Breaking: ಮೇವು ಹಗರಣ: ಲಾಲೂ ಪ್ರಸಾದ್ ಯಾದವ್ಗೆ 5 ವರ್ಷ ಜೈಲು ಶಿಕ್ಷೆ
ರಾಂಚಿ, ಫೆಬ್ರವರಿ 21: ಬಹುಕೋಟಿ ರೂಪಾಯಿ ಮೇವು ಹಗರಣದಲ್ಲಿ ದೋಷಿ ಎಂದು ಸಾಬೀತಾಗಿದ್ದ ಲಾಲೂ ಪ್ರಸಾದ್ ಯಾದವ್ಗೆ 5 ವರ್ಷಗಳ ಕಾಲ ಕಾರಾಗೃಹ ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯವು ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ದೋಷಿ ಎಂದು ತೀರ್ಪು ನೀಡಿತ್ತು. ಸಿಬಿಐ ವಿಶೇಷ ನ್ಯಾಯಾಲಯ ಮುಂದೆ ವಿಚಾರಣೆಗೆ ಲಾಲೂ ಪ್ರಸಾದ್ ಯಾದವ್ ಆಗಮಿಸಿದ್ದರು.
ಇಂದು ಶಿಕ್ಷೆ ಪ್ರಕಟವಾಗಿದ್ದು, ಅವರಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಲಾಗಿದೆ.
ಮೇವು ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಐದನೇ ಮತ್ತು ಅಂತಿಮ ತೀರ್ಪು ನೀಡಿದ ರಾಂಚಿ ವಿಶೇಷ ಸಿಬಿಐ ನ್ಯಾಯಾಲಯ ಇತರ 75 ಆರೋಪಿಗಳೊಂದಿಗೆ ಅವರನ್ನು ದೋಷಿ ಎಂದು ತೀರ್ಪು ನೀಡಿತ್ತು.. ಸಿಬಿಐ ವಿಶೇಷ ನ್ಯಾಯಾಧೀಶ ಎಸ್ಕೆ ಶಶಿ ಅವರು 6 ಮಹಿಳೆಯರು ಸೇರಿದಂತೆ 24 ಆರೋಪಿಗಳನ್ನು ಸಾಕಷ್ಟು ಸಾಕ್ಷ್ಯಾಧಾರಗಳಿಲ್ಲದ ಕಾರಣ ಖುಲಾಸೆಗೊಳಿಸಲಾಗಿತ್ತು.
ಲಾಲೂ ಪ್ರಸಾದ್ ಯಾದವ್ ಅವರಿಗೆ ಶಿಕ್ಷೆಯ ಪ್ರಮಾಣವನ್ನು ಫೆಬ್ರವರಿ 18 ರಂದು ಘೋಷಿಸಲಾಗುವುದು ಎಂದು ನ್ಯಾಯಾಲಯ ಇಂದು ತೀರ್ಪು ವೇಳೆ ಪ್ರಕಟಿಸಿತ್ತು.
ಮೇವು ಹಗರಣದ ಇತರ ನಾಲ್ಕು ಪ್ರಕರಣಗಳಲ್ಲಿ ಈಗಾಗಲೇ ಶಿಕ್ಷೆಗೊಳಗಾದ ಲಾಲೂ ಪ್ರಸಾದ್ ಯಾದವ್ ಐದನೇ ಮತ್ತು ಅಂತಿಮ ಪ್ರಕರಣದಲ್ಲಿ ಆರೋಪಿಯಾಗಿದ್ದರು. ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಭೌತಿಕವಾಗಿ ಹಾಜರಾಗಲು ರಾಂಚಿಗೆ ಆಗಮಿಸಿದ್ದರು.
ಕಳೆದ ಜನವರಿ 29ರಂದು ಲಾಲೂ ಪ್ರಸಾದ್ ಯಾದವ್ ಅವರನ್ನು ಒಳಗೊಂಡಿರುವ 139.35 ಕೋಟಿ ರೂಪಾಯಿ ಡೊರಾಂಡಾ ಖಜಾನೆ ಅವ್ಯವಹಾರ ಪ್ರಕರಣದ ವಾದಗಳನ್ನು ಆಲಿಸಿದ ನ್ಯಾಯಾಲಯ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ವಿಶೇಷ ಸಿಬಿಐ(ಕೇಂದ್ರ ತನಿಖಾ ದಳ)ನ್ಯಾಯಾಧೀಶ ಎಸ್ ಕೆ ಶಶಿ ಅವರು ಪ್ರಸಾದ್ ಸೇರಿದಂತೆ 99 ಆರೋಪಿಗಳ ವಿರುದ್ಧ ಕಳೆದ ವರ್ಷ ಫೆಬ್ರವರಿಯಿಂದ ಕೈಗೊಂಡಿದ್ದ ವಿಚಾರಣೆಯನ್ನು ಇದೀಗ ಪೂರ್ಣಗೊಳಿಸಲಾಗಿತ್ತು.
ಕೊನೆಯ ಆರೋಪಿ ಶೈಲೇಂದ್ರ ಕುಮಾರ್ ಪರವಾಗಿ ಜನವರಿ 29ರಂದು ವಾದವನ್ನು ಪೂರ್ಣಗೊಳಿಸಲಾಯಿತು. ತೀರ್ಪಿನ ದಿನದಂದು ಎಲ್ಲಾ ಆರೋಪಿಗಳನ್ನು ನ್ಯಾಯಾಲಯದಲ್ಲಿ ಭೌತಿಕವಾಗಿ ಹಾಜರುಪಡಿಸಲು ಆದೇಶಿಸಲಾಗಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications