13 ಜನರಿಗೆ ಕೊರೊನಾ ನೆಗೆಟಿವ್: ನಿಟ್ಟುಸಿರು ಬಿಟ್ಟ ತೀರ್ಥಹಳ್ಳಿ ಜನತೆ
ಶಿವಮೊಗ್ಗ ಮೇ 18: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಜನತೆಗೆ ಭಾರಿ ಆತಂಕ ಮೂಡಿಸಿದ್ದ, ಕೊರೊನಾ ವೈರಸ್ ಸೋಂಕಿತನನ್ನು ಕರೆದುಕೊಂಡು ಹೋಗಿದ್ದ ಆಟೋ ಚಾಲಕನಿಗೆ ಮೊದಲ ವರದಿಯಲ್ಲಿ ಕೊರೊನಾ ನೆಗೆಟಿವ್ ಬಂದಿದೆ.
Recommended Video
HD Deve Gowda From a villager to PM of India : ಹಳ್ಳಿಯಿಂದ ದಿಲ್ಲಿವರೆಗೆ ಸಾಗಿ ಬಂದ ದೇವೇಗೌಡರ ರಾಜಕೀಯ
ಆದರೆ ಆತನನ್ನು ಇನ್ನೊಮ್ಮೆ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ತಿಳಿದು ಬಂದಿದೆ. ಇನ್ನು ಕುಟುಂಬದ 12 ಜನರಿಗೂ ಕೊರೊನಾ ನೆಗೆಟಿವ್ ಬಂದಿರುವುದು ತೀರ್ಥಹಳ್ಳಿ ಜನತೆಯನ್ನು ನಿಟ್ಟುಸಿರು ಬಿಡುವಂತೆ ಮಾಡಿದೆ.
ಮುಂಬೈನಿಂದ ತೀರ್ಥಹಳ್ಳಿಗೆ ಬಂದಿದ್ದ ವ್ಯಕ್ತಿ ಪ್ರಾಥಮಿಕ ವ್ಯಕ್ತಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇನ್ನೂ ಕ್ವಾರಂಟೈನ್ ನಲ್ಲಿ ಇಡಲಾಗಿದ್ದು, 2 ನೇ ಪರೀಕ್ಷೆ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಇದುವರೆಗೂ ಸುಮಾರು 4000 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 14 ಮಂದಿಗೆ ಕೊರೊನಾ ವೈರಸ್ ದೃಢಪಟ್ಟಿದೆ.

ಜಿಲ್ಲೆಯ ಜನರು ಜಾಗೃತಿಯಿಂದ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಮನೆಯಿಂದ ಅನವಶ್ಯಕವಾಗಿ ಹೊರ ಬರದೆ, ಮಕ್ಕಳ ಮತ್ತು ವೃದ್ಧರ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕಾಗಿದೆ.












Click it and Unblock the Notifications