ಶಿವಮೊಗ್ಗ : ಭೀಕರ ಅಪಘಾತ, 6 ಜನ ಸ್ಥಳದಲ್ಲೇ ಸಾವು
ಶಿವಮೊಗ್ಗ, ಆಗಸ್ಟ್. 28 : ಶಿವಮೊಗ್ಗ-ಸಾಗರ ರಸ್ತೆಯ ಆಯನೂರು ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. 6 ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕುಂಸಿ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.
ಸೋಮವಾರ ಮಧ್ಯಾಹ್ನ ಸಾಗರಕ್ಕೆ ತೆರಳುತ್ತಿದ್ದ ಲಾರಿ ಮಾರುತಿ ಕಾರಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಎಲ್ಲರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮೃತಪಟ್ಟವರು ಹೊಸನಗರದ ಬ್ರಹ್ಮೇಶ್ವರದವರು ಎಂದು ತಿಳಿದುಬಂದಿದೆ. ಕುಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಮೃತಪಟ್ಟವರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕುಂಸಿ ಪೊಲೀಸ್ ಠಾಣೆಗೆ : 08182-262332 ಕರೆ ಮಾಡಬಹುದಾಗಿದೆ.












Click it and Unblock the Notifications