Sakleshpur Elections: ಜೆಡಿಎಸ್ ಸರಣಿ ಜಯಕ್ಕೆ ಬ್ರೇಕ್ ಹಾಕಲು ಬಿಜೆಪಿ, ಕಾಂಗ್ರೆಸ್ ರಣತಂತ್ರ
ಹಾಸನ, ಮಾರ್ಚ್ 25: ಕರ್ನಾಟಕದ ಊಟಿ ಸಕಲೇಶಪುರ. ಸಹ್ಯಾದಿ ಪರ್ವತಗಳು, ಹಚ್ಚ ಹಸಿರಿನ ಕಾಡು, ಗಿರಿ ಶಿಖರಗಳು, ಕಾಫಿ ತೋಟಗಳು, ಜಲಪಾತಗಳು, ಝರಿ ಹೀಗೆ ಸಕಲೇಶಪುರ ತನ್ನ ಶ್ರೀಮಂತವಾದ ಪ್ರಕೃತಿ ಸೌಂದರ್ಯಕ್ಕೆ ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ.
ಆಲೂರು-ಸಕಲೇಶಪುರ ಮಲೆನಾಡು ಹಾಗೂ ಅರೆ ಮಲೆನಾಡನ್ನು ಹೊಂದಿದ್ದು, ಬಿಸಿಲೆ ಅರಣ್ಯ ಪ್ರದೇಶ, ಕಾಡುಮನೆ ಟೀ ಎಸ್ಟೇಟ್ ಹಾಗೂ ಮಂಝ್ರಾಭಾದ್ ಕೋಟೆ ಪ್ರವಾಸಿಗರನ್ನು ಆಕರ್ಷಿಸುತ್ತವೆ. ಸಕಲೇಶಪುರದಲ್ಲಿ ಸಕಲೈಶ್ವರ್ಯ ಸ್ವಾಮಿ ದೇವಸ್ಥಾನ ಕೂಡ ಇದೆ. ಆಲೂರಿನ ಮೂಲ ಹೆಸರು ಮರಸು ಆಲೂರು. ಈ ಹಿಂದೆ ಗ್ರಾಮದಂತಿದ್ದ ಈ ಪ್ರದೇಶ ಸದ್ಯ ಪಟ್ಟಣವಾಗಿ ಬೆಳೆದು ನಿಂತಿದೆ.

ಆಲೂರು ಮತ್ತು ಸಕಲೇಶಪುರ ಕ್ಷೇತ್ರದ ಜನರ ಮೂಲ ಕಸುಬು ಕೃಷಿ. ಮೆಣಸು, ಏಲಕ್ಕಿ, ಶುಂಠಿ ಹಾಗೂ ಚಹಾ ಬೆಳೆದರೂ ಕಾಫಿ ಇಲ್ಲಿನ ಪ್ರಮುಖ ವಾಣಿಜ್ಯ ಬೆಳೆ. ಹೀಗಾಗಿ ಏಲಕ್ಕಿ ಹಾಗೂ ಕಾಫಿ ಸಂಶೋಧನೆ ಹಾಗೂ ವಾಣಿಜ್ಯ ಕೇಂದ್ರವಾಗಿ ಸಕಲೇಶಪುರ ಗುರುತಿಸಿಕೊಂಡಿದೆ. ಇನ್ನು ಕೋವಿ ಅಥವಾ ಗನ್ಗಳ ರೀಪೇರಿಗೆ ಆಲೂರು ಹೆಸರುವಾಸಿಯಾಗಿದೆ.
ಪ್ರಕೃತಿ ಸೌಂದರ್ಯಕ್ಕೆ ಹೆಸರುವಾಸಿಯಾದ ಆಲೂರು-ಸಕಲೇಶಪುರ ವಿಧಾನಸಭಾ ಕ್ಷೇತ್ರ ವಿಸ್ತಿರ್ಣದಲ್ಲಿ ಬಹಳ ದೊಡ್ಡದಿದೆ. ಆಲೂರು ಮತ್ತು ಸಕಲೇಶಪುರ ಮೊದಲು ಬೇರೆ ಬೇರೆ ಕ್ಷೇತ್ರಗಳಾಗಿದ್ದವು. ಮರು ವಿಂಗಡಣೆ ಬಳಿಕ ಆಲೂರು-ಸಕಲೇಶಪುರ ವಿಧಾನಸಭಾ ಕ್ಷೇತ್ರವಾಗಿ ಮಾರ್ಪಟ್ಟಿದೆ. ಬಹುದೊಡ್ಡ ಕ್ಷೇತ್ರ ಆಲೂರು-ಸಕಲೇಶಪುರದ ರಾಜಕೀಯ ವಿಶ್ಲೇಷಣೆ ಇಲ್ಲಿದೆ.
ಆಲೂರು-ಸಕಲೇಶಪುರ ವಿಧಾನಸಭಾ ಕ್ಷೇತ್ರದ ರಾಜಕೀಯ ಹಿನ್ನೆಲೆ
ಸಕಲೇಶಪುರ ಜೆಡಿಎಸ್ನ ಭದ್ರಕೋಟೆಯಾಗಿದೆ. 1962 ರಿಂದ 1983ರವರೆಗೆ ಇಲ್ಲಿ ಕಾಂಗ್ರೆಸ್ ಹಾಗೂ ಸ್ವತಂತ್ರ ಅಭ್ಯರ್ಥಿಗಳು ಗೆಲವು ಸಾಧಿಸಿದರೆ. 1985ರಲ್ಲಿ ಬಿಜೆಪಿಯ ಬಸವರಾಜ್ ಗೆಲುವು ಸಾಧಿಸಿದರು. 1989ರ ಚುನಾವಣೆಯಲ್ಲಿ ಗುರುದೇವ್ ಸ್ಫರ್ಧಿಸಿ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ತೆಕ್ಕೆಗೆ ತಂದರು. 1994ರಲ್ಲಿ ಮತ್ತೆ ಸಕಲೇಶಪುರ ಕ್ಷೇತ್ರ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದಿತು.1999ರಲ್ಲೂ ಬಿ. ಬಿ. ಶಿವಪ್ಪ ಕ್ಷೇತ್ರದಲ್ಲಿ ಗೆಲುವು ಸಾಧಿಸಿದರು.

2004ರಿಂದ ಆಲೂರು-ಸಕಲೇಶಪುರ ಕ್ಷೇತ್ರ ಜೆಡಿಎಸ್ನ ಭದ್ರಕೋಟೆಯಾಗಿದೆ. ಎಚ್. ಎ. ವಿಶ್ವನಾಥ್ ಸಕಲೇಶಪುರದಲ್ಲಿ ಜೆಡಿಎಸ್ ಖಾತೆ ತೆರೆದರು. ಇದಾದ ಬಳಿಕ 2008, 2013 ಹಾಗೂ 2018 ಮೂರು ಅವಧಿಯಲ್ಲೂ ಎಚ್.ಕೆ. ಕುಮಾರಸ್ವಾಮಿ ಇಲ್ಲಿ ಸತತವಾಗಿ ಗೆಲುವು ಸಾಧಿಸಿದ್ದು, ಈ ಬಾರಿಯೂ ಗೆಲವುವಿನ ನಿರೀಕ್ಷೆಯಲ್ಲಿದ್ದಾರೆ.
ಇನ್ನು ಈ ಬಾರಿ ಆಲೂರು-ಸಕಲೇಶಪುರ ಕ್ಷೇತ್ರದಲ್ಲಿ ಬಿಜೆಪಿಯಿಂದ ನಾರ್ವೆ ಸೋಮಶೇಖರ್, ಸಿಮೆಂಟ್ ಮಂಜು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಇನ್ನು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಶನಿವಾರ(ಮಾರ್ಚ್ 25) ರಂದು ಬಿಡುಗಡೆಯಾಗಿದ್ದು, ಮುರಳಿ ಮೋಹನ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಜೆಡಿಎಸ್ನಿಂದ ಕ್ಷೇತ್ರದಲ್ಲಿ ಕಳೆದ ಮೂರು ಅವಧಿಗಳಲ್ಲಿ ತಮ್ಮ ಪ್ರಾಬಲ್ಯ ಸಾಧಿಸಿರುವ ಹಾಲಿ ಶಾಸಕ ಎಚ್. ಕೆ. ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಹೆಚ್ಚಿದೆ.
ಆಲೂರು-ಸಕಲೇಶಪುರ ವಿಧಾನಸಭಾ ಕ್ಷೇತ್ರದ 2018 ಚುನಾವಣೆ ಫಲಿತಾಂಶ
2018 ಚುನಾವಣೆಯಲ್ಲಿ ಸಕಲೇಶಪುರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ನ ಎಚ್ ಕೆ ಕುಮಾರಸ್ವಾಮಿ 62,262 ಮತಗಳನ್ನು ಪಡೆಯವ ಮೂಲಕ, 57,320 ಮತಗಳನ್ನು ಪಡೆದ ಬಿಜೆಪಿ ಅಭ್ಯರ್ಥಿ ಸೋಮಶೇಖರ್ ಜಯರಾಜ್, 37,002 ಮತಗಳನ್ನು ಪಡೆದ ಕಾಂಗ್ರೆಸ್ ಅಭ್ಯರ್ಥಿ ಸಿದ್ದಯ್ಯ ಅವರಿಗೆ ಸೋಲುಣಿಸಿದ್ದರು.
Sakleshpur Karnataka Elections
| ವರ್ಷ | ಗೆದ್ದವರು | ಮತಗಳು | ಸೋತವರು | ಮತಗಳು |
| 2018 | ಎಚ್.ಕೆ ಕುಮಾರಸ್ವಾಮಿ (ಜೆಡಿಎಸ್) | 62,262 | Somashekar Jayaraj (ಬಿಜೆಪಿ ) | 57,320 |
| 2013 | ಎಚ್. ಕೆ ಕುಮಾರಸ್ವಾಮಿ (ಜೆಡಿಎಸ್) | 63,602 | ಡಿ. ಮಲ್ಲೇಶ್ (ಕಾಂಗ್ರೆಸ್ ) | 30,533 |
| 2008 | ಎಚ್. ಕೆ ಕುಮಾರಸ್ವಾಮಿ (ಜೆಡಿಎಸ್) | 49,768 | ನಿರ್ವಾಣಯ್ಯ (ಬಿಜೆಪಿ ) | 36,473 |

ಆಲೂರು-ಸಕಲೇಶಪುರ ವಿಧಾನಸಭಾ ಕ್ಷೇತ್ರದ ಮತದಾರರ ವಿವರ
ಆಲೂರು-ಸಕಲೇಶಪುರ ವಿಧಾನಸಭಾ ಕ್ಷೇತ್ರದಲ್ಲಿ ಸ್ಥಳೀಯ ಕನ್ನಡ ಭಾಷೆಯ ಜೊತೆಗೆ ತುಳು ಮತ್ತು ಬ್ಯಾರಿ ಭಾಷೆ ಮಾತನಾಡುವ ಸಾಕಷ್ಟು ಜನರಿದ್ದಾರೆ. ಇದು ಮೀಸಲು ಕ್ಷೇತ್ರವಾಗಿದ್ದು, ಲಿಂಗಾಯತರು ಹಾಗೂ ಒಕ್ಕಲಿಗರು ಪ್ರಬಲರಾಗಿದ್ದಾರೆ. ಇದೆಲ್ಲದರ ನಡುವೆ ಕಾಫಿ ಎಸ್ಟೇಟ್ ಮಾಲೀಕರು ಕೂಡ ಚುನಾವಣಾ ಸಂದರ್ಭದಲ್ಲಿ ದೊಡ್ಡ ಮಟ್ಟದ ಪ್ರಭಾವ ಬೀರುತ್ತಾರೆ.
ಆಲೂರು-ಸಕಲೇಶಪುರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,93,000 ಮತದಾರರಿದ್ದಾರೆ.ಒಕ್ಕಲಿಗರು-70,000
ಲಿಂಗಾಯಿತರು-45,000
ದಲಿತರು-40,000
ಅಲ್ಪಸಂಖ್ಯಾತರು-18 ,000
ಬ್ರಹ್ಮಣ, ಬಂಟ್ಸ್, ಮುಸ್ಲಿಂ , ಕ್ರಿಶ್ಚಿಯನ್, ಒಂದು ಲಕ್ಷದ ಇಪ್ಪತೈದು ಸಾವಿರ ಮತಗಳಿರುವ ಮಾಹಿತಿ ಲಭ್ಯವಾಗಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications