ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ನನ್ನ ವಿರುದ್ಧ ಪಿತೂರಿ ನಡೆಸಿದವರಿಗೆ ನಿರಾಸೆಯಾಗಿದೆ'

|
Google Oneindia Kannada News

ಶಿವಮೊಗ್ಗ, ಅ.17 : 'ನನ್ನ ವಿರುದ್ಧ ಪಿತೂರಿ ನಡೆಸಿದವರಿಗೆ ನಿರಾಸೆಯಾಗಿದೆ. ಪಿತೂರಿ ಬಗ್ಗೆ ಶೀಘ್ರದಲ್ಲೇ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡುತ್ತೇನೆ. ಇದು ಸತ್ಯಕ್ಕೆ ಸಿಕ್ಕ ಜಯ' ಎಂದು ಮಾಜಿ ಸಚಿವ, ಬಿಜೆಪಿ ನಾಯಕ ಹರತಾಳು ಹಾಲಪ್ಪ ಹೇಳಿದರು.

ಅತ್ಯಾಚಾರ ಕೇಸ್ : ಮಾಜಿ ಸಚಿವ ಹರತಾಳು ಹಾಲಪ್ಪಗೆ ಕ್ಲೀನ್ ಚಿಟ್ಅತ್ಯಾಚಾರ ಕೇಸ್ : ಮಾಜಿ ಸಚಿವ ಹರತಾಳು ಹಾಲಪ್ಪಗೆ ಕ್ಲೀನ್ ಚಿಟ್

ಸ್ನೇಹಿತನ ಪತ್ನಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಹಾಲಪ್ಪ ಅವರಿಗೆ ಶಿವಮೊಗ್ಗ ಕೋರ್ಟ್ ಕ್ಲೀನ್ ಚಿಟ್ ನೀಡಿದೆ. ನ್ಯಾಯಾಲಯದ ತೀರ್ಪಿನ ಬಳಿಕ ಮಾತನಾಡಿದ ಹಾಲಪ್ಪ ಅವರು, 'ನ್ಯಾಯಾಲಯದ ಬಗ್ಗೆ ನನಗೆ ಅಪಾರವಾದ ಗೌರವವಿತ್ತು. ಏಳು ವರ್ಷಗಳ ಬಳಿಕ ನನಗೆ ನ್ಯಾಯ ಸಿಕ್ಕಿದೆ' ಎಂದರು.

 Have faith in judiciary, former minister minister Halappa

'ನನ್ನ ಸಮಯ ಆಗ ಸರಿ ಇರಲಿಲ್ಲ, ಆಗ ನನ್ನ ವಿರುದ್ಧ ಪಿತೂರಿ ನಡೆಸಿ ಈ ಕೇಸ್ ಹಾಕಿಸಲಾಯಿತು. ಪಿತೂರಿ ಮಾಡಿದವರಿಗೆ ಈಗ ನಿರಾಸೆಯಾಗಿದೆ. ನನ್ನ ವಿರುದ್ಧ ನಡೆದ ಪಿತೂರಿ ಬಗ್ಗೆ ಶೀಘ್ರದಲ್ಲೇ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡುತ್ತೇನೆ' ಎಂದು ಹೇಳಿದರು.

'ನನ್ನ ರಾಜಕೀಯ ಸ್ಥಾನಮಾನದ ಕುರಿತು ಪಕ್ಷದ ಹಿರಿಯರು ತೀರ್ಮಾನ ಕೈಗೊಳ್ಳುತ್ತಾರೆ. ಕಷ್ಟ ಕಾಲದಲ್ಲಿ ನನಗೆ ಬೆಂಬಲವಾಗಿ ನಿಂತ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ' ಎಂದರು.

English summary
Former Karnataka food and civil supplies minister H.Halappa get clean chit in a rape case filed against him by his friend's wife. After Shivamogga court order Halappa said, i have faith in judiciary.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X