ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ ಜೈಲಿನಲ್ಲಿ ಖೈದಿಗಳ ಮಾರಾಮಾರಿ; ಒಬ್ಬನ ಸ್ಥಿತಿ ಗಂಭೀರ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಡಿಸೆಂಬರ್ 21: ಶಿವಮೊಗ್ಗ ನಗರದ ಹೊರವಲಯದ ಮಲವಗೊಪ್ಪದಲ್ಲಿನ ಕೇಂದ್ರ ಕಾರಗೃಹದಲ್ಲಿ ಖೈದಿಗಳ ನಡುವೆ ಮಾರಾಮಾರಿ ನಡೆದಿದೆ. ಗಾಯಗೊಂಡವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಓರ್ವ ಖೈದಿಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ಭಾನುವಾರ ರಾತ್ರಿ ಊಟ ಮುಗಿದ ಮೇಲೆ ಕುಡಿಯುವ ನೀರಿನ ವಿಚಾರಕ್ಕೆ ಜಗಳ ಆರಂಭವಾಗಿದೆ. ಪ್ರಶಾಂತ್ ಎಂಬ ಖೈದಿಯು ಮಲ್ಲೇಶ್, ದೇವೇಂದ್ರಪ್ಪ ಹಾಗೂ ಚಿಕ್ಕಮಗಳೂರಿನ ಬೆನಕಶೆಟ್ಟಿ ಎಂಬುವವರಿಗೆ ಲೋಟದಿಂದ ಹಲ್ಲೆ ಮಾಡಿದ್ದಾನೆ, ಚಮಚದಿಂದ ಇರಿದಿದ್ದಾನೆ.

ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇನ್‌ಸ್ಪೆಕ್ಟರ್‌ಗೆ 4 ವರ್ಷ ಜೈಲು ಶಿಕ್ಷೆಲಂಚಕ್ಕೆ ಬೇಡಿಕೆ ಇಟ್ಟಿದ್ದ ಇನ್‌ಸ್ಪೆಕ್ಟರ್‌ಗೆ 4 ವರ್ಷ ಜೈಲು ಶಿಕ್ಷೆ

ಈ ಗಲಾಟೆಯಲ್ಲಿ ಎಲ್ಲರೂ ಗಾಯಗೊಂಡಿದ್ದು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಖೈದಿ ಮಲ್ಲೇಶ್ ಸ್ಥಿತಿ ಗಂಭೀರವಾಗಿದೆ. ಎದೆ ಮತ್ತು ಹೊಟ್ಟೆ ಭಾಗಕ್ಕೆ ಇರಿದಿದ್ದು, ಈ ಇರಿತ ಆಳವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದರೆ 5 ವರ್ಷ ಜೈಲು: ವಿವಾದ ಸೃಷ್ಟಿಸಿದ ಕಾನೂನುಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದರೆ 5 ವರ್ಷ ಜೈಲು: ವಿವಾದ ಸೃಷ್ಟಿಸಿದ ಕಾನೂನು

4 Prison Inmates Hurt In Clash One Critical

ಕೈದಿ ಪ್ರಶಾಂತ್ ಉಡುಪಿಯಲ್ಲಿ ಅಪರಾಧ ಎಸಗಿ ಶಿಕ್ಷೆಗೆ ಒಳಗಾಗಿದ್ದಾನೆ. ಉಡುಪಿ ನ್ಯಾಯಾಲಯದಲ್ಲಿ ನ್ಯಾಯಾಧೀಶರನ್ನು ನಿಂದಿಸಿ ಸಹ ಈತ ಸುದ್ದಿಯಾಗಿದ್ದ. ಆಗಗ ಸಹ ಖೈದಿಗಳಿಗೆ ನಿಂದಿಸುವುದು, ಜಗಳವಾಡುವುದು ಮಾಡುತ್ತಿದ್ದ ಎಂಬ ಮಾಹಿತಿಯೂ ಇದೆ.

ತೆಲಂಗಾಣ:ಭ್ರಷ್ಟಾಚಾರ ಆರೋಪದಲ್ಲಿ ಜೈಲು ಸೇರಿದ್ದ ತಹಶೀಲ್ದಾರ್ ಆತ್ಮಹತ್ಯೆ ತೆಲಂಗಾಣ:ಭ್ರಷ್ಟಾಚಾರ ಆರೋಪದಲ್ಲಿ ಜೈಲು ಸೇರಿದ್ದ ತಹಶೀಲ್ದಾರ್ ಆತ್ಮಹತ್ಯೆ

ಪ್ರಶಾಂತ್ ವರ್ತನೆ ಬಗ್ಗೆ ಹಲವು ಬಾರಿ ಸಹ ಖೈದಿಗಳು ಜೈಲಿನ ಅಧಿಕಾರಿಗಳು ಮತ್ತು ಕಾರಾಗೃಹದ ಮುಖ್ಯ ಅಧೀಕ್ಷಕ ಡಾ. ರಂಗನಾಥ್‌ಗೆ ದೂರು ನೀಡಿದ್ದರು. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಖೈದಿಗಳ ಮಾರಾಮಾರಿ ಕುರಿತು ದೂರು ದಾಖಲಾಗಿದೆ.

English summary
Clash in Central Prison in Shivamogga 4 inmates admitted to Mcgann hospital. One the inmates health condition critical said doctor.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X