Illness ನಿಂದ Wellnessನೆಡೆಗೆ... ಯೋಗ ಜೀವನಧರ್ಮವಾಗಲಿ: ಮೋದಿ
Recommended Video
ರಾಂಚಿ, ಜೂನ್ 21: ಯೋಗ ಕೇವಲ ವ್ಯಾಯಾಮವಲ್ಲ, ಅದು ಜೀವನ ಧರ್ಮವಾಗಲಿ. Illness ನಿಂದ Wellnessನೆಡಗೆ ಕೊಂಡೊಯ್ಯಲು ಯೋಗ ಅತ್ಯುತ್ತಮ ಸಾಧನ ಎಂದು ಪ್ರಧಾನಿ ನರೇಂದ್ರ ಮೋದಿ ಯೋಗದ ಮಹತ್ವ ಸಾರಿದರು.
ಜಾರ್ಖಂಡ್ ನ ರಾಂಚಿಯಲ್ಲಿ ವಿಶ್ವ ಯೋಗದಿನವನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, "ಯೋಗವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವ ಹೊಣೆ ನಮ್ಮ ಮುಂದಿದೆ" ಎಂದರು.
ರಾಂಚಿಯ ಪ್ರಭಾತ್ ತಾರಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಸುಮಾರು 30,000 ಕ್ಕೂ ಹೆಚ್ಚು ಜನ ಭಾಗವಹಿಸಿ, ಯೋಗಾಭ್ಯಾಸ ಮಾಡಿದರು. ಈ ಸಂದರ್ಭದಲ್ಲಿ ವಿಶ್ವದಾದ್ಯಂತ ಯೋಗ ದಿನ ಆಚರಿಸುತ್ತಿರುವ ಎಲ್ಲಾ ಯೋಗಾಸಕ್ತರಿಗೂ ನರೇಮದ್ರ ಮೊದಿ ಅವರು ಶುಭಹಾರೈಸಿ, ಧನ್ಯವಾದ ಅರ್ಪಿಸಿದರು.
ನರೇಂದ್ರ ಮೋದಿ ಆವರ ಭಾಷಣದ ಮುಖ್ಯಾಂಶ ಇಲ್ಲಿದೆ.

ಪ್ರಚಾರ ಮಾಡಿದ ಎಲ್ಲರಿಗೂ ಧನ್ಯವಾದ
ಎಲ್ಲರಿಗೂ ಯೋಗದಿನದ ಶುಭಾಶಯಗಳು. ಯೋಗವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯಗೊಳಿಸಲು ನಮ್ಮ ಮಾಧ್ಯಮ ಮಿತ್ರರು, ಸಾಮಾಜಿಕ ಮಾಧ್ಯಮದ ಮಿತ್ರರು ವಹಿಸಿರುವ ಪಾತ್ರ ಅತ್ಯಂತ ಮಹತ್ವದ್ದು. ಅವರಿಗೆ ನನ್ನ ಕೃತಜ್ಞತೆಗಳು-ನರೇಂದ್ರ ಮೋದಿ, ಪ್ರಧಾನಿ

Illness ನಿಂದ wellness ನೆಡೆಗೆ
Illness(ಅನಾರೋಗ್ಯ) ನಿಂದ wellness(ಆರೋಗ್ಯ) ನೆಡೆಗೆ ನಮ್ಮನ್ನು ಒಯ್ಯಲು ಯೋಗ ಸಾಧನ. ಯೋಗಕ್ಕೆ ಜಾತಿ, ಮತ, ಬಣ್ಣ, ಲಿಂಗ, ಬಡವ-ಬಲ್ಲಿದ ಎಂಬ ಯಾವ ಬೇಧವಿಲ್ಲ. ಅದು ಎಲ್ಲ ಸರಹದ್ದುಗಳನ್ನು ಮೀರಿದ್ದು.

ಎಲ್ಲರಿಗೂ ಸಿಕ್ಕಲಿ ಯೋಗದ ಫಲ
ಆಧುನಿಕ ಯೋಗದ ಪಯಣವನ್ನು ನಗರದಿಂದ ಹಳ್ಳಿಗೆ, ಬುಡಕಟ್ಟು ಪ್ರದೇಶಕ್ಕೆ ತೆಗೆದುಕೊಂಡು ಹೋಗಬೇಕಿದೆ. ಯೋಗವನ್ನು ಬಡವರು ಮತ್ತು ಬುಡಕಟ್ಟು ಜನರ ಬದುಕಿನ ಅವಿಭಾಜ್ಯ ಅಂಗವನ್ನಾಗಿ ಮಾಡಬೇಕಿದೆ. ಏಕೆಂದರೆ ಅನಾರೋಗ್ಯದಿಂದ ಹೆಚ್ಚು ಬಳಲುವವರು ಬಡವರು- ನರೇಂದ್ರ ಮೋದಿ

ಮುಂದಿನ ಹಂತಕ್ಕೆ ಕೊಂಡೊಯ್ಯುವ ಹೊಣೆ
ಈ ಬಾರಿ ಯೋಗದ ಉದ್ದೇಶ ಶಾಂತಿ, ಸದ್ಭಾವ ಮತ್ತು ಸಮೃದ್ಧಿಗಾಗಿ ಆಗಿರಲಿ. ಯೋಗ ಪ್ರತಿಯೊಬ್ಬರ ಬದುಕಿನ ಜೀವನ ವಿಧಾನವಾಗಲಿ. ಯೋಗ ನಮ್ಮೆಲ್ಲರ ಆರೋಗ್ಯಕ್ಕೆ ಅಗತ್ಯ ಎಂಬುದನ್ನು ನಾವು ಬಲ್ಲೆವು. ಅದು ನಮ್ಮ ಸಂಸ್ಕೃತಿಯ ಭಾಗವಾಗಿದೆ. ಆದರೆ ಇದೀಗ ಅದನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವ ಜವಾಬ್ದಾರಿ ನಮ್ಮ ಮೇಲಿದೆ - ನರೇಂದ್ರ ಮೋದಿ
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications