Jharkhand Election Live: ಜಾರ್ಖಂಡ್ 5ನೇ ಹಂತದ ಮತದಾನ ಅಪ್ಡೇಟ್ಸ್
ರಾಂಚಿ, ಡಿಸೆಂಬರ್ 19: ಜಾರ್ಖಂಡ್ ವಿಧಾನಸಭೆ ಚುನಾವಣೆಯ ಐದನೇ ಹಾಗೂ ಕೊನೆ ಹಂತದ ಮತದಾನ ಪ್ರಕ್ರಿಯೆ ಶುಕ್ರವಾರ(ಡಿ. 20) ರಂದು ನಡೆಯುತ್ತಿದೆ. ಕೊನೆ ಹಂತದ ಮತದಾನ ಪ್ರಕ್ರಿಯೆಯ ಸಂಪೂರ್ಣ ಅಪ್ಡೇಟ್ಸ್ ಇಲ್ಲಿದೆ.
ಜಾರ್ಖಂಡ್ ನಲ್ಲಿ ಒಟ್ಟು ಐದು ಹಂತದಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 30ರಿಂದ ಡಿಸೆಂಬರ್ 20 ರ ತನಕ ಮತದಾನ ನಿಗದಿಯಾಗಿದೆ. ಡಿಸೆಂಬರ್ 23ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ಬಿಜೆಪಿಗೆ ಸೆಡ್ಡು ಹೊಡೆಯಲು ಜಾರ್ಖಂಡ್ ಮುಕ್ತಿ ಮೋರ್ಚಾ( ಜೆಎಂಎಂ), ಕಾಂಗ್ರೆಸ್, ಲಾಲೂ ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾ ದಳ ಮೈತ್ರಿಕೂಟ ರಚಿಸಿವೆ. ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಅವರು ಮೈತ್ರಿಕೂಟದ ಸಿಎಂ ಅಭ್ಯರ್ಥಿಯಾಗಿ ಗುರುತಿಸಿಕೊಂಡಿದ್ದಾರೆ.

ಐದು ಕ್ಷೇತ್ರಗಳಲ್ಲಿ ಮಧ್ಯಾಹ್ನ 3 ಗಂಟೆಗೆ ಮತದಾನ ಅಂತ್ಯಗೊಂಡಿದೆ. ಇನ್ನು ಉಳಿದ ಕ್ಷೇತ್ರಗಳಲ್ಲಿ ಸಂಜೆ ದು ಗಂಟೆಯವರೆಗೂ ಮುಂದುವರಿಯಲಿದೆ.
11 ಗಂಟೆ ವೇಳೆಗೆ ಶೇ 28.24ರಷ್ಟು ಮತದಾನ ನಡೆದಿದೆ. 40 ಲಕ್ಷಕ್ಕೂ ಅಧಿಕ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.
ಬೆಳಿಗ್ಗೆ 9 ಗಂಟೆ ವೇಳೆಗೆ 16 ವಿಧಾನಸಭೆ ಕ್ಷೇತ್ರಗಳಲ್ಲಿ ಶೇ 12.01ರಷ್ಟು ಮತದಾನ ನಡೆದಿರುವುದು ವರದಿಯಾಗಿದೆ.
16 ಕ್ಷೇತ್ರಗಳಿಗೆ ಐದನೇ ಹಾಗೂ ಕೊನೆಯ ಹಂತದಲ್ಲಿ ಚುನಾವಣೆ ನಡೆಯುತ್ತಿದೆ . ಇಬ್ಬರು ಸಚಿವರು, ಮಾಜಿ ಮುಖ್ಯಮಂತ್ರಿ ಸೇರಿದಂತೆ 237 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಬೆಳಿಗ್ಗೆ ಏಳು ಗಂಟೆಗೆ ಮತದಾನ ಆರಂಭವಾಗಿದ್ದು, ಮತದಾರರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ
5ನೇ ಹಂತದಲ್ಲಿ 6 ಜಿಲ್ಲೆಗಳ 16 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಡುಮ್ಕಾ, ಜಮತಾರಾ ಹಾಗೂ ದೇವಘರ್ ಪ್ರಮುಖ ಕ್ಷೇತ್ರಗಳಾಗಿವೆ.
ಜಾರ್ಖಂಡ್ನಲ್ಲಿ ನವೆಂಬರ್ 1ರಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ರಾಜ್ಯ ವಿಧಾನಸಭೆಯ ಐದು ವರ್ಷಗಳ ಅವಧಿ ಜನವರಿ 5, 2020 ಕ್ಕೆ ಮುಕ್ತಾಯಗೊಳ್ಳಲಿದೆ. ಚುನಾವಣಾ ಖರ್ಚಿನ ಮೇಲೆ ಹಿಡಿತ ಸಾಧಿಸಲು ಪ್ರತಿ ಜಿಲ್ಲೆಗಳಲ್ಲಿ ಆದಾಯ ತೆರಿಗೆ ಅಧಿಕಾರಿಗಳನ್ನು ನೇಮಿಸಲಾಗಿದೆ.
ಸಿ ವೋಟರ್ ಸಮೀಕ್ಷೆ ಪ್ರಕಾರ ಬಿಜೆಪಿಗೆ 41 ಸ್ಥಾನ ಸಿಗಲಿದೆ. ಪ್ರಮುಖ ವಿಪಕ್ಷ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) 18 ರಿಂದ 28 ಸ್ಥಾನಗಳನ್ನು ಗಳಿಸಬಹುದು, ಕಾಂಗ್ರೆಸ್ ಪಕ್ಷ 4 ರಿಂದ 10 ಸೀಟು ಗೆಲ್ಲಬಹುದು ಎಂದು ಹೇಳಲಾಗಿದೆ. ಅಖಿಲ ಜಾರ್ಖಂಡ್ ವಿದ್ಯಾರ್ಥಿ ಸಂಘಟನೆ(ಎಜೆಎಸ್ ಯು) 3 ರಿಂದ 9 ಸ್ಥಾನ ಗಳಿಸಬಹುದು. ಜಾರ್ಖಂಡ್ ವಿಕಾಸ್ ಮೋರ್ಚಾ ಹಾಗೂ ಇನ್ನಿತರ ಪಕ್ಷಗಳು 3-9 ಸ್ಥಾನ ಪಡೆಯಬಹುದು ಎಂದು ಹೇಳಿದೆ.
81 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 31, ಆರ್ ಜೆಡಿ 7 ಹಾಗೂ ಜೆಎಂಎಂ 43 ಸ್ಥಾನಗಳಲ್ಲಿ ಸ್ಪರ್ಧೆಗಿಳಿದಿವೆ. ಜಾರ್ಖಂಡ್ ನಲ್ಲಿ ಕಳೆದ ವಿಧಾನಸಭೆ ಚುನಾವಣೆ 2014 ರಲ್ಲಿ ನಡೆದಿತ್ತು. ಒಟ್ಟು 81 ಶಾಸಕ ಬಲದ ಜಾರ್ಖಂಡ್ ನಲ್ಲಿ ಪ್ರಸ್ತುತ ಬಿಜೆಪಿ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದೆ. 37 ಸ್ಥಾನಗಳಲ್ಲಿ ಜಯಗಳಿಸಿದ್ದ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿ, ಸ್ಥಳೀಯ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಬಹುಮತ ಸಾಬೀತುಪಡಿಸಿ, ಸರ್ಕಾರ ರಚಿಸಿತ್ತು. ರಘುವರ್ ದಾಸ್ ಮುಖ್ಯಮಂತ್ರಿಯಾಗಿದ್ದಾರೆ. 5ನೇ ಹಂತದ ಕ್ಷೇತ್ರಗಳ ಅಂಕಿ ಅಂಶ ಹಾಗೂ ಮತದಾನ ಪ್ರಕ್ರಿಯೆ ಅಪ್ಡೇಟ್ಸ್
More From
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications