ಬಜೆಟ್; ಶಿವಮೊಗ್ಗ-ರಾಣೆಬೆನ್ನೂರು ರೈಲು ಮಾರ್ಗಕ್ಕೆ 100 ಕೋಟಿ
ಶಿವಮೊಗ್ಗ, ಫೆಬ್ರವರಿ 5; ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರೈಲ್ವೆ ಇಲಾಖೆಗೆ ನಿಗದಿ ಮಾಡಿರುವ ಅನುದಾನದ ವಿವರಗಳಿರುವ ಪಿಂಕ್ ಬುಕ್ ಅನ್ನು ಇಲಾಖೆ ಬಿಡುಗಡೆ ಮಾಡಿದೆ. ಉತ್ತರ ಕರ್ನಾಟಕ ಮತ್ತು ಮಲೆನಾಡು ಸಂಪರ್ಕಿಸುವ ರೈಲು ಮಾರ್ಗ ಯೋಜನೆಗೆ 100 ಕೋಟಿ ಅನುದಾನ ಸಿಕ್ಕಿದೆ.
" ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗದ ನಿರ್ಮಾಣಕ್ಕಾಗಿ 2021-22ನೇ ಸಾಲಿನ ಬಜೆಟ್ನಲ್ಲಿ 100 ಕೋಟಿ ರೂ. ಗಳನ್ನು ಕಾಯ್ದಿರಿಸಲಾಗಿದೆ" ಎಂದು ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ಹೇಳಿದ್ದಾರೆ.
ಹೇಗಿರಲಿದೆ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗ?
ಈ ರೈಲು ಯೋಜನೆ ಜನರ ಬಹುದಿನಗಳ ಕನಸಾಗಿದೆ. ರೈಲು ಮಾರ್ಗದ ನಿರ್ಮಾಣ ಕಾರ್ಯಕ್ಕೆ ಅಗತ್ಯವಾಗಿರುವ ಭೂಮಿಯನ್ನು ಕೆಐಎಡಿಬಿ ಸಂಸ್ಥೆಯ ಮೂಲಕ ಭೂಸ್ವಾಧೀನ ಮಾಡಿಕೊಳ್ಳುವ ಪ್ರಕ್ರಿಯೆ ಈಗಾಗಲೇ ಪ್ರಗತಿಯಲ್ಲಿದೆ.
ಬಜೆಟ್; ಹಾಸನ-ಬೇಲೂರು-ಚಿಕ್ಕಮಗಳೂರು ಮಾರ್ಗಕ್ಕೆ ಅನುದಾನ
"ಈ ರೈಲು ಮಾರ್ಗದ ನಿರ್ಮಾಣ ಸಂಬಂಧ ಕೇಂದ್ರ ರೈಲ್ವೇ ಸಚಿವರೊಂದಿಗೆ ನಿರಂತರ ಸಂಪರ್ಕಿಸಿ, ಸಮಾಲೋಚನೆ ನಡೆಸಲಾಗಿತ್ತು. 2019-20ರ ಕೇಂದ್ರ ಮುಂಗಡ ಪತ್ರದಲ್ಲಿ ಶಿವಮೊಗ್ಗ ಭಾಗದಲ್ಲಿ ರೈಲು ಸಂಚಾರವನ್ನು ಹೆಚ್ಚಿಸಲು ಮೂಲ ಅಗತ್ಯವೆನಿಸಿರುವ ಕೋಚಿಂಗ್ ಡಿಪೋವನ್ನು ಶಿವಮೊಗ್ಗ ಸಮೀಪದ ಕೋಟೆಗಂಗೂರಿನಲ್ಲಿ ನಿರ್ಮಿಸಲು ಅಗತ್ಯ ಅನುದಾನ ಮಂಜೂರಾಗಿದೆ" ಎಂದು ಹೇಳಿದ್ದಾರೆ.
ಕೇಂದ್ರ ಬಜೆಟ್; ಗದಗ-ವಾಡಿ ರೈಲು ಮಾರ್ಗಕ್ಕೆ 100 ಕೋಟಿ ಮೀಸಲು
ಈ ಯೋಜನೆಗೆ ಬೇಕಾಗಿರುವ ಹೆಚ್ಚುವರಿ ಭೂಮಿಯನ್ನು ಖಾಸಗಿಯವರಿಂದ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯೂ ಚಾಲ್ತಿಯಲಿದೆ. ರೈಲ್ವೆ ಇಲಾಖೆಯು ಆರಂಭಿಕ ಕಾಮಗಾರಿ ಅನುಷ್ಠಾನಕ್ಕೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿದೆ. ಅದಕ್ಕಾಗಿ ಮುಂಗಡ ಪತ್ರದಲ್ಲಿ 12 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ.
2008ರಲ್ಲಿ ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗದ ಚರ್ಚೆ ಆರಂಭವಾಗಿತ್ತು. ಈಗ ಯಡಿಯೂರಪ್ಪ ಮುಖ್ಯಮಂತ್ರಿಯಾಗಿರುವಾಗಲೇ ಯೋಜನೆಗೆ ಚಾಲಕೆ ಸಿಕ್ಕಿದೆ.
ಶಿವಮೊಗ್ಗ-ಶಿಕಾರಿಪುರ, ಶಿಕಾರಿಪುರ-ರಾಣೆಬೆನ್ನೂರು ಎಂದು ಎರಡು ವಿಭಾಗವಾಗಿ ಮಾಡಿ ಭೂಸ್ವಾಧೀನ ಮಾಡಲಾಗುತ್ತಿದೆ. ಸುಮಾರು 103 ಕಿ. ಮೀ. ಯೋಜನೆಗೆ ರೈತರು ವಿರೋಧ ವ್ಯಕ್ತಪಡಿಸುತ್ತಿದ್ದು, ಹೆಚ್ಚಿನ ಪರಿಹಾರ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ.