ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತಂದೆ ಸಾವಿನ ಅನುಕಂಪದಿಂದ ಶಾಸಕನಾದ ಮಧು ಬಂಗಾರಪ್ಪ: ಬಿವೈ ರಾಘವೇಂದ್ರ

|
Google Oneindia Kannada News

ಶಿಕಾರಿಪುರ, ಜುಲೈ 26: ಸಂಸದ ಯಡಿಯೂರಪ್ಪ ಅವರ ವಿರುದ್ಧ ಮಾತಾಡುವ ನೈತಿಕ ಹಕ್ಕು ಮೊನ್ನೆಯಷ್ಟೇ ಸೊರಬ ಶಾಸಕನಾದ ಮಧು ಬಂಗಾರಪ್ಪಗೆ ಇಲ್ಲ ಎಂದು ತಮ್ಮ ತಂದೆ ಪರವಾಗಿ ಶಾಸಕ ಬಿವೈ ರಾಘವೇಂದ್ರ ಧ್ವನಿ ಎತ್ತಿದ್ದಾರೆ.

ಯಡಿಯೂರಪ್ಪ ಕಚಡಾ ಮುಖ್ಯಮಂತ್ರಿ: ಮಧು ಬಂಗಾರಪ್ಪ ಕಿಡಿಯಡಿಯೂರಪ್ಪ ಕಚಡಾ ಮುಖ್ಯಮಂತ್ರಿ: ಮಧು ಬಂಗಾರಪ್ಪ ಕಿಡಿ

ಇಲ್ಲಿನ ಮಂಗಳ ಭವನದಲ್ಲಿ ಬಿಜೆಪಿ ವಿಸ್ತಾರಕರಿಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿ, ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರೈತರ ಸಾಲಮನ್ನಾ ಮಾಡಿದ್ದರು. ಪಂಪ್ ಸೆಟ್‌ಗೆ ಉಚಿತ ವಿದ್ಯುತ್‌ ವಿತರಣೆ, ಸುವರ್ಣ ಭೂಮಿ ಯೋಜನೆಯಂಥ ಹಲವು ರೈತಪರ ಯೋಜನೆಗಳನ್ನು ನೀಡಿದ್ದಾರೆ ಎಂದರು.

Madhu became MLA by his father death sympathy

ಆದರೆ, ಈ ಹಿಂದೆ ರಾಜ್ಯದ ಮುಖ್ಯಮಂತ್ರಿಯಾದವರು ಹೆಂಡದ ದೊರೆಗಳ ಸಾಲ ಮನ್ನಾ ಮಾಡಿದ್ದರು ಎಂದು ಎಸ್.ಬಂಗಾರಪ್ಪ ಅವರ ಹೆಸರು ಪ್ರಸ್ತಾಪಿಸದೆ ಟೀಕಿಸಿದರು.

ಅಪ್ಪನ ಸಾವಿನ ನಂತರದ ಅನುಕಂಪದಿಂದಾಗಿ ಶಾಸಕನಾಗಿ ಮಧು ಬಂಗಾರಪ್ಪ ಗೆದ್ದು ಬಂದಿದ್ದಾರೆ ಎಂದರು.

ಜಿಲ್ಲೆ ಹಾಗೂ ತಾಲೂಕಿನಲ್ಲಿ ಬಿಜೆಪಿ ವಿಸ್ತಾರಕ ಯೋಜನೆ ಅನುಷ್ಠಾನ ಯಶಸ್ವಿಯಾಗಿ ನಡೆದಿದೆ. ರಾಜ್ಯದಲ್ಲಿ ಮತ್ತೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಲಿದ್ದು, ಪಕ್ಷ ಸಂಘಟನೆಗೆ ಕಾರ್ಯಕರ್ತರು ಒತ್ತು ನೀಡಬೇಕು ಎಂದು ಸಲಹೆ ಮಾಡಿದರು.

English summary
Madhu became Soraba MLA by the sympathy of his father demise, said by MLA B.Y. Raghavendra in Shikaripur.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X