Breaking; ಲಾಲೂ ಪ್ರಸಾದ್ ಯಾದವ್ಗೆ ಜಾಮೀನು ಮಂಜೂರು
ರಾಂಚಿ, ಏಪ್ರಿಲ್ 22; ಮೇವು ಹಗರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ಗೆ ಜಾಮೀನು ಸಿಕ್ಕಿದೆ. ಜಾರ್ಖಂಡ್ ಹೈಕೋರ್ಟ್ ಆರೋಗ್ಯದ ಕಾರಣವನ್ನು ಪರಿಗಣಿಸಿ ಜಾಮೀನು ಮಂಜೂರು ಮಾಡಿದೆ.
ಶುಕ್ರವಾರ ಜಾರ್ಖಂಡ್ ಹೈಕೋರ್ಟ್ ಲಾಲೂ ಪ್ರಸಾದ್ ಯಾದವ್ಗೆ ಜಾಮೀನು ಮಂಜೂರು ಮಾಡಿದೆ. 1 ಲಕ್ಷ ರೂ. ಬಾಂಡ್ ನೀಡಬೇಕು, 10 ಲಕ್ಷ ರೂ. ದಂಡ ಮೊತ್ತವನ್ನು ಪಾವತಿ ಮಾಡಬೇಕು ಎಂದು ಆದೇಶಿಸಿದೆ.

ಎನ್ಎನ್ಐ ಜೊತೆ ಮಾತನಾಡಿದ ಲಾಲೂ ಪ್ರಸಾದ್ ಪರ ವಕೀಲರು ಶೀಘ್ರವೇ ಅವರು ಬಿಡುಗಡೆಯಾಗಲಿದ್ದಾರೆ ಎಂದು ಹೇಳಿದ್ದಾರೆ. ಮೇವು ಹಗರಣದ ವಿವಿಧ ಪ್ರಕರಣದಲ್ಲಿ ಜೈಲುವಾಸದಲ್ಲಿರುವ ಲಾಲೂ ಪ್ರಸಾದ್ ಯಾದವ್ ಆರೋಗ್ಯ ಹದಗೆಟ್ಟಿತ್ತು.
2021ರ ಫೆಬ್ರವರಿಯಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ಬಹುಕೋಟಿ ರೂಪಾಯಿ ಮೇವು ಹಗರಣದಲ್ಲಿ ಲಾಲೂ ಪ್ರಸಾದ್ ಯಾದವ್ ಅಪರಾಧಿ ಎಂದು ತೀರ್ಪು ನೀಡಿತ್ತು. 5 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು, 60 ಲಕ್ಷ ರೂ. ದಂಡ ಹಾಕಿತ್ತು.
ಇದಕ್ಕೂ ಮೊದಲು ಧುಮ್ಕಾ ಖಜಾನೆಯಿಂದ ಹಣ ವರ್ಗಾವಣೆ ಪ್ರಕರಣದಲ್ಲಿ 14 ವರ್ಷಗಳ ಜೈಲು ಶಿಕ್ಷೆ ಘೋಷಿಸಲಾಗಿತ್ತು. ಸಿಬಿಐ ಕೋರ್ಟ್ ಶಿಕ್ಷೆ ಘೋಷಣೆ ಬಳಿಕ ಲಾಲೂ ಪ್ರಸಾದ್ ಯಾದವ್ ಬಿರ್ಸಾ ಮುಂಡಾ ಜೈಲಿನಲ್ಲಿದ್ದರು. ಬಳಿಕ ರಾಂಚಿಯ ಜೈಲಿಗೆ ಸ್ಥಳಾಂತರಗೊಂಡಿದ್ದರು.
ಬಹುಕೋಟಿ ರೂಪಾಯಿ ಮೇವು ಹಗರಣಕ್ಕೆ ಸಂಬಂಧಿಸಿದಂತೆ ಒಟ್ಟು 5 ಪ್ರಕರಣ ದಾಖಲಾಗಿದೆ. ಎಲ್ಲಾ ಪ್ರಕರಣದಲ್ಲಿಯೂ ಲಾಲೂ ಪ್ರಸಾದ್ ಯಾದವ್ ಮುಖ್ಯ ಅಪರಾಧಿ. ಮೇವು ಹಗರಣದಲ್ಲಿ ಒಟ್ಟು 99 ಆರೋಪಿಗಳಿದ್ದರು. 24 ಆರೋಪಿಗಳು ಖುಲಾಸೆಗೊಂಡಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications