''ಎಸ್ಸಿ, ಎಸ್ಟಿ, ಒಬಿಸಿಗೆ ಶೇ67ರಷ್ಟು ಮೀಸಲಾತಿ ಆಶ್ವಾಸನೆ"
ರಾಂಚಿ, ನವೆಂಬರ್ 27: ಪ್ರಮುಖ ವಿಪಕ್ಷ ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ಈ ಬಾರಿ ಚುನಾವಣೆಯಲ್ಲಿ ಮೀಸಲಾತಿ ದಾಳ ಎಸೆದಿದೆ. ಜೆಎಂಎಂ ಅಧಿಕಾರಕ್ಕೆ ಬಂದರೆ ಎಸ್ಸಿ, ಎಸ್ಟಿ, ಒಬಿಸಿ ಸಮುದಾಯದವರಿಗೆ ಶೇ 67ರಷ್ಟು ಉದ್ಯೋಗದಲ್ಲಿ ಮೀಸಲಾತಿ ನೀಡುವುದಾಗಿ ಘೋಷಿಸಿದೆ.
ಜೆಎಂಎಂ ಪಕ್ಷ ಶಿಬು ಶೊರೆನ್ ಹಾಗೂ ಅವರ ಪುತ್ರ ಹೇಮಂತ್ ಅವರು ತಮ್ಮ ಪಕ್ಷದ ಪ್ರಣಾಳಿಕೆ ಬಗ್ಗೆ ಮಾತನಾಡುತ್ತಾ, ನಿರುದ್ಯೋಗಿ ಪದವೀಧರರು, ಸ್ನಾತಕೋತ್ತರ ಪದವೀಧರರಿಗೆ ಪ್ರತಿ ತಿಂಗಳು 5000 ರು ನಿಂದ 70000 ರು ಭತ್ಯೆ ನೀಡಲಾಗುವುದು, ಖಾಸಗಿ ವಲಯದಲ್ಲೂ ಶೇ 75ರಷ್ಟು ಮೀಸಲಾತಿ ಕಲ್ಪಿಸಲಾಗುವುದು ಎಂದು ಹೇಳಿದರು.
ಕಾಂಗ್ರೆಸ್, ಆರ್ ಜೆಡಿ ಜೊತೆ ಕೈಜೋಡಿಸಿದರುವ ಜೆಎಂಎಂ, ಎಸ್ಟಿಗೆ ಶೇ 28,ಒಬಿಸಿಗೆ ಶೇ27ರಷ್ಟು ಹಾಗೂ ಶೇ 12ರಷ್ಟು ಎಸ್ಸಿಗಳಿಗೆ ಮೀಸಲಾತಿ ನೀಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ಹೇಳಲಾಗಿದೆ. ಬಡ ಕುಟುಂಬಕ್ಕೆ ವಾರ್ಷಿಕ 72000 ರು ಆದಾಯ ಕಲ್ಪಿಸುವ ಯೋಜನೆ ಹಾಕಿಕೊಳ್ಳಲಾಗಿದೆ. ವೃದ್ಧರು, ವಿಶೇಷ ಚೇತನರಿಗೆ ತಿಂಗಳಿಗೆ 2500 ರು ಪಿಂಚಣಿ ಒದಗಿಸಲಾಗುವುದು ಎಂದು ಭರವಸೆ ನೀಡಲಾಗಿದೆ.

ಇದಲ್ಲದೆ, ಮಹಿಳೆಯರಿಗೆ ಬ್ಯಾಂಕ್, ಅಡುಗೆ ಮನೆ ಖರ್ಚಿಗೆ 2000 ರು ನೀಡುವುದು, ಕಿಸಾನ್ ಬ್ಯಾಂಕ್ ಸ್ಥಾಪಿಸಿ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವುದು, ಭತ್ತಕ್ಕೆ 2300 ರು ಬೆಂಬಲ ಬೆಲೆ ಎಂದು ನಿಗದಿಪಡಿಸಲಾಗಿದೆ.
ಜಾರ್ಖಂಡ್ ರಾಜ್ಯದಲ್ಲಿ ಐದು ಸುತ್ತಿನಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 30 ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ಡಿಸೆಂಬರ್ 23ರಂದು ಕೊನೆ ಹಂತದ ಮತದಾನ ನಿಗದಿಯಾಗಿದೆ.
ಬಿಜೆಪಿಗೆ ಸೆಡ್ಡು ಹೊಡೆಯಲು ಜಾರ್ಖಂಡ್ ಮುಕ್ತಿ ಮೋರ್ಚಾ( ಜೆಎಂಎಂ), ಕಾಂಗ್ರೆಸ್, ಲಾಲೂ ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾ ದಳ ಮೈತ್ರಿಕೂಟ ರಚಿಸಿವೆ. ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಅವರು ಮೈತ್ರಿಕೂಟದ ಸಿಎಂ ಅಭ್ಯರ್ಥಿಯಾಗಿ ಗುರುತಿಸಿಕೊಂಡಿದ್ದಾರೆ.
81 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 31, ಆರ್ ಜೆಡಿ 7 ಹಾಗೂ ಜೆಎಂಎಂ 43 ಸ್ಥಾನಗಳಲ್ಲಿ ಸ್ಪರ್ಧೆಗಿಳಿದಿವೆ. ಜಾರ್ಖಂಡ್ ನಲ್ಲಿ ಕಳೆದ ವಿಧಾನಸಭೆ ಚುನಾವನೆ 2014 ರಲ್ಲಿ ನಡೆದಿತ್ತು. ಒಟ್ಟು 81 ಶಾಸಕ ಬಲದ ಜಾರ್ಖಂಡ್ ನಲ್ಲಿ ಪ್ರಸ್ತುತ ಬಿಜೆಪಿ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದೆ. 37 ಸ್ಥಾನಗಳ್ಲಲಿ ಜಯಗಳಿಸಿದ್ದ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿ, ಸ್ಥಳೀಯ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಬಹುಮತ ಸಾಬೀತುಪಡಿಸಿ, ಸರ್ಕಾರ ರಚಿಸಿತ್ತು. ರಘುವರ್ ದಾಸ್ ಮುಖ್ಯಮಂತ್ರಿಯಾಗಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications