ಮೆಗ್ಗಾನ್ ಆಸ್ಪತ್ರೆಯ ಘಟನೆ: ಇಬ್ಬರು ನರ್ಸ್ ಸೇರಿ ಮೂವರ ಅಮಾನತು
ಶಿವಮೊಗ್ಗ, ಜೂನ್ 02 : ಶಿವಮೊಗ್ಗದ ಮೆಗ್ಗಾನ್ ಸರ್ಕಾರಿ ಆಸ್ಪತ್ರೆಯಲ್ಲಿ ಸ್ಟ್ರೆಚರ್ ನೀಡದ ಹಿನ್ನೆಲೆಯಲ್ಲಿ ಅನಾರೋಗ್ಯ ಪೀಡಿತ ಪತಿಯನ್ನು ನೆಲದ ಮೇಲೆಯೇ ಎಳೆದೊಯ್ದ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಇಬ್ಬರು ನರ್ಸ್ ಗಳನ್ನು ಹಾಗೂ ಓರ್ವ ಡಿ ಗ್ರೂಪ್ ನೌಕರಳನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಮೆಗ್ಗಾನ್ ಆಸ್ಪತ್ರೆಯ ನಿರ್ದೇಶಕ ಸುಶೀಲ್ ಕುಮಾರ್ ಅವರು, "ಆಸ್ಪತ್ರೆಯ ಸಿಬ್ಬಂದಿಯ ಗಮನಕ್ಕೆ ತರದೆ ಫಾಮಿದಾ ಅವರು ತಮ್ಮ ಪತಿ ಅಮೀರ್ ಸಾಬ್ ನನ್ನು ಎಳೆದುಕೊಂಡು ಹೋಗಿದ್ದಾರೆ. ಆದಾಗ್ಯೂ ನಾವು ನಿರ್ಲಕ್ಷ್ಯ ವಹಿಸಿದ ಇಬ್ಬರು ನರ್ಸ್ ಗಳಾದ ಜ್ಯೋತಿ, ಚಿತ್ರಾ ಹಾಗೂ ಗ್ರೂಪ್ ಡಿ ಸುವರ್ಣಮ್ಮನನ್ನು ಅಮಾನತುಗೊಳಿಸಿದ್ದೇವೆ" ಎಂದು ಹೇಳಿದ್ದಾರೆ. [ಶಿವಮೊಗ್ಗದಲ್ಲಿ ಎಕ್ಸ್ ರೇ ಕೋಣೆವರೆಗೆ ಪತಿಯ ಕಾಲು ಹಿಡಿದು ಎಳೆದೊಯ್ದ ಪತ್ನಿ]

ಘಟನೆಗೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಇಲಾಖೆಗೆ ವರದಿ ನೀಡಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಸುಶೀಲ್ ಕುಮಾರ್ ಮಾಧ್ಯಮಕ್ಕೆ ತಿಳಿಸಿದ್ದಾರೆ.ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅಮೀರ್ ಸಾಬ್ ಎಂಬುವರನ್ನು 9 ದಿನಗಳ ಹಿಂದೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. [ಮೆಗ್ಗಾನ್ ಘಟನೆ ನಂತರವೂ ಸುಮ್ಮನಿರುವ ಸರಕಾರಕ್ಕೆ ನಾಚಿಕೆ ಇದೆಯಾ?]
ಅಮೀರ್ ಎಕ್ಸ್ ರೇ ನಡೆಸಲು ವೈದ್ಯರು ಬರೆದಿದ್ದರು. ಅಂತೆ ಅಮೀರ್ ಪತ್ನಿ ಫಾಮಿದಾ ಅವರು ಎಕ್ಸ್ ರೇ ಮಾಡಿಸುವಲ್ಲಿ ಸಾಗಿಸಲು ಆಸ್ಪತ್ರೆ ಸಿಬ್ಬಂದಿಗಳ ನೆರವು ಕೇಳಿದಾಗ ಯಾರೊಬ್ಬರು ನೆರವು ನೀಡಲಿಲ್ಲ.
ಇದರಿಂದಾಗಿ ಅವರು ಪತಿಯನ್ನು ನೆಲದ ಮೇಲೆ ದರದರನೆ ಎಳೆದೊಯ್ದಿದ್ದಾರೆ. ಈ ದೃಶ್ಯವನ್ನು ಅಲ್ಲೇ ಇದ್ದ ವ್ಯಕ್ತಿಯೊಬ್ಬರು ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಆಸ್ಪತ್ರೆಯ ಸಿಬ್ಬಂದಿಗಳು ಯಾವುದೇ ಕೆಲಸಕ್ಕೆ ಆಗಲಿ ದುಡ್ಡನ್ನು ಕೇಳುತ್ತಾರೆ. ಹಣ ಕೊಡದೆ ಇದ್ದಾಗ ಅವರು ನಮ್ಮ ನೆರವಿಗೆ ಬರುವುದಿಲ್ಲ ಎಂದು ಪತ್ನಿ ಫಾಮಿದಾ ಆರೋಪಿಸಿದ್ದಾರೆ.
ಈ ವಿಡಿಯೋ ಮಾಧ್ಯಮಗಳಲ್ಲಿ ಬಿತ್ತರಗೊಳ್ಳುತ್ತಿದ್ದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸರ್ಕಾರದ ವತಿಯಿಂದ ಈ ಬಗ್ಗೆ ತನಿಖೆ ನಡೆಸುವುದಾಗಿ ಹೇಳಲಾಗಿದೆ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಹೇಳಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications