Breaking: ಜಾರ್ಖಂಡ್: ಇಡಿ ದಾಳಿ ವೇಳೆ ಎರಡು ಎಕೆ-47 ರೈಫಲ್ ವಶ
ರಾಂಚಿ, ಆಗಸ್ಟ್ 24: 100 ಕೋಟಿ ಗಣಿ ಹಗರಣದ ತನಿಖೆಯ ಭಾಗವಾಗಿ ನಡೆಯುತ್ತಿರುವ ದಾಳಿಯ ವೇಳೆ ಜಾರಿ ನಿರ್ದೇಶನಾಲಯ (ಇಡಿ) ಜಾರ್ಖಂಡ್ನ ರಾಂಚಿಯ ಮನೆಯೊಂದರಿಂದ ಎರಡು ಎಕೆ-47 ರೈಫಲ್ಗಳನ್ನು ವಶಪಡಿಸಿಕೊಂಡಿದೆ.
ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಆಪ್ತ ಪ್ರೇಮ್ ಪ್ರಕಾಶ್ ಅವರಿಗೆ ಹಗರಣದಲ್ಲಿ ನಂಟು ಇದೆ ಎಂದು ಹೇಳಲಾಗಿದ್ದು, ದಾಳಿ ವೇಳೆ ಪ್ರೇಮ್ ಪ್ರಕಾಶ್ ಅವರ ಮನೆಯಿಂದ ಇಡಿ ಎಕೆ 47 ಅನ್ನು ವಶಪಡಿಸಿಕೊಂಡಿದೆ.
ಈ ಬಂದೂಕುಗಳು ಕಾನೂನುಬಾಹಿರವೇ ಎಂಬುದು ತಕ್ಷಣವೇ ಸ್ಪಷ್ಟವಾಗಿಲ್ಲ, ಆದರೆ ಕೇಂದ್ರ ಸಂಸ್ಥೆ ಅವುಗಳನ್ನು ತನ್ನ ವಶಕ್ಕೆ ತೆಗೆದುಕೊಂಡಿದೆ. ಈ ಬಗ್ಗೆ ಪ್ರಕಾಶ್ ಆಗಲಿ, ಸೋರೆನ್ ಆಗಲಿ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಜಾರ್ಖಂಡ್, ನೆರೆಯ ಬಿಹಾರ, ತಮಿಳುನಾಡು ಮತ್ತು ದೆಹಲಿ-ಎನ್ಸಿಆರ್ನ 20 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ದಾಳಿ ನಡೆಸುತ್ತಿದೆ. 100 ಕೋಟಿ ಗಣಿ ಹಗರಣದ ಪ್ರಕರಣವು ಪ್ರಾಥಮಿಕವಾಗಿ ಅಕ್ರಮ ಗಣಿಗಾರಿಕೆ ಮತ್ತು ಸುಲಿಗೆಗೆ ಸಂಬಂಧಿಸಿದೆ.
ಮುಖ್ಯಮಂತ್ರಿ ಸೋರೆನ್ ಅವರ ರಾಜಕೀಯ ಸಹಾಯಕರಾದ ಪಂಕಜ್ ಮಿಶ್ರಾ ಮತ್ತು ಶ್ರೀಮಿಶ್ರಾ ಅವರ ಸಹವರ್ತಿ ಬಚ್ಚು ಯಾದವ್ ಅವರು ಇಡಿಗೆ ಹೊಸ ಮಾಹಿತಿಯನ್ನು ನೀಡಿದ ನಂತರ ಬುಧವಾರ ಶೋಧಕಾರ್ಯ ನಡೆದಿವೆ. ಅವರು ದೀರ್ಘಕಾಲದಿಂದ ಬಂಧನದಲ್ಲಿದ್ದಾರೆ.
ಜುಲೈ8 ರಂದು ಜಾರ್ಖಂಡ್ನಾದ್ಯಂತ ಪಂಕಜ್ ಮಿಶ್ರಾ ಮತ್ತು ಅವರ ಸಹಚರರ ಸ್ಥಳಗಳು ಸೇರಿದಂತೆ 19 ಸ್ಥಳಗಳ ಮೇಲೆ ಇಡಿ ದಾಳಿ ನಡೆಸಿತು. ತನಿಖಾ ಸಂಸ್ಥೆಯು ಮಾರ್ಚ್ನಲ್ಲಿ ಶ್ರೀಮಿಶ್ರಾ ಮತ್ತು ಇತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿತ್ತು.
ಜುಲೈ ದಾಳಿಯ ನಂತರ ಇಡಿ 50 ಬ್ಯಾಂಕ್ ಖಾತೆಗಳಲ್ಲಿ ₹ 13.32 ಕೋಟಿಯನ್ನು ವಶಪಡಿಸಿಕೊಂಡಿದೆ. ಅಕ್ರಮ ಗಣಿಗಾರಿಕೆಯಿಂದ ₹ 100 ಕೋಟಿಯಷ್ಟು 'ಅಪರಾಧದ ಆದಾಯ'ದ ಜಾಡು ಹಿಡಿದು ತನಿಖೆ ನಡೆಸುತ್ತಿರುವುದಾಗಿ ಇಡಿ ಹೇಳಿತ್ತು.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications