ಹಿಂದಿನ ಕಾಂಗ್ರೆಸ್-ಜೆಎಂಎಂ ನಿಂದ ಅಧಿಕಾರಕ್ಕಾಗಿ ಕಿತ್ತಾಟ:ಮೋದಿ
ರಾಂಚಿ, ನವೆಂಬರ್ 25: ಜಾರ್ಖಂಡ್ ನಲ್ಲಿ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಹಿಂದಿನ ಕಾಂಗ್ರೆಸ್ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷಗಳ ಆಡಳಿತದ ಮೇಲೆ ವಾಗ್ದಾಳಿ ನಡೆಸಿದ ಮೋದಿ, ಈ ಪಕ್ಷಗಳು ಅಧಿಕಾರದ ತೃಷೆಗಾಗಿ ಕಿತ್ತಾಡಿಕೊಂಡರು. ರಾಜ್ಯದ ಸಂಪನ್ಮೂಲಗಳನ್ನು ತನ್ನ ಸ್ವಾರ್ಥಕ್ಕೆ ಬಳಸಿಕೊಂಡಾಗ ಜನರು ಇವರನ್ನು ತಿರಸ್ಕರಿಸಿದರು ಎಂದರು.
"ಈ ಚುನಾವಣೆಯು ಸೇವೆ ಮಾಡುವವರು ಮತ್ತು ಲೂಟಿಕೋರರ ನಡುವಿನ ಸ್ಪರ್ಧೆಯಾಗಿದೆ. ಕಾಂಗ್ರೆಸ್ ನಲ್ಲಿ ಸಮಸ್ಯೆಗಳಿವೆ, ನಮ್ಮಲ್ಲಿ ಪರಿಹಾರಗಳಿವೆ. ಅವರ ಮೇಲೆ ಆರೋಪಗಳಿವೆ, ನಮ್ಮಲ್ಲಿ ಮಾಡಿದ ಕೆಲಸದ ವರದಿ ಇವೆ. ಅವರಲ್ಲಿ ಖಾಲಿ ಭರವಸೆಗಳಿವೆ, ನಮ್ಮಲ್ಲಿ ಅಭಿವೃದ್ದಿ ಪುರಾವೆಗಳಿವೆ" ಎಂದು ಜಾರ್ಖಂಡ್ ನ ಡಾಲ್ಟೋಗಂಜ್ ನಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು.
ಕಾಶ್ಮೀರದ ವಿಶೇಷ ಸ್ಥಾನಮಾನ ಮತ್ತು ಅಯೋಧ್ಯೆಯ ವಿವಾದಗಳನ್ನು ನಾವು ರದ್ದು ಪಡಿಸಿದ್ದೇವೆ ಎಂದ ಮೋದಿ, ಹಿಂದಿನ ಕಾಂಗ್ರೆಸ್ ಸರ್ಕಾರಗಳು ತಮ್ಮ ಮತ ಬ್ಯಾಂಕ್ ಗಾಗಿ ಇಂತಹ ವಿಷಗಳನ್ನು ನಿರ್ಲಕ್ಷಿಸಿದ್ದರು ಎಂದು ಕಿಡಿಕಾರಿದರು.

ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳು ರಾಮ ಜನ್ಮಭೂಮಿಯ ಬಗ್ಗೆ ಏನು ಮಾಡಿದರ? ಹೇಗೆ ರಾಜಕೀಯ ಆಟಗಳನ್ನು ಆಡಿದರು? ಈ ಸಮಾಜವನ್ನು ಹೇಗೆ ವಿಭಜಿಸಲಾಯಿತು? ಇವರು ಮತಬ್ಯಾಂಕ್ ಸಲುವಾಗಿ ರಾಮ ಜನ್ಮಭೂಮಿ ವಿಷಯವನ್ನು ನೇಣು ಹಾಕಿದ್ದರು. ಅದನ್ನು ನಿರ್ಧರಿಸಲು ಇವರು ಅನುಮತಿ ಕೊಡಲಿಲ್ಲ ಎಂದು ಟೀಕಿಸಿದರು.
ಜಾರ್ಖಂಡ್ ನ ಮತ್ತೊಂದು ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ರಾಜಕೀಯ ಅಸ್ಥಿರತೆಯಿಂದಾಗಿ, ಬಿಜೆಪಿಯೇತರ ಸಕಾರಗಳ ಆಡಳಿತದಲ್ಲಿ ನಕ್ಸಲರು ಪ್ರವರ್ಧಮಾನಕ್ಕೆ ಬಂದರು ಎಂದು ವಿಪಕ್ಷಗನ್ನು ಟೀಕಿಸಿದರು.
ಇದೇ ಸಂದರ್ಭದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ರಘುಬರ್ ದಾಸ್ ನೇತೃತ್ವದ ಸರ್ಕಾರ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದ್ದಕ್ಕಾಗಿ ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದರು. 2000 ರಲ್ಲಿ ರಚನೆಗೊಂಡ ನಂತರ ಐದು ವರ್ಷ ಪೂರ್ಣಗೊಳಿಸಿದ್ದು ಇದು ಮೊದಲನೆಯದಾಗಿದೆ.
ಕಳೆದ ಐದು ವರ್ಷಗಳಲ್ಲಿ ಜಾರ್ಖಂಡ್ ನಲ್ಲಿ ಬಿಜೆಪಿ ಸರ್ಕಾರ ಉತ್ತಮ ಆಡಳಿತ ನೀಡಿದ್ದರಿಂದಲೇ, ರಾಜ್ಯದ ಇತಿಹಾಸದಲ್ಲಿ ಮುಖ್ಯಮಂತ್ರಿಯೊಬ್ಬರು ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದ್ದಾರೆ ಎಂದು ಮೋದಿ ತಿಳಿಸಿದರು. ಕೇಂದ್ರ ಮತ್ತು ರಾಜ್ಯದಲ್ಲಿ ಪಕ್ಷವು ಅಧಿಕಾರದಲ್ಲಿದ್ದ ಕಾರಣ ಜಾರ್ಖಂಡ್ ನ ಡಬಲ್ ಎಂಜಿನ್ ಬೆಳವಣಿಗೆ ಸಾಧ್ಯವಾಯಿತು ಎಂದರು.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?










Click it and Unblock the Notifications