ಕುವೈತ್ ದೇಶದಿಂದ ಶಿವಮೊಗ್ಗಕ್ಕೆ ಬಂತು ಆಕ್ಸಿಜನ್ ಕಂಟೈನರ್
ಶಿವಮೊಗ್ಗ, ಮೇ 28: ಕೊರೊನಾ ಪರಿಸ್ಥಿತಿ ನಿರ್ವಹಣೆಗೆ ಕುವೈತ್ ದೇಶದಿಂದ ಶಿವಮೊಗ್ಗಕ್ಕೆ 20 ಟನ್ ಆಕ್ಸಿಜನ್ ಸರಬರಾಜಾಗಿದೆ. ಮಂಗಳೂರಿನಿಂದ ಬಂದಿದ್ದ ಆಕ್ಸಿಜನ್ ಟ್ಯಾಂಕರನ್ನು ಶಿವಮೊಗ್ಗದ ಖಾಸಗಿ ಸಂಸ್ಥೆಯಲ್ಲಿ ಸಂಗ್ರಹಿಸಿಡಲಾಗಿದೆ.
ಕುವೈತ್ ದೇಶದಿಂದ ಹಡಗು ಮೂಲಕ ಆಕ್ಸಿಜನ್ ಕಂಟೈನರ್ಗಳು ಮಂಗಳೂರು ಬಂದರಿಗೆ ತಲುಪಿದ್ದವು. ಈ ಪೈಕಿ 20 ಟನ್ ಕಂಟೈನರ್ ಒಂದು ಶಿವಮೊಗ್ಗಕ್ಕೆ ಬಂದಿದೆ. ಕೇಂದ್ರ ಸರ್ಕಾರದ ಹಂಚಿಕೆಯಂತೆ ಮೆಡಿಕಲ್ ಆಕ್ಸಿಜನ್ ಪೂರೈಕೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಖಾಸಗಿ ಸಂಸ್ಥೆಯಲ್ಲಿ ಆಕ್ಸಿಜನ್ ಸಂಗ್ರಹ
ಕುವೈತ್ ದೇಶದಿಂದ ಬಂದಿರುವ ಆಕ್ಸಿಜನ್ನ್ನು ಶಿವಮೊಗ್ಗದ ಮಾಚೇನಹಳ್ಳಿಯಲ್ಲಿ ಇರುವ ಖಾಸಗಿ ಸಂಸ್ಥೆಯಲ್ಲಿ ಸಂಗ್ರಹಿಸಿ ಇಡಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಪರ ಜಿಲ್ಲಾಧಿಕಾರಿ ಹಾಗೂ ಆಕ್ಸಿಜನ್ ನಿರ್ವಹಣೆ ವ್ಯವಸ್ಥೆಯ ನೋಡಲ್ ಅಧಿಕಾರಿ ಜಿ.ಅನುರಾಧ, ""ಸದ್ಯ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ. ಸರ್ಕಾರಿ ವ್ಯವಸ್ಥೆಯಲ್ಲಿ ಆಕ್ಸಿಜನ್ ಸಂಗ್ರಹಕ್ಕೆ ವ್ಯವಸ್ಥೆ ಇರದ ಕಾರಣ, ಜಿಲ್ಲೆಯಲ್ಲಿ ಎರಡು ಖಾಸಗಿ ಸಂಸ್ಥೆಗಳಲ್ಲಿ ಆಕ್ಸಿಜನ್ ಸಂಗ್ರಹ ಮಾಡಲಾಗುತ್ತಿದೆ. ಕುವೈತ್ನಿಂದ ಬಂದ ಆಕ್ಸಿಜನ್ನ್ನು ಖಾಸಗಿ ಸಂಸ್ಥೆಯಲ್ಲಿ ಸದ್ಯಕ್ಕೆ ಸಂಗ್ರಹಿಸಲಾಗಿದೆ'' ಎಂದರು.

ಆಕ್ಸಿಜನ್ ಬಳಕೆ ಹೇಗೆ?
ವಿಐಎಸ್ಎಲ್ ಕಾರ್ಖಾನೆ ಮತ್ತು ಮೆಗ್ಗಾನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನೆಯಾಗುತ್ತಿದೆ. ಇದು ಸದ್ಯ ಜಿಲ್ಲೆಗೆ ಸಾಕಾಗುತ್ತಿದೆ. ಈಗ ಕುವೈತ್ನಿಂದ ಆಕ್ಸಿಜನ್ ಬಂದಿರುವುದು ಹೆಚ್ಚುವರಿಯಾಗಿದೆ ಎಂದು ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ಹಾಗೂ ಆಕ್ಸಿಜನ್ ನಿರ್ವಹಣೆ ವ್ಯವಸ್ಥೆಯ ನೋಡಲ್ ಅಧಿಕಾರಿ ಜಿ.ಅನುರಾಧ ತಿಳಿಸಿದರು.

ಸರ್ಕಾರಿ ಆಸ್ಪತ್ರೆಗೆ ಉಚಿತ ಆಕ್ಸಿಜನ್
ಮೆಗ್ಗಾನ್ ಆಸ್ಪತ್ರೆಯಲ್ಲಿ 19 ಕೆಎಲ್ ಆಕ್ಸಿಜನ್ ಉತ್ಪಾದನೆಯಾಗುತ್ತಿದ್ದು, ಇದನ್ನು ಮೆಗ್ಗಾನ್ ಆಸ್ಪತ್ರೆಗೆ ಬಳಕೆ ಮಾಡಲಾಗುತ್ತಿದೆ. ಇನ್ನು, ವಿಐಎಸ್ಎಲ್ನಲ್ಲಿ ಉತ್ಪಾದನೆ ಆಗುತ್ತಿರುವುದನ್ನು ಜಂಬೋ ಸಿಲಿಂಡರ್ಗಳಲ್ಲಿ ಫಿಲ್ಲಿಂಗ್ ಮಾಡಿ, ಜಿಲ್ಲೆಯ ವಿವಿಧ ಆಸ್ಪತ್ರೆಗೆ ರವಾನಿಸಲಾಗುತ್ತಿದೆ ಎಂದರು.
ಈಗ ಬಂದಿರುವ ಆಕ್ಸಿಜನ್ ಸರ್ಕಾರಿ ಆಸ್ಪತ್ರೆಗೆ ಉಚಿತವಾಗಿ ನೀಡಲಾಗುತ್ತದೆ. ಖಾಸಗಿ ಆಸ್ಪತ್ರೆಗಳು ಬೇಡಿಕೆ ಸಲ್ಲಿಸಿದರೆ ನಿಗದಿತ ಹಣ ಪಡೆದು ಅವುಗಳಿಗೆ ಆಕ್ಸಿಜನ್ ಪೂರೈಕೆ ಮಾಡಲಾಗುತ್ತದೆ.

ಕೊರೊನಾ ಸೋಂಕು ಪ್ರಕರಣಗಳು ತಗ್ಗುತ್ತಿವೆ
ಸದ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ತಗ್ಗುತ್ತಿವೆ. ಅಕ್ಸಿಜನ್ ಬಳಕೆ ಪ್ರಮಾಣವೂ ಇಳಿಕೆಯಾಗುತ್ತಿದೆ. ಆದರೆ ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚುವರಿ ಆಕ್ಸಿಜನ್ ಸಂಗ್ರಹ ಮಾಡಿಟ್ಟುಕೊಳ್ಳುವುದು ಆಡಳಿತಕ್ಕೆ ಅನಿವಾರ್ಯವಾಗಿದೆ ಎಂದು ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಹೇಳಿದ್ದಾರೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications