Breaking: ಸಿಬಿಐ ಅಧಿಕಾರಿಗಳು ಎಂದು 35 ಲಕ್ಷ ದೋಚಿದ ದರೋಡೆಕೋರರು
ರಾಂಚಿ, ಆಗಸ್ಟ್ 18: ಬ್ಯಾಂಕ್ ಮೇಲೆ ದಾಳಿ ನಡೆಸಲು ಬಂಧಿರುವ ಸಿಬಿಐ (ಕೇಂದ್ರ ತನಿಖಾ ದಳ) ಅಧಿಕಾರಿಗಳು ಎಂದು ಹೇಳಿ ದರೋಡೆಕೋರರು 35 ಲಕ್ಷ ದೋಚಿರುವ ಘಟನೆ ಜಾರ್ಖಂಡ್ನ ಜಮ್ಶೆಡ್ಪುರದ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನಡೆದಿದೆ.
ನಾಲ್ವರು ಶಸ್ತ್ರಸಜ್ಜಿತ ದರೋಡೆಕೋರರ ಗುಂಪು ಗುರುವಾರ ಜಮ್ಶೆಡ್ಪುರದ ಬ್ಯಾಂಕ್ ಆಫ್ ಇಂಡಿಯಾದ ಮಂಗೋ ಶಾಖೆಯಲ್ಲಿ ಬ್ಯಾಂಕ್ ಸಿಬ್ಬಂದಿ ಮತ್ತು ಗ್ರಾಹಕರನ್ನು ಗನ್ ಪಾಯಿಂಟ್ನಲ್ಲಿ ಒತ್ತೆಯಾಳಾಗಿ ಇಟ್ಟುಕೊಂಡು ಸುಮಾರು ₹ 30 ರಿಂದ 35 ಲಕ್ಷವನ್ನು ದೋಚಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಖವಾಡ ಧರಿಸಿದ್ದ ದರೋಡೆಕೋರರು ತಮ್ಮ ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಬ್ಯಾಕ್ನಲ್ಲಿದ್ದ ಗ್ರಾಹಕರು ಹೇಳಿದರು. ಅವರು ಸಿಬಿಐ (ಕೇಂದ್ರ ತನಿಖಾ ದಳ) ಅಧಿಕಾರಿಗಳು ಎಂದು ಹೇಳಿ ಎಲ್ಲರಿಗೂ ನೆಲದ ಮೇಲೆ ಬಗ್ಗಿ ನಿಲ್ಲಲು ಹೇಳಿದರು. ನಿರಾಕರಿಸಿದವರಿಗೆ ಪಿಸ್ತೂಲು ತೋರಿಸಿ ಬೆದರಿಸಿದ್ದಾರೆ ಎಂದು ತಿಳಿಸಿದ್ದಾರೆ.

"ನಾನು ಇಲ್ಲಿಗೆ ತಲುಪಿದಾಗ, ಅವರವರ ಸ್ಥಳದಲ್ಲಿ ಬ್ಯಾಂಕ್ ಸಿಬ್ಬಂದಿಯನ್ನು ಕಾಣಲಿಲ್ಲ. ಗೇಟಿನಲ್ಲಿ ನಿಂತಿದ್ದ ಇಬ್ಬರು ದರೋಡೆಕೋರರು ನನ್ನನ್ನು ಒಳಗೆ ಕುಳಿತುಕೊಳ್ಳುವಂತೆ ಹೇಳಿ ನನ್ನ ಮೊಬೈಲ್ ಕೇಳಿದರು. ನಾನು ನಿರಾಕರಿಸಿದಾಗ, ಅವರು ರಿವಾಲ್ವರ್ ಅನ್ನು ಹೊರತೆಗೆದು ನಾವು ಬ್ಯಾಂಕ್ನಲ್ಲಿ ದಾಳಿ ನಡೆಸುತ್ತಿರುವ ಸಿಬಿಐನಿಂದ ಬಂದವರು ಎಂದು ಹೇಳಿದರು" ಎಂದು ಪ್ರತ್ಯಕ್ಷದರ್ಶಿ ಸುಮನ್ ದೇವಿ ಹೇಳಿದ್ದಾರೆ.
ಇನ್ನೊಬ್ಬ ಪ್ರತ್ಯಕ್ಷದರ್ಶಿ "ನಾವು ವಿರೋಧಿಸುತ್ತಿದ್ದಂತೆ, ಅವರು ಗುಂಡು ಹಾರಿಸುವುದಾಗಿ ಬೆದರಿಕೆ ಹಾಕಿದರು. ಆಗ ನಮಗೆ ಅರಿವಾಯಿತು, ಏನೋ ತಪ್ಪಾಗಿದೆ ಎಂದು. ನಂತರ, ಅವರು ತಮ್ಮ ಬ್ಯಾಗ್ನಲ್ಲಿ ಹಣವನ್ನು ಇಟ್ಟುಕೊಂಡು ಹೊರಟರು. ಇಷ್ಟೆ ಅಲ್ಲದೆ ಅವರು ಹೊರಡುವ ಮುನ್ನ ಮುಖ್ಯ ಗೇಟ್ಗೆ ಬೀಗ ಹಾಕಿ, ಎಲ್ಲಾ ಮೊಬೈಲ್ ಫೋನ್ಗಳನ್ನು ಅಲ್ಲಿಯೇ ಎಸೆದರು" ಎಂದಿದ್ದಾರೆ.
ಘಟನೆ ಕುರಿತು ತನಿಖೆ ಆರಂಭಿಸಲಾಗಿದೆ ಎಂದು ಜಮ್ಶೆಡ್ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪ್ರಭಾತ್ ಕುಮಾರ್ ತಿಳಿಸಿದ್ದಾರೆ.
"ಪ್ರಾಥಮಿಕ ತನಿಖೆ ಮಾಹಿತಿಯಂತೆ ಬ್ಯಾಂಕ್ ಒಳಗೆ ನಾಲ್ವರು ದರೋಡೆಕೋರರು ಇದ್ದರು ಎಂದು ಅಲ್ಲಿದ್ದವರು ತಿಳಿಸಿದ್ದಾರೆ. ನಿಖರವಾದ ಲೂಟಿ ಮೊತ್ತವನ್ನು ಇನ್ನೂ ಖಚಿತಪಡಿಸಬೇಕಾಗಿದೆ. ಆದರೆ, ಸುಮಾರು 30-35 ಲಕ್ಷದ ನಡುವೆ ಇದೆ ಎಂದು ಸಿಬ್ಬಂದಿ ಹೇಳಿದ್ದಾರೆ. ದರೋಡೆಕೋರರು ಶಸ್ತ್ರಸಜ್ಜಿತರಾಗಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ತನಿಖೆ ಮುಗಿದ ನಂತರ ನಾವು ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳುತ್ತೇವೆ" ಎಂದು ಮಾಹಿತಿ ನೀಡಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications