‘‘ಮೋದಿ ಪ್ರಧಾನಿಯಾಗಿ ಮುಂದುವರೆದರೆ 10 ಕೋಟಿ ಜನ ಆತ್ಮಹತ್ಯೆ ಮಾಡಿಕೊಳ್ತಾರೆ’’
ಶಿವಮೊಗ್ಗ, ಫೆಬ್ರವರಿ 23: ಇನ್ನೂ ನಾಲ್ಕು ವರ್ಷ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಮುಂದುವರೆದರೆ ದೇಶದಲ್ಲಿ ಹತ್ತು ಕೋಟಿ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಮಾಜಿ ಸಚಿವ, ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್ ಅವರು, ಬೆಲೆ ಏರಿಕೆಯಿಂದಾಗಿ ಬಡತನ, ಹಸಿವು ತಾಳಲಾರದೆ ಹತ್ತು ಕೋಟಿ ಜನ ಆತ್ಮಹತ್ಯೆ ಮಾಡಿಕೊಳ್ಳಬಹುದು. ಅಥವಾ ದರೋಡೆಗೆ ಇಳಿಯಬಹುದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಡವರ ಬಗ್ಗೆ ಮಾತನಾಡಿದರೆ ಬಿಜೆಪಿಯವರು ಶ್ರೀರಾಮನ ಬಗ್ಗೆ ಹೇಳುತ್ತಾರೆ. ಈ ಹಿಂದೆ ಪೆಟ್ರೋಲ್, ಡೀಸೆಲ್, ಸಿಲಿಂಡರ್ ಬೆಲೆ ಸ್ವಲ್ಪ ಏರಿಕೆಯಾದರೆ ಸಾಕು ಶೋಭಾ ಕರಂದ್ಲಾಜೆ ಅವರು ಸಿಲಿಂಡರ್ ತಲೆ ಮೇಲೆ ಹೊತ್ತು ಬರುತ್ತಿದ್ದರು. ಈಗ ಅವರೆಲ್ಲ ಎಲ್ಲಿ ಹೋಗಿದ್ದಾರೆ ಎಂದು ಕಿಮ್ಮನೆ ರತ್ನಾಕರ್ ಪ್ರಶ್ನಿಸಿದರು.

ಮೀಸಲಾತಿಗಾಗಿ ವಿವಿಧ ಸಮುದಾಯದವರು ಹೋರಾಟ ನಡೆಸುತ್ತಿದ್ದಾರೆ. ಸಚಿವರುಗಳೇ ಈ ಹೋರಾಟದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹಿಂದೂ ನಾವೆಲ್ಲ ಒಂದು ಅನ್ನುತ್ತಿದ್ದ ಬಿಜೆಪಿ ಮುಖಂಡರ ನೇತೃತ್ವದಲ್ಲೇ ಹಿಂದೂಗಳ ನಡುವೆ ಹೋರಾಟ ಹಚ್ಚುತ್ತಿದ್ದಾರೆ. ಹಿಂದೂ ಧರ್ಮದಲ್ಲಿ ಅಸಮಾನತೆ ಇದೆ. ಸಮಾನತೆಗಾಗಿ ಹೋರಾಟಗಳು ನಡೆಯುತ್ತಿವೆ ಎಂದರು.
ಮೀಸಲಾತಿಗಾಗಿ ಸಚಿವರು ಯಾರ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ ಅನ್ನವುದು ಸ್ಪಷ್ಟವಾಗಬೇಕು. ಅವರೆಲ್ಲ ರಾಜೀನಾಮೆ ನೀಡಿ, ವಿರೋಧ ಪಕ್ಷದ ಜೊತೆಗೆ ಸೇರಿ ಹೋರಾಟ ನಡೆಸಿದರೆ ಒಳ್ಳೆಯದು ಎಂದರು.
ಕಲ್ಲು ಬಂಡೆ ಒಡೆಯುವ ಕಾರ್ಮಿಕರ ಸಮಸ್ಯೆ ಬಗೆಹರಿಸದೆ ಇದ್ದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತೇವೆ ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಕಲಾಪ ಆರಂಭವಾಗುತ್ತಿದೆ, ಸದನದಲ್ಲಿ ಈ ಕುರಿತು ಚರ್ಚೆ ನಡೆಸಬಹುದು. ಆದರೆ ಈ ವಿಚಾರವಾಗಿ ಪ್ರತಿಭಟನೆ ನಡೆಸುವುದೇಕೆ. ಹಾಗಿದ್ದರೆ ಇವರು ರಾಜೀನಾಮೆ ನೀಡಿ ಹೋರಾಟ ನಡೆಸಲಿ ಎಂದು ಸವಾಲು ಹಾಕಿದರು.

ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರದ ಕಲ್ಲು ಗಣಿಗಳಲ್ಲಿ ನಡೆದಿರುವ ಸ್ಪೋಟದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವವರಲ್ಲಿ ಶೇ.99 ಮಂದಿ ಬಿಜೆಪಿಯವರಿದ್ದಾರೆ. ಈ ಹಿಂದೆ ಎಲ್ಲಾ ಪ್ರಕರಣವನ್ನು ಸಿಬಿಐಗೆ ವಹಿಸಿ ಅನ್ನುತ್ತಿದ್ದರು. ಈಗ ಗಣಿ ಸ್ಪೋಟ ಪ್ರಕರಣ, ತೀರ್ಥಹಳ್ಳಿಯ ನಂದಿತಾ ಪ್ರಕರಣ, ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಲಿ ಎಂದು ಕಿಮ್ಮನೆ ರತ್ನಾಕರ್ ಸವಾಲು ಹಾಕಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications