸುಂದರವಾಗಿಸಿದೆ ಕೂಡ. ಈ ಒಂದು ಸಂಸ್ಕೃತಿಯ ಸೌಂದರ್ಯವನ್ನು ಅರಿಯಲು ಇಬ್ಬರು ಪಯಣ ಬೆಳೆಸಿದ್ದಾರೆ. ಪಾಂಡಿಚೆರಿಯಿಂದ ಮುಂಬೈಗೆ ಕಾಲ್ನಡಿಗೆಯಲ್ಲಿ ಪಯಣ ಬೆಳೆಸಿದ್ದು, 1400 ಕಿ.ಮೀಗಳ ಪಾದಯಾತ್ರೆ ಹೊರಟಿದ್ದಾರೆ.
70 ದಿನಗಳ ಕಾಲ ಮೊಬೈಲ್ ಇಲ್ಲದೇ, ಹಣವೂ ಇಲ್ಲದೆ ಪಯಣ ಬೆಳೆಸುತ್ತಿರುವ ಇವರು ಉತ್ತರಾಖಂಡದ ಸಮಾಜ ಸೇವಕ ಅಂಕಿತ್ ದಾಸ್ ಹಾಗೂ ಮಹಾರಾಷ್ಟ್ರದ ಲೇಖಕಿ ನೈನಿಕ ಭಟ್ಯ. ಈಗಾಗಲೇ ನೈನಿಕ ಭಟ್ಯ ಹಾಗೂ ಅಂಕಿತದಾಸ್ 550 ಕಿ.ಮೀ. ಪಯಣ ಮುಗಿಸಿದ್ದು ತಮಿಳುನಾಡು, ಆಂಧ್ರ ಮುಗಿಸಿ ಕರ್ನಾಟಕಕ್ಕೆ ಬಂದಿದ್ದಾರೆ. ಬೆಂಗಳೂರಿನಿಂದ ಮಾಗಡಿಗೆ ಆಗಮಿಸಿ ಕುಣಿಗಲ್ ಮಾರ್ಗದ ಮೂಲಕ ಪಯಣ ಬೆಳೆಸುವಾಗ ಮಾತಿಗೆ ಸಿಕ್ಕಿದ್ದಾರೆ

ಹಣ, ಮೊಬೈಲ್ ಇಲ್ಲದೇ ಪಯಣ
1400 ಕಿಲೋ ಮೀಟರ್ ಪಯಣ ಕೈಗೊಂಡಿರುವ ಅಂಕಿತದಾಸ್ ಹಾಗೂ ನೈನಿಕ ಭಟ್ಯ ಬಳಿ ನಯಾಪೈಸೆ ಹಣವಿಲ್ಲ. ಮೊಬೈಲ್ ಸಹ ಇಲ್ಲ. ಯಾವುದೇ ಮ್ಯಾಪ್ ಇಲ್ಲ. 2 ಬ್ಯಾಗ್, ನೀರಿನ ಬಾಟಲಿ, ಕೆಲವು ಬಟ್ಟೆಗಳು, 2 ತಟ್ಟೆಯನ್ನು ಹಿಡಿದು ಪಯಣ ಆರಂಭಿಸಿದ್ದಾರೆ. ಪಯಣದ ದಾರಿಯಲ್ಲಿ ಯಾರು ಇವರಿಗೆ ಊಟ ಹಾಕುತ್ತಾರೋ ಅಲ್ಲೆ ಇವರಿಗೆ ಊಟ. ಕತ್ತಲಾದ ಮೇಲೆ ಯಾರು ಇವರಿಗೆ ಮಲಗಲು ಅವಕಾಶ ಕೊಡುತ್ತಾರೋ ಅಲ್ಲೇ ಇವರ ನಿದ್ದೆ. ಇಲ್ಲದಿದ್ದರೆ ದೇವಸ್ಥಾನ, ಶಾಲೆಗಳಲ್ಲಿ ಮಲಗಿ ನಂತರ ಪಯಣ ಆರಂಭಿಸುತ್ತಾರೆ.

ಕುಣಿಗಲ್ ಮೂಲಕ ಮುಂದುವರೆಯುವ ಪಯಣ
ಸದ್ಯಕ್ಕೆ ಇವರು ಪಯಣಿಸಿರುವ ಎಲ್ಲಾ ಕಡೆಯು ಜನರು ಅತಿಥಿಗಳಂತೆ ಇವರನ್ನು ಬರಮಾಡಿಕೊಂಡಿದ್ದಾರೆ. ಪ್ರತಿ ದಿನವು 3 ಹೊತ್ತು ಊಟ ಸಿಗುತ್ತಿದೆ. ಒಂದೊಂದು ದಿನ ಹೆಚ್ಚಿಗೆ ಊಟ ಸಿಕ್ಕಿದ್ದೂ ಇದೆ ಎಂದು ಹೇಳುತ್ತಾರೆ ಅಂಕಿತ್ ದಾಸ್. ತಮಿಳುನಾಡು ಮತ್ತು ಆಂಧ್ರದಲ್ಲಿ ಇವರ ಈ ಪಯಣಕ್ಕೆ ಉತ್ತಮ ಸ್ಪಂದನೆ ಸಿಕ್ಕಿದ. ಈಗ ಕರ್ನಾಟಕದಿಂದ ಪಯಣ ಆರಂಭ ಮಾಡಿದ್ದು, ಬೆಂಗಳೂರಿನಿಂದ ಮಾಗಡಿಗೆ ಆಗಮಿಸಿ ಕುಣಿಗಲ್ ಮಾರ್ಗದ ಮೂಲಕ ಪಯಣ ಮುಂದುವರೆಸಿದ್ದಾರೆ. ಕರ್ನಾಟಕವನ್ನು, ಇಲ್ಲಿನ ಜನರ ಆತಿಥ್ಯವನ್ನು ಇಬ್ಬರೂ ಮೆಚ್ಚಿದ್ದಾರೆ. "ಎಲ್ಲ ಕಡೆಯೂ ನಮ್ಮನ್ನು ಪ್ರೀತಿಯಿಂದಲೇ ಕಾಣುತ್ತಿದ್ದಾರೆ" ಎಂದು ನೈನಿಕ ಭಟ್ಯ ಸಂತೋಷದಿಂದ ಹೇಳುತ್ತಾರೆ.

ಸ್ಥಳದ ಸಂಸ್ಕೃತಿ, ವಿಶೇಷತೆಗಳ ದಾಖಲೆ
ಮೊಬೈಲ್ ಮತ್ತು ಹಣವಿಲ್ಲದೆ ಪಯಣ ಬೆಳೆಸುತ್ತಿರುವ ಇವರು ಯಾವ ರಾಜ್ಯದಲ್ಲಿದ್ದೇವೆಂಬುದರ ಕುರಿತು ಅಂಕಿತ್ ದಾಸ್ ಗೆಳತಿಯೊಬ್ಬರಿಗೆ ಜನರ ಮೊಬೈಲ್ ಮೂಲಕ ಸಂಪರ್ಕಿಸಿ ತಿಳಿಸುತ್ತಾರೆ. ತಾವು ಹೋಗುವ ಸ್ಥಳ, ಅಲ್ಲಿನ ಸಂಸ್ಕೃತಿ, ವಿಶೇಷತೆಗಳನ್ನು ಡೈರಿಯಲ್ಲಿ ದಾಖಲಿಸಿಕೊಳ್ಳುತ್ತಿದ್ದಾರೆ. ಅಲ್ಲದೇ ಅಲ್ಲಿನ ಕಲೆ, ಸಂಸ್ಕೃತಿಗಳ ಬಗ್ಗೆ ಜನಗಳಿಂದ ಮಾಹಿತಿ ಪಡೆಯುತ್ತಿದ್ದಾರೆ.

ಇಂಗ್ಲಿಷ್, ಹಿಂದಿ ಇವರ ಭಾಷೆ
ಇವರಿಗೆ ಇಂಗ್ಲೀಷ್, ಹಿಂದಿ ಬಿಟ್ಟರೆ ಬೇರೆ ಭಾಷೆ ಗೊತ್ತಿಲ್ಲ. ಕರ್ನಾಟಕಕ್ಕೆ ಬಂದಿರುವ ನೈನಿಕ ಭಟ್ಯ ಸ್ವಲ್ಪ ಸ್ವಲ್ಪ ಕನ್ನಡವನ್ನು ಕಲಿತು ಜನಗಳ ಜೊತೆ ಸಂಪರ್ಕ ಮಾಡಿ ತಮ್ಮ ಉದ್ದೇಶವನ್ನು ತಿಳಿಸಿ ಊಟ ಮತ್ತು ಮಲಗಲು ಆಶ್ರಯ ಪಡೆಯುತ್ತಿದ್ದಾರೆ. ಕೆಲವೇ ದಿನಗಳಿಂದ ಕರ್ನಾಟಕದ ಸಂಪರ್ಕವನ್ನು ಹೊಂದಿರುವ ನೈನಿಕ ಭಟ್ಯ ಕನ್ನಡ ಕಲಿತಿರುವುದು ಹೆಮ್ಮೆಯ ವಿಚಾರವಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications