ಚತುಷ್ಪಥವಾಗಲಿದೆ ಶಿವಮೊಗ್ಗ-ತುಮಕೂರು ರಸ್ತೆ
ಶಿವಮೊಗ್ಗ, ಫೆಬ್ರವರಿ 14 : ಶಿವಮೊಗ್ಗ ಭಾಗದ ಜನರ ಹಲವು ದಿನಗಳ ಬೇಡಿಕೆ ಈಡೇರುತ್ತಿದೆ. ಫೆ.19ರಂದು ಶಿವಮೊಗ್ಗ-ತುಮಕೂರು ರಸ್ತೆಯನ್ನು ನಾಲ್ಕು ಪಥದ ರಸ್ತೆಯಾಗಿ ಅಭಿವೃದ್ಧಿಗೊಳಿಸುವ ಕಾಮಗಾರಿಗೆ ಶಂಕುಸ್ಥಾಪನೆ ನಡೆಯಲಿದೆ.
ಶಿವಮೊಗ್ಗ-ತುಮಕೂರು ನಡುವೆ ಪ್ರಸ್ತುತ ದ್ವಿಪಥದ ರಸ್ತೆ ಇದೆ. ಇದನ್ನು ನಾಲ್ಕು ಪಥದ ರಸ್ತೆಯಾಗಿ ಅಭಿವೃದ್ಧಿ ಮಾಡಲಾಗುತ್ತದೆ. ಫೆ.19ರಂದು ಯೋಜನೆಗೆ ಶಂಕುಸ್ಥಾಪನೆಯನ್ನು ಮಾಡಲಾಗುತ್ತದೆ.
ಸಿಗಂದೂರಿಗೆ ಸೇತುವೆ : ದಶಕಗಳ ಕನಸು ನನಸು
ಕರ್ನಾಟಕ ಬಿಜೆಪಿ ಅಧ್ಯಕ್ಷ, ಶಿವಮೊಗ್ಗ ಸಂಸದ ಬಿ.ಎಸ್.ಯಡಿಯೂರಪ್ಪ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಯೋಜನೆಗೆ ಶಂಕುಸ್ಥಾಪನೆ ಮಾಡಲಿದ್ದಾರೆ.
'ಶಿವಮೊಗ್ಗ-ತುಮಕೂರು ದ್ವಿಪಥ ರಸ್ತೆಯನ್ನು ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿ ಮಾಡಲಾಗುತ್ತದೆ. ಈ ಯೋಜನೆಗೆ ಸುಮಾರು 3600 ಕೋಟಿ ವೆಚ್ಚವಾಗಲಿದೆ' ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
'ಶಿವಮೊಗ್ಗ-ಹೊನ್ನಾಳಿ, ಶಿವಮೊಗ್ಗ-ಹಾವೇರಿ ರಸ್ತೆಗಳನ್ನು ಉನ್ನತೀಕರಣ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಇದು ನಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ಸಿಕ್ಕ ಫಲ' ಎಂದು ಯಡಿಯೂರಪ್ಪ ಹೇಳಿದರು.
ಶಿರಾಡಿ ಘಾಟ್ ಬಂದ್, ಪರ್ಯಾಯ ಮಾರ್ಗಗಳು
ಹಲವು ಕಾಮಗಾರಿಗೆ ಚಾಲನೆ : ಫೆ.19ರಂದು ಸಚಿವ ನಿತಿನ್ ಗಡ್ಕರಿ ಅವರು ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.
ಸಾಗರ ತಾಲೂಕಿನ ಸಿಗಂಧೂರಿಗೆ ಹೋಗಲು ಅನುಕೂಲವಾಗುವಂತೆ ಕಳಸವಳ್ಳಿ-ಅಂಬಾರಗೋಡ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣವಾಗಲಿದೆ. ಈ ಯೋಜನೆಗೂ ಗಡ್ಕರಿ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.