'ಇನ್ನೊಬ್ಬರ ಮನೆ ಧ್ವಂಸ ಮಾಡಲು ನೀವು ಯಾರು?' ಸರ್ಕಾರಕ್ಕೆ ಓವೈಸಿ ಪ್ರಶ್ನೆ

ರಾಂಚಿ, ಜೂನ್ 11: ಪ್ರವಾದಿ ವಿರುದ್ಧ ನೀಡಿದ ಹೇಳಿಕೆಗಳ ಖಂಡಿಸಿ ಶುಕ್ರವಾರದ (ಜೂನ್ 10) ಪ್ರಾರ್ಥನೆಯ ನಂತರ ಹಲವಾರು ರಾಜ್ಯಗಳಲ್ಲಿ ಭುಗಿಲೆದ್ದ ಹಿಂಸಾಚಾರದ ಕುರಿತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಇದು ನಡೆಯದಂತೆ ಸರ್ಕಾರ ಕಟ್ಟೆಚ್ಚರ ವಹಿಸಬೇಕು ಎಂದು ಅವರು ಹೇಳಿದರು ಮತ್ತು ಅನೇಕ ಸ್ಥಳಗಳಲ್ಲಿ ಪ್ರತಿಭಟನೆಗಳು ಶಾಂತಿಯುತವಾಗಿವೆ. ಅಮಾನತುಗೊಂಡಿರುವ ಬಿಜೆಪಿ ವಕ್ತಾರ ನೂಪುರ್ ಶರ್ಮಾ ಅವರ ವಿರುದ್ಧ ಕ್ರಮ ಕೈಗೊಳ್ಳಲು ವಿಳಂಬವಾಗಿದೆ. ಅವರನ್ನು ಕೂಡಲೇ ಬಂಧಿಸಬೇಕು ಎಂದು ಓವೈಸಿ ಒತ್ತಾಯಿಸಿದರು.

ಓವೈಸಿ, "ಕೆಲವು ಸ್ಥಳಗಳಲ್ಲಿ, ಪ್ರತಿಭಟನೆಗಳು ಶಾಂತಿಯುತವಾಗಿತ್ತು, ಹಲವೆಡೆ ಹಿಂಸಾಚಾರ ಆಗಬಾರದಿತ್ತು. ಯಾರೂ ಹಿಂಸಾಚಾರದಲ್ಲಿ ಪಾಲ್ಗೊಳ್ಳಬಾರದು. ಅಥವಾ ಇಬ್ಬರು ಸತ್ತಿದ್ದಾರೆ ಎಂದು ಪೊಲೀಸರು ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು'' ಎಂದು ನಿನ್ನೆ ರಾಂಚಿಯಲ್ಲಿ ಪೊಲೀಸರು ನಡೆಸಿದ ಗುಂಡಿನ ದಾಳಿ ಬಗ್ಗೆ ಓವೈಸಿ ಮಾತನಾಡಿದರು. 'ಯಾವುದೇ ಹಿಂಸಾಚಾರ ನಡೆಯಬಾರದು. ಪ್ರಜಾಪ್ರಭುತ್ವಕ್ಕೆ ಇದು ಬಹಳ ಮುಖ್ಯ. ಆದರೆ ಅದು ನಡೆಯದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ' ಎಂದು ಓವೈಸಿ ಹೇಳಿದರು.

ಗಲಭೆಕೋರರ ವಿರುದ್ಧ ಕ್ರಮ

ಗಲಭೆಕೋರರ ವಿರುದ್ಧ ಕ್ರಮ

ಜೊತೆಗೆ ಉತ್ತರ ಪ್ರದೇಶದಲ್ಲಿ ಗಲಭೆಕೋರರ ವಿರುದ್ಧ ಕ್ರಮ ಕೈಗೊಳ್ಳುತ್ತಿರುವ ಕುರಿತು ಮಾತನಾಡಿದ ಓವೈಸಿ, 'ಯಾರೊಬ್ಬರ ಮನೆಯನ್ನು ಧ್ವಂಸ ಮಾಡಲು ನೀವು (ಸರ್ಕಾರ) ಯಾರು... ಶಿಕ್ಷೆಯನ್ನು ನಿರ್ಧರಿಸುವುದು ನ್ಯಾಯಾಲಯದ ಕೆಲಸ... ನೀವು ಮುಖ್ಯ ನ್ಯಾಯಮೂರ್ತಿಯೇ ಅಥವಾ ನ್ಯಾಯಾಲಯವೇ.. ನೀವು ಎಲ್ಲವನ್ನೂ ನಿರ್ಧರಿಸಲು ಹೋದರೆ ನ್ಯಾಯಾಧೀಶರ ಅವಶ್ಯಕತೆ ಯಾಕೆ ಬೇಕು?" ಎಂದು ಪ್ರಶ್ನಿಸಿದ್ದಾರೆ.

ಬಂಧನಕ್ಕೆ ಒತ್ತಾಯಿಸಿದ ಓವೈಸಿ

ಬಂಧನಕ್ಕೆ ಒತ್ತಾಯಿಸಿದ ಓವೈಸಿ

ನೂಪುರ್ ಶರ್ಮಾ ಅವರನ್ನು ಬಂಧಿಸಲಾಗಿಲ್ಲ, ಈ ದೇಶದ ಕಾನೂನಿನ ಪ್ರಕಾರ ಅವರನ್ನು ಬಂಧಿಸಬೇಕು ಎಂದು ಓವೈಸಿ ಒತ್ತಾಯಿಸಿದರು. "ಅವರ ಅಮಾನತು ಸಮಸ್ಯೆಯನ್ನು ಪರಿಹರಿಸುತ್ತದೆ ಎಂದು ಬಿಜೆಪಿ ಯೋಚಿಸುತ್ತಿದ್ದರೆ ಅದು ಹಾಗೆ ಆಗುವುದಿಲ್ಲ... ಅವರನ್ನು ಬಂಧಿಸಬೇಕು ಎಂಬುದು ನಮ್ಮ ಬೇಡಿಕೆ" ಎಂದು ಒವೈಸಿ ಹೇಳಿದರು.

ಭದ್ರತಾ ಸಿಬ್ಬಂದಿ ಸೇರಿದಂತೆ ಹಲವರಿಗೆ ಗಾಯ

ಭದ್ರತಾ ಸಿಬ್ಬಂದಿ ಸೇರಿದಂತೆ ಹಲವರಿಗೆ ಗಾಯ

ಶುಕ್ರವಾರ ಇಬ್ಬರು ಅಮಾನತುಗೊಂಡ ಬಿಜೆಪಿ ವಕ್ತಾರರು ಪ್ರವಾದಿ ಮೊಹಮ್ಮದ್ ಕುರಿತು ಮಾಡಿದ ಕಾಮೆಂಟ್‌ಗಳ ಕುರಿತು ರಾಂಚಿಯಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿದ್ದರಿಂದ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಭದ್ರತಾ ಸಿಬ್ಬಂದಿ ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಯ ಪ್ರಕಾರ ಇಬ್ಬರು ವ್ಯಕ್ತಿಗಳು ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ.

ಸಾಕಷ್ಟು ಭದ್ರತಾ ಪಡೆ ನಿಯೋಜನೆ

ಸಾಕಷ್ಟು ಭದ್ರತಾ ಪಡೆ ನಿಯೋಜನೆ

ಸಿಆರ್‌ಪಿಸಿಯ ಸೆಕ್ಷನ್ 144 ರ ಅಡಿಯಲ್ಲಿ ಸುಕ್‌ದೇವ್ ನಗರ, ಲೋವರ್ ಬಜಾರ್, ಡೈಲಿ ಮಾರ್ಕೆಟ್ ಮತ್ತು ಹಿಂದ್‌ಪಿಡಿ ಸೇರಿದಂತೆ 12 ಪೊಲೀಸ್ ಠಾಣಾ ಪ್ರದೇಶಗಳಲ್ಲಿ ಯಾವುದೇ ಹೆಚ್ಚಿನ ಸ್ಫೋಟಗಳನ್ನು ತಡೆಗಟ್ಟಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜಿಲ್ಲೆಯಲ್ಲಿ ಇಂಟರ್‌ನೆಟ್ ಸ್ಥಗಿತಗೊಳಿಸಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ನಿಗಾ ವಹಿಸಲಾಗಿದೆ. ಸಾಕಷ್ಟು ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿ ಹಾಗೂ ವಿಡಿಯೋಗಳನ್ನು ಪರಿಶೀಲನೆ ನಡೆಸಲಾಗುತ್ತಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ರಾಜ್ಯ ರಾಜಧಾನಿಯನ್ನು ಬೆಚ್ಚಿಬೀಳಿಸಿದ ಘರ್ಷಣೆಯಲ್ಲಿ ಸುಮಾರು ಎರಡು ಡಜನ್ ಜನರು ಗಾಯಗೊಂಡಿದ್ದಾರೆ. ತೀವ್ರವಾಗಿ ಗಾಯಗೊಂಡ 13 ಜನರನ್ನು ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆ (RIMS) ಗೆ ದಾಖಲಿಸಲಾಗಿದೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+