ತೀರ್ಥಹಳ್ಳಿ ನಂದಿತಾ ಸಾವು, ಸಿಐಡಿ ಪೊಲೀಸರು ಹೇಳಿದ್ದಿಷ್ಟು
ಬೆಂಗಳೂರು, ಡಿ.10 : '7 ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದ ಬಳಿಕ ಎಂಟನೇ ತರಗತಿಗೆ ಇಂಗ್ಲಿಷ್ ಮಾಧ್ಯಮಕ್ಕೆ ಸೇರಿಸಲಾಗಿತ್ತು. ಈ ಬದಲಾವಣೆಯಿಂದ ಖಿನ್ನತೆಗೊಳದಾದ ಆಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ'. ತೀರ್ಥಹಳ್ಳಿಯ ನಂದಿತಾ ಸಾವಿನ ತನಿಖೆ ನಡೆಸಿದ ಸಿಐಡಿ ಪೊಲೀಸರು ನೀಡಿರುವ ವರದಿ ಇದು.
ಹಲವಾರು ಗೊಂದಲಗಳಿಗೆ ಕಾರಣವಾಗಿದ್ದ ತೀರ್ಥಹಳ್ಳಿಯ 8ನೇ ವಿದ್ಯಾರ್ಥಿನಿ ನಂದಿತಾ ನಿಗೂಢ ಸಾವಿನ ರಹಸ್ಯ ಬಯಲಾಗಿದೆ. ನಂದಿತಾಳದ್ದು ಕೊಲೆ ಅಲ್ಲ, ಆತ್ಮಹತ್ಯೆ ಎಂಬ ಅಂಶವನ್ನು ಸಿಐಡಿ ಪೊಲೀಸರು ತನಿಖೆಯಿಂದ ಹೊರಹಾಕಿದ್ದಾರೆ.

ಮಂಗಳವಾರ ಸಿಐಡಿ ಡಿಜಿಪಿ ಬಿಪಿನ್ ಗೋಪಾಲಕೃಷ್ಣ ಅವರು ಪತ್ರಿಕಾಗೋಷ್ಠಿ ನಡೆಸಿ, ಇದುವರೆಗೂ ಶೇ.70ರಷ್ಟು ತನಿಖೆ ಪೂರ್ಣಗೊಂಡಿದೆ. ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಿದ್ದೇವೆ. ಶಾಲಾ ವಿದ್ಯಾರ್ಥಿನಿ ನಂದಿತಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ತನಿಖೆಯಲ್ಲಿ ಖಚಿತಗೊಂಡಿದೆ ಎಂದು ಹೇಳಿದರು. [ತೀರ್ಥಹಳ್ಳಿಯ ನಂದಿತಾಳದ್ದು ಆತ್ಮಹತ್ಯೆ]
ಇಂಗ್ಲಿಶ್ ಕಾರಣ : ನಂದಿತಾ ಮೊದಲು ಸೇಂಟ್ ಮೇರಿಸ್ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುತ್ತಿದ್ದಳು. 8 ತರಗತಿ ಓದಲು ಆಕೆಯನ್ನು ತೀರ್ಥಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮಕ್ಕೆ ಸೇರಿಸಲಾಯಿತು.[ಡೆತ್ ನೋಟ್ ಪತ್ತೆ]
ಏಳನೇ ತರಗತಿವರೆಗೆ ಉತ್ತಮ ಅಂಕ ಗಳಿಸಿ ಶಾಲೆಗೆ ಪ್ರಥಮ ವಿದ್ಯಾರ್ಥಿ ಎನಿಸಿದ್ದ ನಂದಿತಾ, 8ನೇ ತರಗತಿಯಲ್ಲಿ ಎ ಶ್ರೇಣಿಯಿಂದ ಸಿ-ಡಿ ಶ್ರೇಣಿಗಿಳಿದಿದ್ದಳು. ತನ್ನ ಶೈಕ್ಷಣಿಕ ಪ್ರಗತಿ ಕುಂಠಿವಾಗಿದ್ದರಿಂದ ಮನನೊಂದ ಆಕೆ, ಪೋಷಕರು ಆಂಗ್ಲ ಮಾಧ್ಯಮಕ್ಕೆ ಬಲವಂತವಾಗಿ ಸೇರಿಸಿದ್ದ ಬಗ್ಗೆ ಸಹಪಾಠಿಗಳ ಜತೆ ಹೇಳಿಕೊಂಡಿದ್ದಳು. [ನಂದಿತಾ ಪ್ರಕರಣದ ವಿವರ ಇಲ್ಲಿದೆ]
ಇದರಿಂದಲೇ ಖಿನ್ನತೆಗೊಳಗಾದ ಆಕೆ, ಅ.31 ರಂದು ಆನಂದಗಿರಿ ಬೆಟ್ಟಕ್ಕೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿರುವುದು ಇದುವರೆಗಿನ ತನಿಖೆಯಲ್ಲಿ ಬಯಲಾಗಿದೆ ಎಂದು ಬಿಪಿನ್ ಗೋಪಾಲಕೃಷ್ಣ ಅವರು ಮಾಹಿತಿ ನೀಡಿದರು.
ದೌರ್ಜನ್ಯ ನಡೆದಿಲ್ಲ : ನಂದಿತಾ ಮೇಲೆ ಯಾವುದೇ ರೀತಿಯ ಲೈಂಗಿಕ ದೌರ್ಜನ್ಯ ನಡೆದಿಲ್ಲ. ಅಲ್ಲದೇ ನಂದಿತಾ ಡೆತ್ನೋಟ್ ಅನ್ನು ಮಡಿವಾಳದ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಲಾಗಿತ್ತು. ಎಫ್ಎಸ್ಎಲ್ ತಜ್ಞರು ಡೆತ್ನೋಟ್ನಲ್ಲಿರುವ ಬರಹ ನಂದಿತಾಳದ್ದು ಎಂಬುದನ್ನು ಖಚಿತಪಡಿಸಿದ್ದಾರೆ ಎಂದು ವಿವರಣೆ ನೀಡಿದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications