ತೀರ್ಥಹಳ್ಳಿ: 10 ವರ್ಷಗಳ ನಂತರ ವಕೀಲ ವೃತ್ತಿಗೆ ಮರಳಿದ ಕಿಮ್ಮನೆ ರತ್ನಾಕರ್
ಶಿವಮೊಗ್ಗ, ಜುಲೈ.17: 2018ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದರೆ ವಿಧಾನಸಭೆಗೆ ಹೋಗುತ್ತೇನೆ. ಸೋತರೆ ವಕೀಲ ವೃತ್ತಿ ಮಾಡುತ್ತೇನೆ ಎಂದು ಹೇಳಿದ್ದ ತೀರ್ಥಹಳ್ಳಿಯ ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ನುಡಿದ ಮಾತಿನಂತೆ ನಡೆದುಕೊಳ್ಳಲು ಸಿದ್ಧತೆ ನಡೆಸಿದ್ದಾರೆ.
ತೀರ್ಥಹಳ್ಳಿ ಕ್ಷೇತ್ರದ ಜನರು ಕಿಮ್ಮನೆರತ್ನಾಕರ್ ಅವರನ್ನು ಎರಡು ಅವಧಿಗೆ ಆಯ್ಕೆ ಮಾಡಿದಾಗ ಅವರು ಮಾಡುತ್ತಿದ್ದ ತಮ್ಮ ವಕೀಲ ವೃತ್ತಿಯನ್ನು ಬಿಟ್ಟು ಜನಸೇವೆ ಹಾಗೂ ಕ್ಷೇತ್ರದ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದ್ದರು.
ಚುನಾವಣೆಯಲ್ಲಿ ಸೋತ ನಂತರ ಇದೀಗ ಕೊಟ್ಟ ಮಾತಿನಂತೆ ತಮ್ಮ ವಕೀಲ ವೃತ್ತಿಯನ್ನು ಮುಂದುವರೆಸುವ ಸಲುವಾಗಿ ಕಚೇರಿಯನ್ನು ಸ್ವತಃ ಅವರೇ ಶುಚಿಗೊಳಿಸಿದ್ದಾರೆ.

ಕಿಮ್ಮನೆ ರತ್ನಾಕರ್ 10 ವರ್ಷಗಳ ನಂತರ ಪ್ರಾಕ್ಟೀಸ್ ಕೈಗೆತ್ತಿಕೊಂಡಿದ್ದಾರೆ. ಕಳೆದ ಎರಡು ದಿನಗಳಿಂದ ತೀರ್ಥಹಳ್ಳಿಯ ತಮ್ಮ ಕಚೇರಿಯಲ್ಲಿ ಕೆಲಸ ಆರಂಭಿಸಿದ್ದಾರೆ. ಶಾಸಕರಾಗುವ ಮೊದಲು ವಕೀಲಿಕೆಯಿಂದಲೇ ಕಿಮ್ಮನೆ ತಾಲೂಕಿನಾದ್ಯಂತ ಜನಮನ್ನಣೆ ಗಳಿಸಿದ್ದರು.
ಬಡವರು ಕೊಟ್ಟಷ್ಟು ಶುಲ್ಕ ಪಡೆದು ವಾದ ಮಾಡುವ ಮೂಲಕ ಗಮನ ಸೆಳೆದಿದ್ದರು. ಅನಂತರ ಶಾಸಕರಾಗಿ 10 ವರ್ಷಗಳ ಕಾಲ ವಿಧಾನಸೌಧದ ಅನುಭವದ ಬಳಿಕ ಕಿಮ್ಮನೆ ರತ್ನಾಕರ್ ಕೋರ್ಟ್ನತ್ತ ಮುಖ ಮಾಡುತ್ತಿರುವುದು ವಿಶೇಷ.
ಹೈ ಕೋರ್ಟ್ನತ್ತ ಆಸಕ್ತಿ
ಪುನಃ ತೀರ್ಥಹಳ್ಳಿ ಕೋರ್ಟ್ನಲ್ಲಿ ಪ್ರಾಕ್ಟೀಸ್ ಮಾಡಿದರೆ ತೊಂದರೆ ಉಂಟಾಗುತ್ತದೆ. ಕಕ್ಷಿದಾರನ ಪರವಾಗಿ ವಾದ ಮಾಡುವುದನ್ನು ಕೆಲವರು ರಾಜಕೀಯ ದೃಷ್ಟಿಕೋನದಿಂದ ನೋಡುವ ಅಪಾಯವಿದೆ. ಹಾಗಾಗಿ ಸ್ಥಳೀಯ ಕೋರ್ಟ್ನಲ್ಲಿ ವಾದ ಮಾಡದಿರಲು ಕಿಮ್ಮನೆ ನಿರ್ಧರಿಸಿದ್ದು, ಹೈ ಕೋರ್ಟ್ನಲ್ಲಿ ಪ್ರಾಕ್ಟೀಸ್ ಮುಂದುವರಿಸಲು ಉತ್ಸುಕರಾಗಿದ್ದಾರೆ ಎನ್ನಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ











Click it and Unblock the Notifications