ಶಿವಮೊಗ್ಗ: ನಿಷೇಧದ ನಡುವೆಯೂ ಹೋರಿ ಸ್ಪರ್ಧೆ, ಓರ್ವ ಬಲಿ
ಶಿವಮೊಗ್ಗ, ನವೆಂಬರ್ 13: ಜಿಲ್ಲಾಡಳಿತದ ನಿರ್ಬಂಧದ ನಡುವೆ ಶಿವಮೊಗ್ಗ ಜಿಲ್ಲೆಯ ಆಯನೂರು ಕೋಟೆಯಲ್ಲಿ ಸೋಮವಾರ ಆಯೋಜಿಸಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.
'ಶಿವಮೊಗ್ಗದಲ್ಲಿ ಈ ಬಾರಿ ಹೋರಿ ಬೆದರಿಸುವ ಸ್ಪರ್ಧೆ ನಿಷೇಧ'
ಆಯನೂರು ಕೋಟೆಯಲ್ಲಿ ಸೋಮವಾರ ಆಯೋಜಿಸಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದು ಕುಂಸಿ ಮೂಲದ ಚಂದ್ರಶೇಖರ ಎಂಬ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಕಳೆದ ವರ್ಷ ಇದೇ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಈ ಘಟನೆ ನಡೆದ ಬಳಿಕ ಎಚ್ಚೆತ್ತುಕೊಂಡಿದ್ದ ಜಿಲ್ಲಾಡಳಿತ ಈ ವರ್ಷ ಜಿಲ್ಲೆಯಲ್ಲಿ ಹೋರಿ ಬೆದರಿಸುವ ಸ್ಪರ್ಧೆಯನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು.
ಆದರೂ ನಿರ್ಬಂಧದ ನಡುವೆ ಆಯನೂರು ಕೋಟೆಯಲ್ಲಿ ಸ್ಪರ್ಧೆ ಆಯೋಜಿಸಲಾದೆ. ಸ್ಪರ್ಧೆ ನೋಡಲು ಬಂದಿದ್ದ ಚಂದ್ರಶೇಖರಗೆ ಹೋರಿ ತಿವಿದಿದೆ.
Comments
English summary
A Man (Chandashekar) Killed during Bull Taming sport in Ayanur Kote village, Shimogga district on November 13.The bull taming sport was conducted despite a ban on it.