ಬೀರೂರು-ಶಿವಮೊಗ್ಗ-ತಾಳಗುಪ್ಪ ರೈಲ್ವೇ ವಿದ್ಯುದ್ದೀಕರಣಕ್ಕೆ 25 ಕೋಟಿ
Recommended Video
ಶಿವಮೊಗ್ಗ, ಫೆಬ್ರವರಿ 12: ಬೀರೂರು-ಶಿವಮೊಗ್ಗ-ತಾಳಗುಪ್ಪ ರೈಲು ಮಾರ್ಗದ ವಿದ್ಯುದ್ದೀಕರಣ ಯೋಜನೆಗೆ ಕೇಂದ್ರ ಸರ್ಕಾರವು 25 ಕೋಟಿ ರೂ, ಮಂಜೂರು ಮಾಡಿದೆ.
2020-21 ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಈ ಮಾರ್ಗದ ರೈಲ್ವೇ ವಿದ್ಯುದ್ದೀಕರಣ ಕಾಮಗಾರಿಗಾಗಿ 25 ಕೋಟಿ ರೂ.ಗಳನ್ನು ಘೋಷಿಸಲಾಗಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ರಾಘವೇಂದ್ರ, ""ನಾನು ಸಂಸದನಾದ ಬಳಿಕ ಶಿವಮೊಗ್ಗಕ್ಕೆ ಹಲವು ರೈಲುಗಳನ್ನು ತರಲು ಶ್ರಮ ವಹಿಸಲಾಗಿತ್ತು. ಅದರ ಪರಿಣಾಮವಾಗಿ ಹಲವು ರೈಲುಗಳು ಲಭ್ಯವಾಗಿವೆ. ಮಲೆನಾಡಿನೊಂದಿಗೆ ಮಧ್ಯ ಮತ್ತು ಉತ್ತರ ಕರ್ನಾಟಕಕ್ಕೆ ನೇರ ಸಂಪರ್ಕ ಕಲ್ಪಿಸುವ ಪ್ರಯತ್ನದಲ್ಲೂ ಯಶಸ್ವಿಯಾಗಿದೆ ಎಂದು ತಿಳಿಸಿದರು.

ಇದರ ಪರಿಣಾಮವಾಗಿಯೇ ಈಗಾಗಲೇ ಶಿವಮೊಗ್ಗ-ಶಿಕಾರಿಪುರ-ರಾಣೇಬೆನ್ನೂರು ಹಾಗೂ ಶಿವಮೊಗ್ಗ-ಹರಿಹರ ನೂತನ ರೈಲು ಮಾರ್ಗಗಳು ಮಂಜೂರು ಆಗಿದ್ದು ಯೋಜನೆಗಳು ಅನುಷ್ಠಾನದ ಹಂತದಲ್ಲಿವೆ ಎಂದರು.
ಬೀರೂರು-ಶಿವಮೊಗ್ಗ-ತಾಳಗುಪ್ಪ ಮಾರ್ಗವನ್ನು ವಿದ್ಯುದ್ದೀಕರಣಗೊಳಿಸಬೇಕು ಎಂಬ ಒತ್ತಾಸೆಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ. ಇದರಿಂದ ಈ ಭಾಗದ ರೈಲುಗಳು ವಿದ್ಯುತ್ ಎಂಜಿನ್ಗಳ ಸಹಾಯದಿಂದ ಚಲಿಸಲಿವೆ. ಇದರಿಂದ ರೈಲುಗಳ ವೇಗ ಹೆಚ್ಚಾಗಲಿದ್ದು, ಮಾಲಿನ್ಯ ರಹಿತ ರೈಲು ಸಂಚಾರ ಸಾಕಾರಗೊಳ್ಳಲಿದೆ ಎಂದು ಹೇಳಿದರು.

ನಮ್ಮ ಬೇಡಿಕೆಗೆ ಸ್ಪಂದಿಸಿದ ಪ್ರಧಾನಿ ನರೇಂದ್ರ ಮೋದಿ, ಇದಕ್ಕೆ ಸಹಕರಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರೈಲ್ವೆ ಸಚಿವರಾದ ಪಿಯುಶ್ ಗೋಯಲ್, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಸಂಸದ ಬಿ.ವೈ.ರಾಘವೇಂದ್ರ ಧನ್ಯವಾದ ತಿಳಿಸಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications