Breaking:ಪ್ರೀತಿ ನಿರಾಕರಿಸಿದ ಯುವತಿಗೆ ಚಾಕು ಇರಿದು, ತಾನೂ ಕುತ್ತಿಗೆ ಕೊಯ್ದಕೊಂಡು ಪಾಗಲ್ ಪ್ರೇಮಿ
ರಾಮನಗರ, ಸೆಪ್ಟೆಂಬರ್ 13: ಪಾಗಲ್ ಪ್ರೇಮಿಯೊಬ್ಬ ತನ್ನನ್ನು ಪ್ರೀತಿ ಮಾಡಲು ನಿರಾಕರಿಸಿದ ಯುವತಿಗೆ ಚಾಕುವಿನಿಂದ ಇರಿದು, ತಾನು ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚನ್ನಪಟ್ಟಣದ ಕೋಟೆ ಬಡವಾಣೆಯಲ್ಲಿ ನಡೆದಿದೆ.
ರಾಮನಗರದ ಸಂಗೀತ ಮೊಬೈಲ್ಸ್ ಶೋ ರೂಂ ಮೇಘನಾ ಜೊತೆ ಕೆಲಸ ಮಾಡುತ್ತಿದ್ದ ರಾಮನಗರದ ನಿವಾಸಿ ವೆಂಕಟೇಶ್ ಎಂಬಾತ ಯುವತಿಗೆ ಚಾಕು ಹಾಕಿ ತಾನು ಚಾಕುವಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇನ್ನೂ ಹಲ್ಲೆಗೊಳಗಾದ ಯುವತಿ ಮೇಘನಾ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎನ್ನಲಾಗಿದೆ.
ಬೊಂಬೆ ನಾಡು ಖ್ಯಾತಿಯ ಚನ್ನಪಟ್ಟಣದ ಕೋಟೆ ಬಡವಾಣೆಯ ವರದರಾಜ ಸ್ವಾಮಿ ದೇವಾಲಯದ ಸಮೀಪದಲ್ಲಿರುವ ಮೇಘನಾ ಎಂಬ ಯುವತಿ ಮನೆಗೆ ನುಗ್ಗಿದ ಹುಚ್ಚು ಪ್ರೇಮಿ ವೆಂಕಟೇಶ ತನ್ನನ್ನು ಪ್ರೀತಿಸುವಂತೆ ಒತ್ತಾಯಿಸಿದ್ದಾನೆ. ಮೇಘನಾ ಪ್ರೀತಿ ನಿರಾಕರಿಸಿದ್ದಕ್ಕೆ ಭಗ್ನ ಪ್ರೇಮಿ ವೆಂಕಟೇಶ್ ಚಾಕುವಿನಿಂದ ಯುವತಿಯ ಹೊಟ್ಟೆಗೆ ಹಾಗೂ ಬೆನ್ನಿನ ಭಾಗಕ್ಕೆ ಇರಿದು ತಾನು ಕೂಡ ಕುತ್ತಿಗೆ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಆತ್ಮಹತ್ಯೆಗೆ ಯತ್ನಿಸಿ ಚಿಂತಾ ಜನಕವಾಗಿದ್ದ ವೆಂಕಟೇಶನನ್ನು ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಡ್ಯದ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚನ್ನಪಟ್ಟಣ ಸಿಟಿ ಪೊಲೀಸ್ ಠಾಣೆಯ ಪೋಲಿಸರು ಪ್ರಕರಣ ದಾಖಲಿಸಿಕೊಂಡು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಳೆದ ಎರಡು- ಮೂರು ವರ್ಷಗಳ ಹಿಂದೆ ಮೊಬೈಲ್ ಶೋರೂಂ ನಲ್ಲಿ ವೆಂಕಟೇಶ್ ಮತ್ತು ಮೇಘನ ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಮೇಘನಾಳನ್ನು ಇಷ್ಟಪಟ್ಟಿದ್ದ ವೆಂಕಟೇಶ್, ಮೇಘನಾ ಬಳಿ ಹಲವಾರು ಬಾರಿ ತನ್ನ ಪ್ರೇಮ ನಿವೇದನೆಯನ್ನು ಮಾಡಿಕೊಂಡಿದ್ದ. ಆದರೆ, ಮೇಘನಾ ವೆಂಕಟೇಶನ ಪ್ರೀತಿಯನ್ನು ನಿರಾಕರಿಸಿದ್ದಳು.
ವೆಂಕಟೇಶನ ಒತ್ತಾಯಿಸಿದ ಹಿನ್ನಲೆಯಲ್ಲಿ ಮೇಘನಾ ಇತ್ತೀಚೆಗೆ ಮೊಬೈಲ್ ಶೋರೂಂ ನಲ್ಲಿ ಕೆಲಸ ಬಿಟ್ಟು ಬೆಂಗಳೂರಿನ ಜ್ಯುವೆಲರಿ ಶಾಪ್ಗೆ ಕೆಲಸಕ್ಕೆ ತೆರಳುತ್ತಿದ್ದಳು ಮಂಗಳವಾರ ಮೇಘನಾ ಮನೆಯಲ್ಲಿರುವ ವಿಚಾರ ತಿಳಿದು ಮನೆಗೆ ತೆರಳಿದ ವೆಂಕಟೇಶ ಕೃತ್ಯ ಎಸಗಿದ್ದಾನೆ.
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications