ಸಾಗರದಲ್ಲಿ ಸಿಲಿಂಡರ್ ಸಾಗಣೆ ಲಾರಿ ಸ್ಫೋಟ, ಚಾಲಕ ಸಜೀವ ದಹನ
ಶಿವಮೊಗ್ಗ, ನವೆಂಬರ್ 15: ಸಿಲಿಂಡರ್ ಸಾಗಿಸುತ್ತಿದ್ದ ಲಾರಿಯೊಂದು ಸ್ಫೋಟಗೊಂಡಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತಾಳಗುಪ್ಪದ ಬಳಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ, ಲಾರಿಯು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಸಿಲಿಂಡರ್ ಸ್ಫೋಟಗೊಂಡಿದ್ದು, ಚಾಲಕ ಕೃಷ್ಣಮೂರ್ತಿ ಬೆಂಕಿಯಲ್ಲೇ ಬೆಂದು ಹೋಗಿದ್ದಾರೆ. ಕೃಷ್ಣಮೂರ್ತಿ ಭದ್ರಾವತಿಯ ಮಾವಿನಕಟ್ಟೆ ಗ್ರಾಮದವರು ಎನ್ನಲಾಗಿದ್ದು, ಬೆಳಗ್ಗೆ ಸುಮಾರು 4.30ಗೆ ಈ ಘಟನೆ ನಡೆದಿದೆ.
ಅಜ್ಮೇರ್ ನಲ್ಲಿ ಸಿಲೀಂಡರ್ ಸ್ಫೋಟ: 6 ಮಂದಿ ದುರ್ಮರಣ
ಇಂಡಿಯನ್ ಗ್ಯಾಸ್ ಕಂಪನಿಗೆ ಸೇರಿದ್ದ ಲಾರಿ ಇದಾಗಿದ್ದು, ಸಾಗದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರು: ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಮಗು ಸಾವು
ಸ್ಫೋಟದಿಂದ ಆ ಮಾರ್ಗದಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು, ಕ್ರಮೇಣವಾಗಿ ಯಥಾಸ್ಥಿತಿಗೆ ಮರಳಿದೆ, ಕೃಷ್ಣಮೂರ್ತಿ ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ. ಬೆಳಗಿನ ಜಾವ ಮಂಜುಮುಸುಕಿದ್ದರಿಂದ ಅಥವಾ ನಿದ್ದೆಯ ಮಂಪರಿನಲ್ಲಿದ್ದ ಕಾರಣ ಈ ಅನಾಹುತ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.