Breaking; ಜಾರ್ಖಂಡ್ನಲ್ಲಿ ಕಲ್ಲಿದ್ದಲು ಗಣಿ ಕುಸಿತ
ರಾಂಚಿ, ಏಪ್ರಿಲ್ 21; ಜಾರ್ಖಂಡ್ನ ದಾಂಬಡ್ ಪ್ರದೇಶದಲ್ಲಿನ ಕಲ್ಲಿದ್ದಲು ಗಣಿಯೊಂದು ಕುಸಿತಗೊಂಡಿದೆ. ಗಣಿಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಹಲವಾರು ಕಾರ್ಮಿಕರು ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ.
ಗುರುವಾರ ಮಧ್ಯಾಹ್ನ ಕಲ್ಲಿದ್ದಲು ಗಣಿ ಕುಸಿತವಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಪ್ರದೇಶವಿದು ಎಂದು ವರದಿ ಹೇಳಿದೆ.

ಗಣಿಯಲ್ಲಿ 12ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ನಿರ್ವಹಣೆ ಮಾಡುತ್ತಿದ್ದರು. ಗಣಿ ಕುಸಿತದ ಬಳಿಕ ಅವರು ಅವಶೇಷಗಳಡಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.












Click it and Unblock the Notifications