ಸಕ್ರೆಬೈಲಿನಿಂದ ಉತ್ತರ ಪ್ರದೇಶಕ್ಕೆ ಹೊರಟು ನಿಂತ ಆನೆಗಳು!
ಶಿವಮೊಗ್ಗ, ಅಕ್ಟೋಬರ್ 05 : ಸಕ್ರೆಬೈಲು ಆನೆ ಬಿಡಾರದ 5 ಆನೆಗಳನ್ನು ಉತ್ತರ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗುತ್ತದೆ. ಪ್ರವಾಸೋದ್ಯಮದ ಅಭಿವೃದ್ಧಿಗಾಗಿ ಕರ್ನಾಟಕ ಸರ್ಕಾರ ಆನೆಗಳನ್ನು ಉತ್ತರ ಪ್ರದೇಶಕ್ಕೆ ಕೊಡುಗೆಯಾಗಿ ನೀಡುತ್ತಿದೆ.
ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರದಲ್ಲಿ 22 ಆನೆಗಳಿವೆ. ಇವುಗಳಲ್ಲಿ 5 ಆನೆಗಳನ್ನು ಕೊಡುಗೆಯಾಗಿ ನೀಡಲು ಗುರುತಿಸಲಾಗಿದೆ. ಉತ್ತರ ಪ್ರದೇಶದ ದುದ್ವಾ ರಾಷ್ಟ್ರೀಯ ಅಭಯಾರಣ್ಯದಲ್ಲಿ ಸಫಾರಿಗಾಗಿ ಈ ಆನೆಗಳನ್ನು ಬಳಕೆ ಮಾಡಲಾಗುತ್ತದೆ.

ಪಾರ್ವತಿ, ಕಿರಣ (4), ಭಾಸ್ಕರ (5), ಅಮೃತಾ (13), ರಾಘವೇಂದ್ರ (30) ಆನೆಗಳನ್ನು ಕಳುಹಿಸಿ ಕೊಡಲಾಗುತ್ತದೆ. ಈ ಐದು ಆನೆಗಳಿಗೆ ಹೊಂದಿಕೊಳ್ಳಲು ಉತ್ತರ ಪ್ರದೇಶದ ಮಾವುತರು ಸಕ್ರೆಬೈಲಿಗೆ ಬಂದಿದ್ದು, ತರಬೇತಿ ಪಡೆಯುತ್ತಿದ್ದಾರೆ. ನವೆಂಬರ್ ತಿಂಗಳಿನಲ್ಲಿ ಆನೆಗಳು ಉತ್ತರ ಪ್ರದೇಶಕ್ಕೆ ಹೊರಡಲಿವೆ.
'ಆನೆಗಳನ್ನು ಕೊಡುಗೆಯಾಗಿ ನೀಡಲಾಗುತ್ತಿದೆ ಸಕ್ರೆಬೈಲಿನಲ್ಲಿರುವ ಕೆಲವು ಮಾವುತರು ಆನೆಗಳ ಜೊತೆಗೆ ಉತ್ತರ ಪ್ರದೇಶಕ್ಕೆ ತೆರಳಲಿದ್ದು, ಕೆಲವು ದಿನಗಳ ಕಾಲ ಅಲ್ಲಿದ್ದು, ವಾಪಸ್ ಬರಲಿದ್ದಾರೆ' ಎಂದು ಅರಣ್ಯಾಧಿಕಾರಿ ಮುಕುಂದ್ ರಾಜ್ ಹೇಳಿದ್ದಾರೆ.
ಕೆಲವು ದಿನಗಳ ಹಿಂದೆ ಬಿಡಾರದ ಹಿರಿಯ ಆನೆ ಟಸ್ಕರ್ ಮೃತಪಟ್ಟಿತ್ತು. ಈಗ ಐದು ಆನೆಗಳು ಉತ್ತರ ಪ್ರದೇಶಕ್ಕೆ ಹೊರಡಲು ಸಿದ್ಧವಾಗಿವೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications