ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾಕ್ಕೆ ಜಾರ್ಖಂಡ್ ನಲ್ಲಿ ನಿಷೇಧ
ಜಾರ್ಖಂಡ್ ಸರಕಾರವು ಮಂಗಳವಾರದಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ ಐ) ಮೇಲೆ ನಿಷೇಧ ಹೇರಿದೆ. ದೇಶವಿರೋಧಿ ಚಟುವಟಿಕೆಗಳನ್ನು ನಿಗ್ರಹಿಸಲು ಹಾಗೂ ಐಎಸ್ ಐಎಸ್ ನಂಥ ಸಂಘಟನೆ ಜತೆ ಪಿಎಫ್ ಐಗೆ ನಂಟಿರುವ ಕಾರಣಕ್ಕೆ ಈ ನಿರ್ಧಾರ ಮಾಡಲಾಗಿದೆ ಎಂದು ಸರಕಾರದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅಪರಾಧ ಕಾನೂನು (ತಿದ್ದುಪಡಿ) ಕಾಯ್ದೆ, 1908ರ ಅಡಿಯಲ್ಲಿ ತಕ್ಷಣದಿಂದಲೇ ಅನ್ವಯ ಆಗುವಂತೆ ಪಿಎಫ್ ಐ ಅನ್ನು ನಿಷೇಧಿಸಲಾಗಿದೆ. ಅಧಿಸೂಚನೆಯಲ್ಲಿ ಹೇಳಿರುವ ಪ್ರಕಾರ, ಪಿಎಫ್ ಐಗೆ ಸದಸ್ಯರಾಗುವುದು, ದೇಣಿಗೆ ನೀಡುವುದು ಅಥವಾ ಅದರ ಮೂಲಭೂತ ವಿಚಾರಗಳ ಸಾಹಿತ್ಯವನ್ನು ತಮ್ಮ ಬಳಿ ಇಟ್ಟುಕೊಳ್ಳುವುದು ಅಥವಾ ಅವುಗಳನ್ನು ಮುದ್ರಿಸುವುದು ಅಪರಾಧ ಎನ್ನಲಾಗಿದೆ.
ಪಿಎಫ್ ಐನ ಚಟುವಟಿಕೆಗಳು ವಿಪರೀತ ಹೆಚ್ಚಾಗಿರುವುದನ್ನು ಪರಿಶೀಲಿಸಲಾಯಿತು ಮತ್ತು ಅವುಗಳು ರಾಜ್ಯ ಮತ್ತು ದೇಶಕ್ಕೆ ಅಪಾಯಕರವಾಗಿದ್ದವು. ಶಾಂತಿ ಕದಡುವ, ಕೋಮು ಸೌಹಾರ್ದ ಹಾಳು ಮಾಡುವ ಹಾಗೂ ಜಾತ್ಯತೀತ ತತ್ವಕ್ಕೆ ಧಕ್ಕೆ ತರುವ ಸಾಮರ್ಥ್ಯ ಈ ಸಂಘಟನೆಗೆ ಇರುವುದರಿಂದ ಇಂಥ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಾಮಾಜಿಕ ವಿಭಜನೆ, ಭಾರತ ವಿರೋಧಿ ಹಾಗೂ ಪಾಕಿಸ್ತಾನ ಪರ ಘೋಷಣೆಗಳನ್ನು ಹರಡುತ್ತಿದೆ. ಐಎಸ್ ಐಎಸ್ ಹಾಗೂ ಜೆಎಂಬಿ ಜತೆ ನಂಟು ಹೊಂದಿದೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ. ಜಾರ್ಖಂಡ್ ನ ವಿವಿಧೆಡೆ ಹಿಂಸಾ ಕೃತ್ಯಗಳಲ್ಲಿ ಭಾಗಿಯಾಸ ಹಾಗೂ ದೇಶವಿರೋಧಿ ಘೋಷಣೆಗಳನ್ನು ಕೂಗಿದ ಆರೋಪ ಪಿಎಫ್ ಐ ವಿರುದ್ಧ ಇದೆ.
ಫೆಬ್ರವರಿ 12, 2018ರಲ್ಲಿ ಜಾರ್ಖಂಡ್ ಸರಕಾರ ಇದಕ್ಕೂ ಮುನ್ನ ಪಿಎಫ್ ಐ ಮೇಲೆ ನಿಷೇಧ ಹೇರಿತ್ತು. ಆದರೆ ಆಗಸ್ಟ್ 28ರಂದು ಜಾರ್ಖಂಡ್ ಹೈ ಕೋರ್ಟ್ ಸರಕಾರದ ಅಧಿಸೂಚನೆಯನ್ನು ಪಕ್ಕಕ್ಕೆ ಸರಿಸಿತ್ತು. ಗೆಜೆಟ್ ನಲ್ಲಿ ಈ ಬಗ್ಗೆ ಸರಕಾರ ಅಧಿಸೂಚನೆ ಹೊರಡಿಸಿಲ್ಲ ಎಂಬುದನ್ನು ಪ್ರಶ್ನಿಸಿ, ಪಿಎಫ್ ಐ ಸಂಘಟನೆಯ ನಿಷೇಧವನ್ನು ಮಾಡಬಾರದೆಂದು ಸದಸ್ಯ ಅಬ್ದುಲ್ ಬದುದ್ ಕೋರ್ಟ್ ಮೆಟ್ಟಿಲೇರಿದ್ದರು.
ಕರ್ನಾಟಕದಲ್ಲಿ ಹಿಂದೂ ಸಂಘಟನೆಗಳ ಹತ್ಯೆಗೆ ಸಂಬಂಧಿಸಿದಂತೆ ಪಿಎಫ್ ಐ ಕೈವಾಡವಿದೆ. ಆ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕು ಎಂದು ಬಿಜೆಪಿಯು ಆಗ್ರಹಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications