ಜಾರ್ಖಂಡ್: ಜೆಎಂಎಂ ಸಿಎಂ ಅಭ್ಯರ್ಥಿ ಹೇಮಂತ್ ಮುನ್ನಡೆ
ರಾಂಚಿ, ಡಿಸೆಂಬರ್ 23: ಚುನಾವಣೋತ್ತರ ಸಮೀಕ್ಷೆಗಳು ಹೊರ ಬರುತ್ತಿದ್ದಂತೆ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ ಕಚೇರಿಯಲ್ಲಿ ಸಂಭ್ರಮ ಮನೆ ಮಾಡಿತ್ತು. ಡಿಸೆಂಬರ್ 23ರಂದು 81 ಕ್ಷೇತ್ರಗಳ ಚುನಾವಣೆ ಫಲಿತಾಂಶದ ಆರಂಭಿಕ ಟ್ರೆಂಡ್ ನಲ್ಲಿ ಜೆಎಂಎಂಗೆ ಮುನ್ನಡೆ ಸಿಗುತ್ತಿದ್ದಂತೆ ಈ ಸಂತಸ ದ್ವಿಗುಣವಾಗಿದೆ. ಜೊತೆಗೆ ಜೆಎಂಎಂನ ಸಿಎಂ ಅಭ್ಯರ್ಥಿ ಹೇಮಂತ್ ಸೊರೆನ್ ಮುನ್ನಡೆ ಕಾಯ್ದುಕೊಂಡಿರುವುದು ಖುಷಿ ಹೆಚ್ಚಿಸಿದೆ.
ಜಾರ್ಖಂಡ್ ನಲ್ಲಿ ನವೆಂಬರ್ 30ರಿಂದ ಡಿಸೆಂಬರ್ 20 ರ ತನಕ ಒಟ್ಟು ಐದು ಹಂತದಲ್ಲಿ ಚುನಾವಣೆ ನಡೆದು, ಡಿಸೆಂಬರ್ 23ರಂದು ಮತ ಎಣಿಕೆ ಕಾರ್ಯ ನಡೆಸಲಾಗುತ್ತಿದೆ.
ಬಿಜೆಪಿಗೆ ಸೆಡ್ಡು ಹೊಡೆಯಲು ಜಾರ್ಖಂಡ್ ಮುಕ್ತಿ ಮೋರ್ಚಾ( ಜೆಎಂಎಂ), ಕಾಂಗ್ರೆಸ್, ಲಾಲೂ ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾ ದಳ ಮೈತ್ರಿಕೂಟ ರಚಿಸಿವೆ. ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಅವರು ಮೈತ್ರಿಕೂಟದ ಸಿಎಂ ಅಭ್ಯರ್ಥಿಯಾಗಿ ಗುರುತಿಸಿಕೊಂಡಿದ್ದಾರೆ. ಡಿಸೆಂಬರ್ 20ರಂದು ಪ್ರಕಟವಾದ ಪ್ರಮುಖ ಚುನಾವಣೋತ್ತರ ಸಮೀಕ್ಷೆಗಳ ಸರಾಸರಿಯಂತೆ ಜೆಎಂಎಂ -ಕಾಂಗ್ರೆಸ್ ಅಧಿಕಾರಕ್ಕೆ ಬರುವ ಸಾಧ್ಯತೆ ಹೆಚ್ಚಿದೆ ಎಂದು ವರದಿ ಬಂದಿದೆ.

ಫಲಿತಾಂಶ ಟ್ರೆಂಡ್: ಬರ್ಹಾಯಿತ್ ಕ್ಷೇತ್ರದಿಂದ ಸ್ಪರ್ಧಿಸಿರುವ ಹೇಮಂತ್ ಸೊರೆನ್ ಅವರು ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಸಿಮೋ ಮಾಲ್ಟೋ ವಿರುದ್ಧ ಆರಂಭಿಕ ಮುನ್ನಡೆ(ಶೇ 9ರಷ್ಟು ಮತಗಳ ಅಂತರ) ಕಾಯ್ಡುಕೊಂಡಿದ್ದಾರೆ. ಆದರೆ, ಡುಮ್ಕಾ ಕ್ಷೇತದಲ್ಲಿ ಸಚಿವ ಲೂಯಿಸ್ ಮರಾಂಡಿ ವಿರುದ್ಧ ಸೊರೆನ್ ಹಿನ್ನಡೆ ಅನುಭವಿಸಿದ್ದಾರೆ.
ಒಟ್ಟಾರೆ, 81 ಕ್ಷೇತ್ರಗಳಲ್ಲಿ ಜೆಎಂಎಂ-ಕಾಂಗ್ರೆಸ್- ಆರ್ ಜೆ ಡಿ : 40, ಬಿಜೆಪಿ 29, ಜೆವಿಎಂ 4, ಎಜೆಎಸ್ ಯು 2, ಇತರೆ 5 ಕ್ಷೇತ್ರಗಳಲ್ಲಿ ಮುನ್ನಡೆ ಪಡೆಸುಕೊಂಡಿವೆ.
2014ರ ಫಲಿತಾಂಶ: 37 ಸ್ಥಾನಗಳಲ್ಲಿ ಜಯಗಳಿಸಿದ್ದ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿ, ಸ್ಥಳೀಯ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಬಹುಮತ ಸಾಬೀತುಪಡಿಸಿ, ಸರ್ಕಾರ ರಚಿಸಿತ್ತು. ಕಾಂಗ್ರೆಸ್ 6 ಸ್ಥಾನ ಹಾಗೂ ಮಿಕ್ಕ 38 ಸ್ಥಾನಗಳನ್ನು ಪ್ರಾದೇಶಿಕ ಪಕ್ಷಗಳು ಗೆಲ್ಲುವಲ್ಲಿ ಸಫಲವಾಗಿದ್ದವು. ವಿಧಾನಸಭೆ 81 ಸ್ಥಾನಗಳನ್ನು ಹೊಂದಿದ್ದು, ಮ್ಯಾಜಿಕ್ ನಂಬರ್ 41.
ಈ ಬಾರಿ 81 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 31, ಆರ್ ಜೆಡಿ 7 ಹಾಗೂ ಜೆಎಂಎಂ 43 ಸ್ಥಾನಗಳಲ್ಲಿ ಸ್ಪರ್ಧೆಗಿಳಿದಿವೆ. ರಘುವರ್ ದಾಸ್ ಮುಖ್ಯಮಂತ್ರಿಯಾಗಿದ್ದಾರೆ. ರಾಜ್ಯ ವಿಧಾನಸಭೆಯ ಐದು ವರ್ಷಗಳ ಅವಧಿ ಜನವರಿ 5, 2020 ಕ್ಕೆ ಮುಕ್ತಾಯಗೊಳ್ಳಲಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications