ತ್ಯಾವರೆಕೊಪ್ಪದಿಂದ ಗುಜರಾತ್ಗೆ ಹೊರಟ 6 ಚಿರತೆಗಳು
ಶಿವಮೊಗ್ಗ, ಅಕ್ಟೋಬರ್ 29 : ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ 12 ಚಿರತೆಗಳು ಗುಜರಾತ್ ಮತ್ತು ಬೆಂಗಳೂರಿಗೆ ಹೊರಟು ನಿಂತಿವೆ. ಈಗಾಗಲೇ ಸಕ್ರೆಬೈಲು ಆನೆ ಬಿಡಾರದ 5 ಆನೆಗಳನ್ನು ಉತ್ತರ ಪ್ರದೇಶಕ್ಕೆ ಕಳುಹಿಸಲಾಗುತ್ತಿದೆ.
ಸಿಂಹಧಾಮದಲ್ಲಿ 6 ಮರಿಗಳು ಸೇರಿದಂತೆ 26 ಚಿರತೆಗಳಿವೆ. ಇವುಗಳಲ್ಲಿ 6 ಚಿರತೆಯನ್ನು ಅಹಮದಾಬಾದ್ನ ಕಮಲಾ ನೆಹರೂ ಜೈವಿಕ ಉದ್ಯಾನ ಮತ್ತು ಅಷ್ಟೇ ಸಂಖ್ಯೆಯ ಚಿರತೆಗಳನ್ನು ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನಕ್ಕೆ ಕಳುಹಿಸಲಾಗುತ್ತಿದೆ.
ಸಕ್ರೆಬೈಲಿನಿಂದ ಉತ್ತರ ಪ್ರದೇಶಕ್ಕೆ ಹೊರಟು ನಿಂತ ಆನೆಗಳು!
ಸಿಂಹಧಾಮದಿಂದ 18 ಚಿರತೆಗಳನ್ನು ಬೇರೆ ಕಡೆಗೆ ಹಸ್ತಾಂತರ ಮಾಡಲಾಗುತ್ತಿದೆ. ಆದರೆ, ಮೈಸೂರು ಸಮೀಪದ ಚಾಮುಂಡಿ ವನ್ಯಜೀವಿ ಪುನರ್ವಸತಿ ಕೇಂದ್ರದಲ್ಲಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳದ ಕಾರಣ ಅಹಮದಾಬಾದ್ ಮತ್ತು ಬೆಂಗಳೂರಿಗೆ ಚಿರತೆಗಳನ್ನು ಹಸ್ತಾಂತರ ಮಾಡಲಾಗುತ್ತಿದೆ.
ಚಿತ್ರಗಳು : ಸಕ್ರೆಬೈಲಿನಲ್ಲಿ ಆನೆಗಳ ತುಂಟಾಟ, ಆಟೋಟ
ಆನೆಗಳು ಉತ್ತರ ಪ್ರದೇಶಕ್ಕೆ : ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರದಲ್ಲಿ 22 ಆನೆಗಳಿವೆ. ಇವುಗಳಲ್ಲಿ 5 ಆನೆಗಳನ್ನು ಉತ್ತರ ಪ್ರದೇಶಕ್ಕೆ ಕೊಡುಗೆಯಾಗಿ ನೀಡಲಾಗುತ್ತದೆ. ಉತ್ತರ ಪ್ರದೇಶದ ದುದ್ವಾ ರಾಷ್ಟ್ರೀಯ ಅಭಯಾರಣ್ಯದಲ್ಲಿ ಸಫಾರಿಗಾಗಿ ಈ ಆನೆಗಳನ್ನು ಕಳುಹಿಸಲಾಗುತ್ತಿದೆ.
ಮೈಸೂರು : 2 ಗಂಟೆಗಳ ಬಳಿಕ ಕೊನೆಗೂ ಬಲೆಗೆ ಬಿದ್ದ ಚಿರತೆ
ಪಾರ್ವತಿ, ಕಿರಣ (4), ಭಾಸ್ಕರ (5), ಅಮೃತಾ (13), ರಾಘವೇಂದ್ರ (30) ಆನೆಗಳನ್ನು ಕಳುಹಿಸಿ ಕೊಡಲಾಗುತ್ತದೆ. ಈ ಐದು ಆನೆಗಳಿಗೆ ಹೊಂದಿಕೊಳ್ಳಲು ಉತ್ತರ ಪ್ರದೇಶದ ಮಾವುತರು ಸಕ್ರೆಬೈಲಿಗೆ ಬಂದಿದ್ದು, ತರಬೇತಿ ಪಡೆಯುತ್ತಿದ್ದಾರೆ. ನವೆಂಬರ್ ತಿಂಗಳಿನಲ್ಲಿ ಆನೆಗಳು ಉತ್ತರ ಪ್ರದೇಶಕ್ಕೆ ಹೊರಡಲಿವೆ.