ಮುಸ್ಲಿಂ ಶಾಸಕನಿಗೆ ರಾಮಜಪ ಮಾಡಲು ಒತ್ತಾಯಿಸಿದ ಬಿಜೆಪಿ ಸಚಿವ
ರಾಂಚಿ, ಜುಲೈ 26: ಜಾರ್ಖಂಡ್ ನ ಬಿಜೆಪಿ ಸಚಿವರೊಬ್ಬರು ವಿಧಾನಸೌಧದ ಎದುರಲ್ಲೇ ಮುಸ್ಲಿಂ ಶಾಸಕರೊಬ್ಬರಿಗೆ ಜೈ ಶ್ರೀರಾಮ್ ಪಠಿಸುವಂತೆ ಒತ್ತಾಯಿಸಿದ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
"ಇರ್ಫಾನ್ ಭಾಯ್,ನೀವು ಜೋರಾಗಿ ಜೈ ಶ್ರೀರಾಮ್ ಹೇಳಬೇಕೆಂದು ನಾನು ಸವಾಲೆಸೆಯುತ್ತೇನೆ. ನಿಮ್ಮ ಪೂರ್ವಜರು ರಾಮನ ಕುಟುಂಬಸ್ಥರೇ, ಬಾಬರನ ಕುಟುಂಬಸ್ಥರಲ್ಲ" ಎಂದು ಬಿಜೆಪಿ ಸಚಿವ ಸಿಪಿ ಸಿಂಗ್ ಎಂಬುವವರು ಇರ್ಫಾನ್ ಅನ್ಸಾರಿ ಎಂಬ ಕಾಂಗ್ರೆಸ್ ಶಾಸಕರಿಗೆ ಹೇಳಿದ್ದರು.
ನೀವು ರಾಮನ ಹೆಸರನ್ನಿಟ್ಟುಕೊಂಡು ಗಲಾಟೆ ಎಬ್ಬಿಸುತ್ತಿದ್ದೀರಾ. ರಾಮನ ಹೆಸರಿಗೆ ಅವಮಾನ ಮಾಡುತ್ತಿದ್ದೀರಾ. ಈಗ ಬೇಕಿರುವುದು ಕೆಲಸ, ವಿದ್ಯುತ್, ನೀರು, ಚರಂಡಿ ವ್ಯವಸ್ಥೆ. ಮೊದಲು ಅದರತ್ತ ಗಮನ ಕೊಡಿ ಎಂದು ಅನ್ಸಾರಿ ಪ್ರತಿಕ್ರಿಯೆ ನೀಡಿದ್ದರು.

"ನಾನು ನಿಮಗೆ ಜೈ ಶ್ರೀರಾಮ್ ಹೇಳುವಂತೆ ಹೆದರಿಸುತ್ತಿಲ್ಲ. ನಿಮ್ಮ ಪೂರ್ವಜರೂ ಜೈ ಶ್ರೀರಾಮ್ ಅನ್ನೇ ಪ್ರಾರ್ಥಿಸುತ್ತಿದ್ದರೇ ಹೊರತು ತೈಮುರ್, ಬಾಬರ್, ಘಜ್ನಿಯನ್ನು ಪ್ರಾರ್ಥಿಸುತ್ತಿರಲಿಲ್ಲ ಎಂಬುದನ್ನು ನೆನಪಿಸಲು ಹಾಗೆ ಹೇಳಿದೆ ಅಷ್ಟೇ" ಎಂದು ಸಿಂಗ್ ಹೇಳಿದರು.
ಕಳೆದ ಕೆಲವು ದಿನಗಳಿಂದ ಇಂಥ ಘಟನೆಗಳು ಪದೇ ಪದೇ ನಡೆಯುತ್ತಲೇ ಇವೆ. ಮೋಟಾರ್ ಸೈಕಲ್ ಕದ್ದ ಆರೋಪದ ಮೇಲೆ ತಬ್ರೇಝ್ ಅನ್ಸಾರಿ ಎಂಬ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿಹಾಕಿ ಥಳಿಸಿ, ನಂತರ ಜೈ ಶ್ರೀರಾಮ್ ಹೇಳುವಂತೆ ಪೀಡಿಸಲಾಗಿತ್ತು. ನಂತರ ಆತ ಮೃತನಾಗಿದ್ದ.
ಈ ರೀತಿಯ ಘಟನೆಗಳು ಹೆಚ್ಚುತ್ತಿರುವುದನ್ನು ಖಂಡಿಸಿರುವ ಬಾಲಿವುಡ್ ನಟಿ ಕಂಗನಾ ರಣೌತ್, ಸೆನ್ಸಾರ್ ಮಂಡಳಿಯ ಪ್ರಸೂನ್ ಜೋಶಿ ಸೇರಿದಂತೆ 60 ಕ್ಕೂ ಹೆಚ್ಚು ಸೆಲೆಬ್ರಿಟಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಇಂಥ ಘಟನೆಗಳನ್ನು ಕೂಡಲೇ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ












Click it and Unblock the Notifications