ಶಿವಮೊಗ್ಗ; ಒಂದು ಗಂಟೆ ಪೊಲೀಸ್ ಅಧಿಕಾರಿಯಾದ 8ರ ಪೋರ!
ಶಿವಮೊಗ್ಗ, ಆಗಸ್ಟ್ 17: ಆತ ಇನ್ನೂ 8 ವರ್ಷದ ಪೋರ. ತಾನು ಪೊಲೀಸ್ ಅಧಿಕಾರಿಯಾಗಬೇಕು ಎಂಬುದು ಬಾಲಕನ ಕನಸು. ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಆತ ಒಂದು ಗಂಟೆ ಪೊಲೀಸ್ ಅಧಿಕಾರಿಯಾಗಿ ಕೆಲಸ ಮಾಡಿದ. ಶಿವಮೊಗ್ಗದ ಎಸ್ಪಿ ಮಿಥುನ್ ಕುಮಾರ್ ಹೂ ಗುಚ್ಛ ಕೊಟ್ಟು ಬಾಲಕನನ್ನು ಠಾಣೆಗೆ ಸ್ವಾಗತ ಕೋರಿದರು.
ದೊಡ್ಡಪೇಟೆ ಪೊಲೀಸ್ ಠಾಣೆ ಅಪರೂಪದ ಘಟನೆಗೆ ಬುಧವಾರ ಸಾಕ್ಷಿಯಾಯಿತು. 1ನೇ ತರಗತಿಯಲ್ಲಿ ಓದುತ್ತಿರುವ 8 ವರ್ಷದ ಆಜಾನ್ ಖಾನ್ ಒಂದು ಗಂಟೆ ಪೊಲೀಸ್ ಅಧಿಕಾರಿಯಾಗಿ ಕೆಲಸ ಮಾಡಿದ. ಎಸ್ಪಿ ಸೇರಿದಂತೆ ಇಲಾಖೆಯ ಅಧಿಕಾರಿಗಳು ಈ ಕ್ಷಣಕ್ಕೆ ಸಾಕ್ಷಿಯಾದರು.

ಆಜಾನ್ ಖಾನ್ ಮೂಲತಃ ಬಾಳೆಹೊನ್ನೂರುನವನು. ಪ್ರಸ್ತುತ ಶಿವಮೊಗ್ಗ ನಗರದ ಸೂಳೆಬೈಲು ನಿವಾಸಿ. ಈ ಬಾಲಕ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದಾನೆ. ಬಾಲಕನ ಮತ್ತು ಆತನ ಪೋಷಕರ ಕೋರಿಕೆಯಂತೆ ಆಗಸ್ಟ್ 16ರ ಬುಧವಾರ ಸಂಜೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಬಾಲಕ ಆಜಾನ್ ಖಾನ್ ಪೊಲೀಸ್ ಅಧಿಕಾರಿಯಾಗಿ ಕೆಲಸ ಮಾಡಲು ಅವಕಾಶ ನೀಡಲಾಯಿತು.
ಬಾಲಕನನ್ನು ಸ್ವಾಗತಿಸಿದ ಎಸ್ಪಿ; 8 ವರ್ಷದ ಬಾಲಕ ಆಜಾನ್ ಖಾನ್ ಪೊಲೀಸ್ ಸಮವಸ್ತ್ರವನ್ನು ಧರಿಸಿ, ಪೊಲೀಸ್ ನಿರೀಕ್ಷಕರ ಹುದ್ದೆಯನ್ನು ಸಂಕೇತಿಕವಾಗಿ ಅಲಂಕರಿಸಲು ದೊಡ್ಡಪೇಟೆ ಪೊಲೀಸ್ ಠಾಣೆಗೆ ಆಗಮಿಸಿದ. ಶಿವಮೊಗ್ಗದ ಎಸ್ಪಿ ಮಿಥುನ್ ಕುಮಾರ್ ಆತನಿಗೆ ಹೂಗುಚ್ಛ ನೀಡಿ ಸ್ವಾಗತ ಕೋರಿದರು.
ಆಜಾನ್ ಖಾನ್ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾನೆ. ಆತನ ಹೃದಯ ಸರಿಯಾಗಿ ಬೆಳೆದಿಲ್ಲ. 10 ಲಕ್ಷ ಮಕ್ಕಳಲ್ಲಿ ಒಬ್ಬರಿಗೆ ಕಾಣಿಸಿಕೊಳ್ಳುವ ಸಮಸ್ಯೆ ಇದಾಗಿದೆ. ಪೊಲೀಸ್ ಅಧಿಕಾರಿಯಾಗಬೇಕು ಎಂಬ ಆತನ ಕನಸನ್ನು ಶಿವಮೊಗ್ಗದ ಪೊಲೀಸರು ಸಾಕಾರಗೊಳಿಸಿದರು.
ಬಾಲಕ ಆಜಾನ್ ಖಾನ್ ಗುಣಮುಖವಾಗಲು ಮೂರು ಬಗೆಯ ಆಪರೇಷನ್ ಮಾಡಬೇಕು. ಹೃದಯ ಮತ್ತು ಶ್ವಾಸಕೋಶದ ಕಸಿ ಮಾಡಬೇಕು ಎಂದು ವೈದ್ಯರು ಹೇಳಿದ್ದಾರೆ. ಬಡವರಾದ ಪೋಷಕರು ಇದನ್ನು ಮಾಡಿಸುವ ಸ್ಥಿತಿಯಲ್ಲಿ ಇಲ್ಲ. ಆತ ಪೊಲೀಸ್ ಅಧಿಕಾರಿಯಾಗಬೇಕು ಎಂಬ ಕನಸನ್ನು ಪೋಷಕರು ಶಿವಮೊಗ್ಗ ಪೊಲೀಸರಿಗೆ ತಿಳಿಸಿದ್ದರು.
ಆಜಾನ್ ಖಾನ್ ಪೋಷಕರ ಬಳಿ ಮಾಹಿತಿ ಪಡೆದ ಎಸ್ಪಿ ಮಿಥುನ್ ಕುಮಾರ್ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಒಂದು ಗಂಟೆಗಳ ಕಾಲ ಬಾಲಕ ಪೊಲೀಸ್ ನಿರೀಕ್ಷಕನಾಗಿ ಕೆಲಸ ಮಾಡಲು ಅವಕಾಶ ನೀಡಿದರು. ಬುಧವಾರ ಬಾಲಕ ಪೋಷಕರ ಜೊತೆ ಠಾಣೆಗೆ ಆಗಮಿಸಿದ್ದ.
ಠಾಣೆಯ ಸಿಬ್ಬಂದಿ ಆಜಾನ್ ಖಾನ್ ಸ್ವಾಗತಿಸಿದರು. ಕುರ್ಚಿಯಲ್ಲಿ ಕುಳಿತ ಬಾಲಕನಿಗೆ ಕೆಲಸಗಳು ಹೇಗೆ ನಡೆಯುತ್ತವೆ? ಎಂದು ವಿವರಣೆ ನೀಡಿದರು. ತನ್ನ ಆಸೆಯಂತೆ ಪೊಲೀಸ್ ಅಧಿಕಾರಿಯಾಗಿ ಕೆಲಸ ಮಾಡಿದ ಬಾಲಕ ಸಹ ಸಂತಸ ವ್ಯಕ್ತಪಡಿಸಿದ, ಪೊಲೀಸರಿಗೆ ಪೋಷಕರು ಧನ್ಯವಾದಗಳನ್ನು ತಿಳಿಸಿದರು.
ಆಜಾನ್ ಖಾನ್ ಪೊಲೀಸ್ ಅಧಿಕಾರಿಯಾಗಿ ಕಾರ್ಯ ನಿರ್ವಹಣೆ ಮಾಡುವ ಸಂದರ್ಭದಲ್ಲಿ ಅನಿಲ್ ಕುಮಾರ್ ಭುಮರಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ. ಬಾಲರಾಜ್ ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ 'ಎ' ಉಪ ವಿಭಾಗ. ಪ್ರಭು ಡಿ. ಟಿ. ಪೊಲೀಸ್ ಉಪಾಧೀಕ್ಷರು, ಡಿಸಿಆರ್ಬಿ, ವಿಭಾಗ, ಜಿಲ್ಲಾ ಪೊಲೀಸ್ ಕಛೇರಿ ಶಿವಮೊಗ್ಗ. ಅಂಜನ್ ಕುಮಾರ್ ಪೊಲೀಸ್ ನಿರೀಕ್ಷಕರು, ದೊಡ್ಡಪೇಟೆ ಪೊಲೀಸ್ ಠಾಣೆ ಮತ್ತು ಠಾಣೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications