Breaking: ಜಾರ್ಖಂಡ್: ಇಡಿ ದಾಳಿ ವೇಳೆ ಎರಡು ಎಕೆ-47 ರೈಫಲ್ ವಶ
ರಾಂಚಿ, ಆಗಸ್ಟ್ 24: 100 ಕೋಟಿ ಗಣಿ ಹಗರಣದ ತನಿಖೆಯ ಭಾಗವಾಗಿ ನಡೆಯುತ್ತಿರುವ ದಾಳಿಯ ವೇಳೆ ಜಾರಿ ನಿರ್ದೇಶನಾಲಯ (ಇಡಿ) ಜಾರ್ಖಂಡ್ನ ರಾಂಚಿಯ ಮನೆಯೊಂದರಿಂದ ಎರಡು ಎಕೆ-47 ರೈಫಲ್ಗಳನ್ನು ವಶಪಡಿಸಿಕೊಂಡಿದೆ.
ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಆಪ್ತ ಪ್ರೇಮ್ ಪ್ರಕಾಶ್ ಅವರಿಗೆ ಹಗರಣದಲ್ಲಿ ನಂಟು ಇದೆ ಎಂದು ಹೇಳಲಾಗಿದ್ದು, ದಾಳಿ ವೇಳೆ ಪ್ರೇಮ್ ಪ್ರಕಾಶ್ ಅವರ ಮನೆಯಿಂದ ಇಡಿ ಎಕೆ 47 ಅನ್ನು ವಶಪಡಿಸಿಕೊಂಡಿದೆ.
ಈ ಬಂದೂಕುಗಳು ಕಾನೂನುಬಾಹಿರವೇ ಎಂಬುದು ತಕ್ಷಣವೇ ಸ್ಪಷ್ಟವಾಗಿಲ್ಲ, ಆದರೆ ಕೇಂದ್ರ ಸಂಸ್ಥೆ ಅವುಗಳನ್ನು ತನ್ನ ವಶಕ್ಕೆ ತೆಗೆದುಕೊಂಡಿದೆ. ಈ ಬಗ್ಗೆ ಪ್ರಕಾಶ್ ಆಗಲಿ, ಸೋರೆನ್ ಆಗಲಿ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಜಾರ್ಖಂಡ್, ನೆರೆಯ ಬಿಹಾರ, ತಮಿಳುನಾಡು ಮತ್ತು ದೆಹಲಿ-ಎನ್ಸಿಆರ್ನ 20 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ದಾಳಿ ನಡೆಸುತ್ತಿದೆ. 100 ಕೋಟಿ ಗಣಿ ಹಗರಣದ ಪ್ರಕರಣವು ಪ್ರಾಥಮಿಕವಾಗಿ ಅಕ್ರಮ ಗಣಿಗಾರಿಕೆ ಮತ್ತು ಸುಲಿಗೆಗೆ ಸಂಬಂಧಿಸಿದೆ.
ಮುಖ್ಯಮಂತ್ರಿ ಸೋರೆನ್ ಅವರ ರಾಜಕೀಯ ಸಹಾಯಕರಾದ ಪಂಕಜ್ ಮಿಶ್ರಾ ಮತ್ತು ಶ್ರೀಮಿಶ್ರಾ ಅವರ ಸಹವರ್ತಿ ಬಚ್ಚು ಯಾದವ್ ಅವರು ಇಡಿಗೆ ಹೊಸ ಮಾಹಿತಿಯನ್ನು ನೀಡಿದ ನಂತರ ಬುಧವಾರ ಶೋಧಕಾರ್ಯ ನಡೆದಿವೆ. ಅವರು ದೀರ್ಘಕಾಲದಿಂದ ಬಂಧನದಲ್ಲಿದ್ದಾರೆ.
ಜುಲೈ8 ರಂದು ಜಾರ್ಖಂಡ್ನಾದ್ಯಂತ ಪಂಕಜ್ ಮಿಶ್ರಾ ಮತ್ತು ಅವರ ಸಹಚರರ ಸ್ಥಳಗಳು ಸೇರಿದಂತೆ 19 ಸ್ಥಳಗಳ ಮೇಲೆ ಇಡಿ ದಾಳಿ ನಡೆಸಿತು. ತನಿಖಾ ಸಂಸ್ಥೆಯು ಮಾರ್ಚ್ನಲ್ಲಿ ಶ್ರೀಮಿಶ್ರಾ ಮತ್ತು ಇತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿತ್ತು.
ಜುಲೈ ದಾಳಿಯ ನಂತರ ಇಡಿ 50 ಬ್ಯಾಂಕ್ ಖಾತೆಗಳಲ್ಲಿ ₹ 13.32 ಕೋಟಿಯನ್ನು ವಶಪಡಿಸಿಕೊಂಡಿದೆ. ಅಕ್ರಮ ಗಣಿಗಾರಿಕೆಯಿಂದ ₹ 100 ಕೋಟಿಯಷ್ಟು 'ಅಪರಾಧದ ಆದಾಯ'ದ ಜಾಡು ಹಿಡಿದು ತನಿಖೆ ನಡೆಸುತ್ತಿರುವುದಾಗಿ ಇಡಿ ಹೇಳಿತ್ತು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications