ಪಟ್ಟು ಬಿಡದೆ ನಾಮಪತ್ರ ಸಲ್ಲಿಸಿದ ಕೆಎಸ್ ಈಶ್ವರಪ್ಪಗೆ ಏಪ್ರಿಲ್ 22 ಡೆಡ್ ಲೈನ್!
ಶಿವಮೊಗ್ಗ, ಏಪ್ರಿಲ್. 20: ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏಪ್ರಿಲ್ 19 ರಂದು ಒಟ್ಟು 14 ನಾಮಪತ್ರಗಳು ಸಲ್ಲಿಕೆ ಆಗಿವೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ಕುಮಾರ್, ಅಖಿಲ ಭಾರತ ಹಿಂದೂ ಮಹಾಸಭಾ ಪಕ್ಷದ ಅಭ್ಯರ್ಥಿ ಚಂದ್ರಶೇಖರ್ ಹೆಚ್ ಸಿ ನಾಮಪತ್ರ ಸಲ್ಲಿಸಿದ್ದಾರೆ.
ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಎಸ್.ಈಶ್ವರಪ್ಪ, ಡಿ.ಎಸ್.ಈಶ್ವರಪ್ಪ, ಪಿ.ಶ್ರೀಪತಿ, ಎಸ್.ಬಾಲಕೃಷ್ಣ ಭಟ್, ರವಿಕುಮಾರ್ ಎನ್, ಪೂಜಾ ಅಣ್ಣಯ್ಯ, ಇಂತಿಯಾಜ್ ಎ.ಅತ್ತಾರ್, ಸಂದೇಶ್ ಶೆಟ್ಟಿ ಎ, ಬಂಡಿ ರಂಗನಾಥ ವೈ.ಆರ್, ಶೇಖರಪ್ಪ ಹೆಚ್, ಹನುಮಂತಪ್ಪ, ಜಿ.ಜಯದೇವ ಸೇರಿದಂತೆ ಒಟ್ಟು 14 ನಾಮಪತ್ರಗಳ ಸಲ್ಲಿಕೆಯಾಗಿದೆ.

ಶಿವಮೊಗ್ಗದಲ್ಲಿ ಒಟ್ಟು 38 ನಾಮಪತ್ರ ಸಲ್ಲಿಕೆ
ಶಿವಮೊಗ್ಗ ಲೋಕಸಭಾ ಮತಕ್ಷೇತ್ರದಲ್ಲಿ ಏಪ್ರಿಲ್ 18 ರಂದು ಒಟ್ಟು 05 ನಾಮಪತ್ರಗಳು ಸಲ್ಲಿಕೆ ಆಗಿವೆ. ಬಿಜೆಪಿ ಪಕ್ಷದಿಂದ ಬಿ.ವೈ.ರಾಘವೇಂದ್ರ ಎರಡು ನಾಮಪತ್ರಗಳು, ಅಖಿಲ ಭಾರತ ಹಿಂದೂ ಮಹಾಸಭಾ ಪಕ್ಷದಿಂದ ಚಂದ್ರಶೇಖರ್ ಹೆಚ್.ಸಿ, ಪಕ್ಷೇತರ ಅಭ್ಯರ್ಥಿಗಳಾಗಿ ಶಿವರುದ್ರಯ್ಯ ಸ್ವಾಮಿ ಹಾಗೂ ಹೆಚ್ ಸುರೇಶ್ ಪೂಜಾರಿ ಸೇರಿದಂತೆ ಇಂದು ಒಟ್ಟು ಐದು ನಾಮಪತ್ರಗಳ ಸಲ್ಲಿಕೆಯಾಗಿದೆ.
ಏಪ್ರಿಲ್ 12 ರಿಂದ ಏಪ್ರಿಲ್ 19 ರ ವರೆಗೆ ಒಟ್ಟು 27 ಅಭ್ಯರ್ಥಿಗಳಿಂದ 38 ನಾಮಪತ್ರಗಳ ಸಲ್ಲಿಕೆಯಾಗಿದೆ. ಏಪ್ರಿಲ್ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 22 ರಂದು ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು ಮೇ 7 ರಂದು ಮತದಾನ ನಡೆಯಲಿದೆ.

ಕೆಎಸ್ ಈಶ್ವರಪ್ಪಗೆ ಏಪ್ರಿಲ್ 22 ಡೆಡ್ ಲೈನ್!
ತಮ್ಮ ಮಗ ಕಾಂತೇಶ್ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಕ್ಕಿಲ್ಲ ಎಂದು ಬಂಡಾಯ ಎದ್ದಿರುವ ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಈ ಬಾರಿ ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತಿದ್ದಾರೆ. ಇದು ಕ್ಷೇತ್ರದ ಬಗ್ಗೆ ಭಾರೀ ಕುತೂಹಲ ಕೆರಳುವಂತೆ ಮಾಡಿದೆ.
ಕೆ ಎಸ್ ಈಶ್ವರಪ್ಪ ಅವರನ್ನು ಮನವೊಲಿಸಲು ನಡೆದ ಎಲ್ಲ ಆಪ್ರಯತ್ನಗಳು ಮುಗಿದಿವೆ. ಹೀಗಾಗಿ ಈಗ ನೇರಾನೇರ ವಾಗ್ದಾಳಿಗಳ ಮೂಲಕ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇದರ ಜತೆಗೆ ಏಪ್ರಿಲ್ 22 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು, ಅಲ್ಲಿಯವರೆಗೆ ತಮ್ಮ ನಿರ್ಧಾರ ಬದಲಿಸುವಂತೆ ಬಿಜೆಪಿ ಹಿರಿಯ ನಾಯಕನಿಗೆ ಡೆಡ್ಲೈನ್ ಕೊಟ್ಟಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications