ಜಾರ್ಖಂಡ್ ಚುನಾವಣೆ: ಬಿಜೆಪಿಗೆ ಸೋಲು, ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟಕ್ಕೆ ಬಹುಮತ
ರಾಂಚಿ, ಡಿಸೆಂಬರ್ 23: ಜಾರ್ಖಂಡ್ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಆಡಳಿತಾರೂಢ ಬಿಜೆಪಿಗೆ ಹಿನ್ನಡೆ ಉಂಟಾಗಿದೆ. ಜೆಎಂಎಂ ಮೈತ್ರಿಕೂಟ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲಿದ್ದು, ಕಾಂಗ್ರೆಸ್ ಸಹ ಬೆಂಬಲ ನೀಡಲಿದೆ.
ರಾಜ್ಯದ 81 ಕ್ಷೇತ್ರಗಳಿಗೆ ಒಟ್ಟು5 ಹಂತಗಳಲ್ಲಿ ಮತದಾನ ನಡೆದಿತ್ತು. ಸೋಮವಾರ ಮತ ಎಣಿಕೆ ನಡೆದಿದ್ದು, ಫಲಿತಾಂಶ ಪ್ರಕಟವಾಗಿದೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 41.
2014ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು 37 ಸ್ಥಾನಗಳಲ್ಲಿ ಗೆದ್ದಿತ್ತು. ನಂತರ ಜೆವಿಎಂಪಿ ಪಕ್ಷದ ಆರು ಶಾಸಕರನ್ನು ಸೆಳೆದುಕೊಂಡು ಸರ್ಕಾರ ರಚಸಿ ಐದು ವರ್ಷದ ಅವಧಿಯನ್ನು ಪೂರ್ಣಗೊಳಿಸಿತ್ತು. ಆದರೆ, ಈ ಚುನಾವಣೆಯಲ್ಲಿ ಬಿಜೆಪಿಗೆ 25 ಸ್ಥಾನಗಳಿಗೆ ಕುಸಿದಿದೆ.

ರಾಮ ಮಂದಿರ, ಎನ್ಆರ್ಸಿ, ಸಿಎಎ ಇನ್ನೂ ಹಲವು ಬೆಳವಣಿಗೆ ಬಳಿಕ ನಡೆದ ಜಾರ್ಖಂಡ್ ಚುನಾವಣೆ ಫಲಿತಾಂಶ ಕುತೂಹಲಕ್ಕೆ ಕಾರಣವಾಗಿತ್ತು. ಕಾಂಗ್ರೆಸ್ ನಿರುದ್ಯೋಗ, ಬಿಜೆಪಿಯ ಕೋಮುವಾದ ಸೇರಿದಂತೆ ಇನ್ನೂ ಹಲವು ವಿಷಯಗಳನ್ನು ಚುನಾವಣಾ ಪ್ರಚಾರದಲ್ಲಿ ಬಳಸಿತ್ತು.
ಮಾವೋವಾದಿ, ನಕ್ಸಲರ ಹಾವಳಿ ಇರುವ ರಾಜ್ಯವಾದ ಜಾರ್ಖಂಡ್ನಲ್ಲಿ ಒಟ್ಟು ಐದು ಹಂತದಲ್ಲಿ ಮತದಾನ ನಡೆದಿತ್ತು. ಮತ ಎಣಿಕೆಗೂ ಮಾವೋಗಳ ಬೆದರಿಕೆ ಇದ್ದ ಕಾರಣ ಭಾರಿ ಭದ್ರತೆಯನ್ನು ಎಣಿಕೆ ಕೇಂದ್ರಗಳಿಗೆ ನೀಡಲಾಗಿದೆ.
ಚುನಾವಣೋತ್ತರ ಸಮೀಕ್ಷೆಗಳು ಹೇಳಿದಂತೆ ಬಿಜೆಪಿಯು ಹಿನ್ನಡೆ ಅನುಭವಿಸುತ್ತಿದೆ. ಕಾಂಗ್ರೆಸ್ ಮತ್ತು ಜೆಎಂಎಂ ಮೈತ್ರಿಕೂಟಕ್ಕೆ ಸರಳ ಬಹುಮತ ಸಿಕ್ಕಿದೆ.
ಫಲಿತಾಂಶದ ಕ್ಷಣ-ಕ್ಷಣದ ಮಾಹಿತಿ, ಚಿತ್ರಗಳನ್ನು ಒನ್ಇಂಡಿಯಾದಲ್ಲಿ ಪಡೆಯಬಹುದಾಗಿದೆ.
ಕಾಂಗ್ರೆಸ್ 16, ಜೆಎಂಎಂ 29, ಬಿಜೆಪಿ 24, ಎಜೆಎಸ್ಯು 2, ಸಿಪಿಐಎಂ 1, ಪಕ್ಷೇತರ 1, ಜೆವಿಎಂ 3, ಎನ್ಸಿಪಿ 1, ಆರ್ಜೆಡಿ 1
ಜಾರ್ಖಂಡ್ ವಿಧಾನಸಭೆ ಚುನಾವಣೆ ಫಲಿತಾಂಶ : ಕಾಂಗ್ರೆಸ್ 15, ಜೆಎಂಎಂ 29, ಎಜೆಎಸ್ಯು 2, ಬಿಜೆಪಿ 22, ಸಿಪಿಓಐ 1, ಪಕ್ಷೇತರ 1, ಜೆವಿಎಂ 3, ಎನ್ಸಿಪಿ 1, ಆರ್ಜೆಡಿ 1.
Top Fight - ಜೆಮೇಷ್ಡ್ ಪುರ್ ಪೂರ್ವ
ಸರಯು ರೈ
(IND)
Leading
ರಘುಬರ್ ದಾಸ್
(BJP)
Trailing
"ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುವ ತನಕ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯುವಂತೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ. ನಮ್ಮ ನಿರೀಕ್ಷೆಯಂತೆ ಫಲಿತಾಂತ ಬಂದಿಲ್ಲ. ಹೇಮಂತ್ ಸೊರೇನ್ ಮತ್ತು ಮೈತ್ರಿಕೂಟಕ್ಕೆ ಅಭಿನಂದನೆ ಸಲ್ಲಿಸುತ್ತೇನೆ" ಎಂದು ರಾಜ್ಯಪಾಲರ ಭೇಟಿ ಬಳಿಕ ರಘುಬರ್ ದಾಸ್ ಹೇಳಿದರು.
ಜಾರ್ಖಂಡ್ ವಿಧಾನಸಭೆ ಚುನಾವಣೆ ಫಲಿತಾಂಶ 37 ಜೆಎಂಎಂ, 13 ಬಿಜೆಪಿ, 13 ಕಾಂಗ್ರೆಸ್, 8 ಎಜೆಎಸ್ಯು, 2 ಸಿಪಿಐ
ಜಾರ್ಖಂಡ್ ಮುಕ್ತಿ ಮೋರ್ಚಾ ಹೇಮಂತ್ ಸೊರೇನ್ ಡುಮ್ಕಾ ಕ್ಷೇತ್ರದಲ್ಲಿ 13188 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ರಘುಬರ್ ದಾಸ್
#JharkhandAssemblyElections2019: Chief Minister Raghubar Das tenders his resignation from the post to Governor Draupadi Murmu, at Raj Bhavan in Ranchi. pic.twitter.com/Dk1PChjZ39
— ANI (@ANI) December 23, 2019
ಜಾರ್ಖಂಡ್ ವಿಕಾಸ್ ಮೋರ್ಚಾ (ಜೆವಿಎಂ) ಮುಖ್ಯಸ್ಥ ಬಾಬುಲಾಲ್ ಮರಾಂಡಿ ಧನ್ವಾರ್ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಅವರು ಸೋಲು ಅನುಭವಿಸಿದ್ದರು.
ಜಾರ್ಖಂಡ್ ಫಲಿತಾಂಶದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್. ಹೇಮಂತ್ ಸೊರೇನ್ ನೇತೃತ್ವದ ಜೆಎಂಎಂ ಮೈತ್ರಿಕೂಟಕ್ಕೆ ಶುಭಾಶಯಗಳನ್ನು ಸಲ್ಲಿಸಿದ ಮೋದಿ.
Congratulations to @HemantSorenJMM Ji and the JMM-led alliance for the victory in the Jharkhand polls. Best wishes to them in serving the state.
— Narendra Modi (@narendramodi) December 23, 2019
ಜಾರ್ಖಂಡ್ ಫಲಿತಾಂಶ ಘೋಷಣೆ : 22 ಜೆಎಂಎಂ, 8 ಬಿಜೆಪಿ, 9 ಕಾಂಗ್ರೆಸ್, 4 ಎಜೆಎಸ್ಯು ಪಕ್ಷ. ಬಿಜೆಪಿ 16, ಜೆಎಂಎಂ 22, ಕಾಂಗ್ರೆಸ್ 11, ಆರ್ಜೆಡಿ 1, ಜೆವಿಎಂಪಿ 3, ಎಜೆಎಸ್ಯು 2 ಸ್ಥಾನಗಳಲ್ಲಿ ಮುನ್ನಡೆ ಪಡೆದಿದೆ.
Top Fight - ಗುಮ್ಲಾ
ಭೂಷಣ್ ಟಿರ್ಕೆ
(JMM)
Won
ಮಿಶಿರ್ ಕುಜುರ್
(BJP)
Lost
2013ರಲ್ಲಿ ಹೇಮಂತ್ ಸೊರೇನ್ ಮೊದಲ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾದರು. ಆದರೆ, 2014ರಲ್ಲಿ ಅವರು ಮುಖ್ಯಮಂತ್ರಿ ಕುರ್ಚಿಯಿಂದ ಇಳಿಯಬೇಕಾಯಿತು. ಈಗ 2ನೇ ಬಾರಿಗೆ ಅವರು ಜಾರ್ಖಂಡ್ ಮುಖ್ಯಮಂತ್ರಿಯಾಗಲಿದ್ದಾರೆ.
ಜಾರ್ಖಂಡ್ನ ನಿಯೋಜಿತ ಸಿಎಂ ಹೇಮಂತ್ ಸೊರೇನ್ ಕೇಂದ್ರದ ಮಾಜಿ ಸಚಿವ ಶಿಬು ಸೊರೇನ್ ಕಿರಿಯ ಪುತ್ರ. ಜಾರ್ಖಂಡ್ ಮುಕ್ತಿ ಮೋರ್ಚಾದ ಕಾರ್ಯಾಧ್ಯಕ್ಷರು. ವಿಧಾನಸಭೆ ಚುನಾವಣೆಗೂ ಮುನ್ನವೇ ಜೆಎಂಎಂ-ಕಾಂಗ್ರೆಸ್-ಆರ್ಜೆಡಿ ಮೈತ್ರಿಕೂಟ ಹೇಮಂತ್ರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಿತ್ತು.
ಜಾರ್ಖಂಡ್ನ ನಿಯೋಜಿತ ಸಿಎಂ ಹೇಮಂತ್ ಸೊರೇನ್ ಕೇಂದ್ರದ ಮಾಜಿ ಸಚಿವ ಶಿಬು ಸೊರೇನ್ ಕಿರಿಯ ಪುತ್ರ. ಜಾರ್ಖಂಡ್ ಮುಕ್ತಿ ಮೋರ್ಚಾದ ಕಾರ್ಯಾಧ್ಯಕ್ಷರು. ವಿಧಾನಸಭೆ ಚುನಾವಣೆಗೂ ಮುನ್ನವೇ ಜೆಎಂಎಂ-ಕಾಂಗ್ರೆಸ್-ಆರ್ಜೆಡಿ ಮೈತ್ರಿಕೂಟ ಹೇಮಂತ್ರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಿತ್ತು.
ಕಾಂಗ್ರೆಸ್ನ ರಾಜೇಂದ್ರ ಪ್ರಸಾದ್ ಸಿಂಗ್ ಹಾಲಿ ಬಿಜೆಪಿ ಶಾಸಕ ಯೋಗೇಶ್ವರ ಮಹತೋರನ್ನು 25,172 ಮತಗಳ ಅಂತರದಿಂದ ಸೋಲಿಸಿದ್ದಾರೆ.
ಜಾರ್ಖಂಡ್ ಜನತೆ ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇನೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
हम झारखंड की जनता द्वारा दिये गये जनादेश का सम्मान करते हैं।
— Amit Shah (@AmitShah) December 23, 2019
भाजपा को 5 वर्षों तक प्रदेश की सेवा करने का जो मौका दिया था उसके लिए हम जनता का हृदय से आभार व्यक्त करते हैं। भाजपा निरंतर प्रदेश के विकास के लिए कटिबद्ध रहेगी।
सभी कार्यकर्ताओं का उनके अथक परिश्रम के लिए अभिनंदन।
ಜಾರ್ಖಂಡ್ ರಾಜ್ಯದ 81 ಸ್ಥಾನಗಳ ಪೈಕಿ ಬಿಜೆಪಿ 79 ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಗೆ ಬೆಂಬಲ ನೀಡಿತ್ತು. ಎಜೆಎಸ್ಯು ಪಕ್ಷದ ಮುಖ್ಯಸ್ಥ ಸುದೇಶ್ ವಿರುದ್ಧ ಅಭ್ಯರ್ಥಿ ಕಣಕ್ಕಿಳಿಸಿರಲಿಲ್ಲ.
ಜಾರ್ಖಂಡ್ ವಿಧಾನಸಭೆ ಚುನಾವಣೆ ಫಲಿತಾಂಶ ಬಿಜೆಪಿ 25, ಕಾಂಗ್ರೆಸ್+ ಜೆಎಂಎಂ 46, ಜೆವಿಎಂಪಿ 3, ಎಜೆಎಸ್ಯು 3, ಇತರರು 4 ಸ್ಥಾನಗಳು.
"ಜಾರ್ಖಂಡ್ ರಾಜ್ಯದ ಇತಿಹಾಸದಲ್ಲಿ ಹೊಸ ಯುಗ ಆರಂಭವಾಗಿದೆ. ಜನರಿಗೆ ಕೊಟ್ಟ ಭರವಸೆಗಳನ್ನು ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಈಡೇರಿಸುತ್ತನೇ" ಎಂದು ಜಾರ್ಖಂಡ್ ನೂತನ ನಿಯೋಜಿತ ಸಿಎಂ ಹೇಮಂತ್ ಸೊರೆನ್ ಹೇಳಿದ್ದಾರೆ.
ಜಾರ್ಖಂಡ್ ಚುನಾವಣೆ ಬಗ್ಗೆ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಟ್ವೀಟ್
Dented in Haryana,
— P. Chidambaram (@PChidambaram_IN) December 23, 2019
Denied in Maharashtra,
Defeated in Jharkhand.
That is the story of the BJP in 2019.
All non-BJP parties must raise their sights and rally around the Congress to save the Constitution of India.
ರಾಜಭವನದತ್ತ ಹೊರಟ ಬಿಜೆಪಿ ನಾಯಕ, ಜಾರ್ಖಂಡ್ ಮುಖ್ಯಮಂತ್ರಿ ರಘುಬರ್ ದಾಸ್. ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಬಿಜೆಪಿ
ಜಾರ್ಖಂಡ್ ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎನ್ಸಿಪಿ ನಾಯಕ ಶರದ್ ಪವಾರ್, "ಚುನಾವಣೆ ಫಲಿತಾಂಶ ಜನರು ಬಿಜೆಪಿ ಜೊತೆ ಇಲ್ಲ ಎಂಬುದು ಸಾಬೀತಾಗಿದೆ. ರಾಜಸ್ಥಾನ, ಛತ್ತೀಸ್ಗಢ್, ಮಹಾರಾಷ್ಟ್ರದ ಜನರು ಬಿಜೆಪಿಯನ್ನು ದೂರವಿಡಲು ಬಯಸಿದ್ದರು. ಈಗ ಜಾರ್ಖಂಡ್ ರಾಜ್ಯದ ಜನರು ಇದನ್ನೇ ಮಾಡಿದ್ದಾರೆ" ಎಂದರು.
ಸೈಕಲ್ ಹೊಡೆದ ಜಾರ್ಖಂಡ್ನ ಮುಂದಿನ ಮುಖ್ಯಮಂತ್ರಿ ಹೇಮಂತ್ ಸೊರೆನ್
#WATCH: Jharkhand Mukti Morcha's (JMM) Hemant Soren rides a cycle at his residence in Ranchi. JMM is currently leading on 28 seats while the Congress-JMM-RJD alliance is leading on 46 seats. pic.twitter.com/e9HYcb26Y2
— ANI (@ANI) December 23, 2019
'ಇದು ಜನರ ಗೆಲುವು' ಎಂದು ಜೆಎಂಎಂ ಪಕ್ಷದ ನಾಯಕ ಹೇಮಂತ್ ಸೊರೆನ್ ಹೇಳಿದ್ದಾರೆ. ಹೇಮಂತ್ ಸೊರೆನ್ ಜಾರ್ಖಂಡ್ನ ಮುಂದಿನ ಸಿಎಂ ಆಗಲಿದ್ದಾರೆ.
ಜಾರ್ಖಂಡ್ ಚುನಾವಣೆಯಲ್ಲಿ ಸಂಘಟಿತ ಹೊರಾಟದಿಂದ ಜಯಗಳಿಸಿರುವ ಜೆಎಂಎಂ, ಆರ್ಜೆಡಿ ಮತ್ತು ಕಾಂಗ್ರೆಸ್ ಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.
ಜಾರ್ಖಂಡ್ ಚುನಾವಣೆಯಲ್ಲಿ ಸಂಘಟಿತ ಹೊರಾಟದಿಂದ ಜಯಗಳಿಸಿರುವ ಜೆಎಂಎಂ, ಆರ್ಜೆಡಿ ಮತ್ತು ಕಾಂಗ್ರೆಸ್ ಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.
ಮಾಂಡೋ ಕ್ಷೇತ್ರದಲ್ಲಿ ಎಜೆಎಸ್ಯು ಪಕ್ಷದ ನಿರ್ಮಲ್ ಮಾಹ್ತೋ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿಯ ಜಯಪ್ರಕಾಶ್ ಭಾಯ್ ಪಟೇಲ್ ಹಿನ್ನಡೆ ಅನುಭವಿಸಿದ್ದಾರೆ.
ಜಾರ್ಖಂಡ್ ಚುನಾವಣೆಯಲ್ಲಿ ಬಿಜೆಪಿ ಎರಡನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಜೆಎಂಎಂ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮುವತ್ತ ದಾಪುಗಾಲು ಹಾಕಿದೆ. ಚುನಾವಣಾ ಆಯೋಗದ ಮಾಹಿತಿಯಂತೆ ಜೆಎಂಎಂ 29 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ 24 ಸ್ಥಾನದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications