ಮಹಿಳೆ ಮೇಲೆ ಅತ್ಯಾಚಾರವೆಸಗಿ ಗುಪ್ತಾಂಗಕ್ಕೆ ಲೋಟ ತುರುಕಿದ ದುಷ್ಕರ್ಮಿಗಳು
ರಾಂಚಿ, ಜನವರಿ 09: ಮೊನ್ನೆ ಮೊನ್ನೆಯಷ್ಟೇ ಉತ್ತರ ಪ್ರದೇಶದಲ್ಲಿ 50 ವರ್ಷದ ಅಂಗನವಾಡಿ ಕಾರ್ಯಕರ್ತೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಬರ್ಬರ ಹತ್ಯೆ ನಡೆಸಲಾಗಿತ್ತು. ಈ ಘಟನೆ ಬೆನ್ನಲ್ಲೇ ಜಾರ್ಖಂಡ್ ನಲ್ಲೂ ಅಂಥದ್ದೇ ಘಟನೆ ವರದಿಯಾಗಿದೆ.
ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯ ಗುಪ್ತಾಂಗಕ್ಕೆ ಸ್ಟೀಲ್ ಲೋಟ ತುರುಕಿ ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ಜಾರ್ಖಂಡ್ ನ ಛಾತ್ರ ಜಿಲ್ಲೆಯಲ್ಲಿ ಗುರುವಾರ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಮತ್ತೊಬ್ಬ ತಲೆ ಮರೆಸಿಕೊಂಡಿದ್ದಾನೆ. ಹಂಟರ್ ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಹಳೆ ಜಗಳವನ್ನೇ ಮುಂದಿಟ್ಟುಕೊಂಡು ಮಹಿಳೆಯೊಂದಿಗೆ ಗುರುವಾರ ರಾತ್ರಿ ಮತ್ತೆ ಜಗಳ ತೆಗೆದ ಮೂವರು, ಮಾತಿಗೆ ಮಾತು ಬೆಳೆದು ಆಕೆ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಡಿಐಜಿ ಅಮೋಲ್ ಹೋಂಕಾರ್ ತಿಳಿಸಿದ್ದಾರೆ.

"ಈ ಹಿಂದೆ ಮೇಕೆ ವಿಷಯಕ್ಕೆ ಜಗಳವಾಗಿತ್ತು. ನನ್ನ ಮನೆ ಸಮೀಪ ಗುರುವಾರ ರಾತ್ರಿ ಜಮೀನಿಗೆ ತೆರಳಿದ್ದ ಸಂದರ್ಭ ನನ್ನ ಮೇಲೆ ಮೂವರು ಅತ್ಯಾಚಾರ ನಡೆಸಿದ್ದಾರೆ. ನನ್ನ ಗುಪ್ತಾಂಗಕ್ಕೆ ಲೋಟ ತುರುಕಿ ಹಿಂಸೆ ನೀಡಿದರು" ಎಂದು ಮಹಿಳೆ ಆಸ್ಪತ್ರೆಯಲ್ಲಿ ಹೇಳಿಕೆ ನೀಡಿದ್ದಾರೆ. ನರಳಾಡುತ್ತಿದ್ದ ಆಕೆಯನ್ನು ನೆರೆಹೊರೆಯವರು ಆಸ್ಪತ್ರೆಗೆ ದಾಖಲಿಸಿದ್ದು, ಮಹಿಳೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.
ನಿರ್ಭಯಾ, ಹತ್ರಾಸ್ ಅತ್ಯಾಚಾರದ ಕ್ರೌರ್ಯ ಘಟನೆ ಇನ್ನೂ ಕಣ್ಣ ಮುಂದಿರುವಾಗಲೇ ಮತ್ತೆ ಮತ್ತೆ ಇಂಥ ಘಟನೆಗಳು ಮರುಕಳಿಸುತ್ತಿವೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications