ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆರ್.ಎಂ. ಮಂಜುನಾಥ ಗೌಡ ಪರ ಪ್ರಚಾರಕ್ಕಿಳಿದ ಗೀತಾ ಶಿವರಾಜ್ ಕುಮಾರ್

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ತೀರ್ಥಹಳ್ಳಿ (ಶಿವಮೊಗ್ಗ), ಮಾರ್ಚ್ 20: ಶಿವರಾಜ್ ಕುಮಾರ್ ಪತ್ನಿ ಹಾಗೂ ಸಾರೆಕೊಪ್ಪ ಬಂಗಾರಪ್ಪ ಪುತ್ರಿ ಗೀತಾ ಶಿವರಾಜ್ ಕುಮಾರ್ ಜೆಡಿಎಸ್ ಪರ ಪ್ರಚಾರಕ್ಕೆ ಧುಮುಕಿದ್ದಾರೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ತೀರ್ಥಹಳ್ಳಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥ, ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ಪರ ಅವರು ಇಂದು ಪ್ರಚಾರ ನಡೆಸಿದರು.ತೀರ್ಥಹಳ್ಳಿಯ ರಿಪ್ಪನ್ ಪೇಟೆ ಸಮೀಪದ ವಡ ಹೊಸಳ್ಳಿ ಗ್ರಾಮದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಪಾಲ್ಗೊಂಡರು.

Geetha Shivarajkumar is campaigning for RM Manjunath Gowda in Thirthahalli

ಕಳೆದ ಬಾರಿ ತೀರ್ಥಹಳ್ಳಿ ಕ್ಷೇತ್ರದಿಂದ ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲೊಪ್ಪಿಕೊಂಡಿದ್ದ ಆರ್.ಎಂ. ಮಂಜುನಾಥ ಗೌಡ ಈ ಬಾರಿ ಜೆಡಿಎಸ್ ನಿಂದ ಸ್ಪರ್ಧಿಸುತ್ತಿದ್ದಾರೆ. ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿರುವ ಅವರು, ಇಲ್ಲಿ ಸತತ ಎರಡು ಬಾರಿ ಗೆದ್ದಿರುವ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಗೆ ಪ್ರಬಲ ಪೈಪೋಟಿ ಒಡುತ್ತಿದ್ದಾರೆ.

Geetha Shivarajkumar is campaigning for RM Manjunath Gowda in Thirthahalli

ಪ್ರಚಾರ ಸಭೆಯಲ್ಲಿ ಸೊರಬ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ, ತಾಲ್ಲೂಕು ಜೆ.ಡಿ.ಎಸ್ ಅಧ್ಯಕ್ಷ ಎಂ.ವಿ. ಜಯರಾಮ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮೀರ್ ಹಂಜಾ, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಎಂ. ಪರಮೇಶ್, ಮಳವಳ್ಳಿ ಮಂಜುನಾಥ್, ಎನ್. ವರ್ತೇಶ್, ಸುಮತಿ ಪೂಜಾರ್ ಇನ್ನೂ ಹಲವು ಉಪಸ್ಥಿತರಿದ್ದರು.

English summary
Karnataka assembly elections 2018: Geetha Shivarajkumar has been campaigning for Manjunath Gowda, JDS candidate for Thirthahalli constituency. She participated in a public meeting held at Vada Hosalli village near Ripponpet, Thirthahalli of Shivamogga district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X