ಎಚ್.ಡಿ.ಕುಮಾರಸ್ವಾಮಿಗೆ ಸೆಡ್ಡು ಹೊಡೆದ ಜಮೀರ್ ಅಹಮದ್
ರಾಮನಗರ, ಏಪ್ರಿಲ್ 29 : ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಒಂದು ಕಾಲದ ಗೆಳೆಯ ಜಮೀರ್ ಅಹಮದ್ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿ ಇದೀಗ ಚನ್ನಪಟ್ಟಣದ ಮುಸ್ಲಿಂ ಬಡಾವಣೆಗಳಲ್ಲಿ ಕಾಂಗ್ರೆಸ್ ಪರ ಚುನಾವಣಾ ಪ್ರಚಾರ ಮಾಡುವ ಮೂಲಕ ಎಚ್ ಡಿಕೆಗೆ ಸೆಡ್ಡು ಹೊಡೆದಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಎಚ್.ಎಂ.ರೇವಣ್ಣ ಪರವಾಗಿ ಚುನಾವಣಾ ಪ್ರಚಾರ ನಡೆಸಿದ ಜಮೀರ್ ಅಹಮದ್, ಮುಸ್ಲಿಂ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ನಗರದ ಪ್ರಮುಖ ಮುಸ್ಲಿಂ ವಾರ್ಡ್ ಗಳಲ್ಲಿ ತೆರೆದ ವಾಹನದಲ್ಲಿ ಅಬ್ಬರದ ಪ್ರಚಾರ ನಡೆಸಿದರು.
ಜಮೀರ್ ಗೆ ಕಾಂಗ್ರೆಸ್ ಅಭ್ಯರ್ಥಿ ಎಚ್.ಎಂ.ರೇವಣ್ಣ ಸಾಥ್ ನೀಡಿದರು. ಇದೇ ವೇಳೆ ಜೆಡಿಎಸ್ ತೊರೆದು ಐದು ಜನ ಹಾಲಿ ನಗರಸಭಾ ಸದಸ್ಯರು ಜಮೀರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್, ಕ್ಷೇತ್ರದ ಜನರಲ್ಲಿ ಆತಂಕವಿದ್ದು, ಕುಮಾರಸ್ವಾಮಿ ರಾಮನಗರ ಹಾಗೂ ಚನ್ನಪಟ್ಟಣ ಎರಡೂ ಕ್ಷೇತ್ರಗಳಲ್ಲಿ ಯಾಕೆ ಸ್ಪರ್ಧಿಸಬೇಕಿತ್ತು? ಚನ್ನಪಟ್ಟಣಕ್ಕೆ ಅವರ ಕೊಡುಗೆ ಏನು? ಅವರು ಗೆದ್ದರೂ ರಾಜೀನಾಮೆ ನೀಡ್ತಾರೆ. ಅವರನ್ನ ನೋಡಿ ನಮಗೆ ಸಾಕಾಗಿದೆ. ಚನ್ನಪಟ್ಟಣ ಜನತೆಗೆ ಬೈ ಎಲೆಕ್ಷನ್ ಗಳನ್ನ ನೋಡಿ ನೋಡಿ ಸಾಕಾಗಿದೆ ಎಂದು ಟಾಂಗ್ ಕೊಟ್ಟರು.
ಸಿ.ಪಿ.ಯೋಗೇಶ್ವರ್ ನನಗೆ ಯಾವತ್ತೂ ಸ್ನೇಹಿತರಲ್ಲ. ನಾನು ಅವರಿಗೆ ಯಾವತ್ತಿದ್ದರೂ ವಿರೋಧಿ ಎಂದು ಗುಡುಗಿದರು. ನಾನು ಚನ್ನಪಟ್ಟಣ ಕ್ಷೇತ್ರದ ಮುಸ್ಲಿಮರ ಮನೆ ಮಗ ಇದ್ದ ಹಾಗೆ, ಕ್ಷೇತ್ರದಲ್ಲಿ ನನ್ನನು ಪ್ರೀತಿಸುವ ಜನರಿದ್ದಾರೆ. ಅವರೆಲ್ಲ ಕಾಂಗ್ರೆಸ್ ಬೆಂಬಲಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
-
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್












Click it and Unblock the Notifications