ಕುವೆಂಪು ವಿವಿಯಲ್ಲಿ ಲ್ಯಾಬ್ ಸ್ಥಾಪನೆ: ಡಿಆರ್ಡಿಒ ವಿಜ್ಞಾನಿಗಳ ಭೇಟಿ
ಶಿವಮೊಗ್ಗ, ಮಾರ್ಚ್ 5: ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯಕ್ಕೆ ಕೇಂದ್ರ ಸರ್ಕಾರದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು (ಡಿಆರ್ಡಿಒ) ವಿಜ್ಞಾನ ಪ್ರಯೋಗಾಲಯ ಆರಂಭಿಸುವ ನಿಟ್ಟಿನಲ್ಲಿ ಹಿರಿಯ ವಿಜ್ಞಾನಿ ಡಾ.ಎ.ಕೆ.ಸಿಂಗ್ ನೇತೃತ್ವದ ಉನ್ನತ ನಿಯೋಗ ಭೇಟಿ ನೀಡಿತ್ತು.
ಉನ್ನತ ವಿಜ್ಞಾನಿಗಳ ತಂಡವು ಈಗಾಗಲೇ ವರದಿ ಸಲ್ಲಿಸಿದ್ದು, ಪ್ರಯೋಗಾಲಯ ಆರಂಭಕ್ಕೆ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಜನವರಿ 5ರಂದು ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ, ಸಂಶೋಧನಾ ಘಟಕದ ಜತೆಯಲ್ಲಿ ಡಿಆರ್ಡಿಒ ಪ್ರಯೋಗಾಲಯ ಸ್ಥಾಪಿಸುವಂತೆ ಮನವಿ ಮಾಡಿದ್ದೆ. ಈ ಹಿನ್ನೆಲೆಯಲ್ಲಿ ವಿಜ್ಞಾನಿಗಳ ತಂಡ ಕುವೆಂಪು ವಿವಿಗೆ ಭೇಟಿ ನೀಡಿತ್ತು ಎಂದು ಹೇಳಿದ್ದಾರೆ.

ಡಿಆರ್ಡಿಒ ಸ್ಥಾಪನೆಗೆ ಬೇಕಿರುವ ಮೂಲ ಸೌಕರ್ಯ, ಸೂಕ್ತ ಪರಿಸರ, ಸಾರಿಗೆ, ರೈಲ್ವೆ, ವೈಮಾನಿಕ ಸಂಪರ್ಕ, ಪಶ್ಚಿಮ ಘಟ್ಟಗಳಲ್ಲಿ ದೊರೆಯುವ ನೈಸರ್ಗಿಕ ಗಿಡಮೂಲಿಕೆಗಳು, ಸಾಂಪ್ರದಾಯಿಕ ವೈದ್ಯಕೀಯ ಚಿಕಿತ್ಸಾ ಪದ್ಧತಿ, ಲಭ್ಯವಿರುವ ಕಾಲೇಜುಗಳು ಸೇರಿದಂತೆ ಅನುಕೂಲಕರ ಅಂಶಗಳ ಬಗ್ಗೆ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ವಿಜ್ಞಾನಿಗಳ ತಂಡಕ್ಕೆ ಮಾಹಿತಿ ನೀಡಿದರು.
ಡಿಆರ್ಡಿಒ ಸ್ಥಾಪನೆಯಿಂದ ಜಿಲ್ಲೆಗೆ ಆಗುವ ಅನುಕೂಲಗಳ ಕುರಿತು ವಿವರಿಸಿದರು. ಪ್ರಯೋಗಾಲಯ ಸ್ಥಾಪಿಸುವ ಕುರಿತಂತೆ ಈಗಾಗಲೇ ರಾಜ್ಯ ಸರ್ಕಾರದ ಮೂಲಕ ಕೇಂದ್ರಕ್ಕೆ ಸಲ್ಲಿಸಿದ ಪ್ರಸ್ತಾವನೆ ಬಗ್ಗೆ ವಿಜ್ಞಾನಿಗಳೊಂದಿಗೆ ಚರ್ಚಿಸಿದರು.

ಕುವೆಂಪು ವಿವಿಯಲ್ಲಿ ಡಿಆರ್ಡಿಒ ಘಟಕ ಸ್ಥಾಪಿಸಲು ತಾಂತ್ರಿಕ ತಂಡವು ಒಮ್ಮೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಏರೋನಾಟಿಕ್ಸ್, ಶಸ್ತ್ರಾಸ್ತ್ರಗಳು, ಎಲೆಕ್ಟ್ರಾನಿಕ್ಸ್, ಯುದ್ಧ ವಾಹನಗಳು, ಇಂಜಿನಿಯರಿಂಗ್ ವ್ಯವಸ್ಥೆಗಳು, ಸಲಕರಣೆಗಳು, ಕ್ಷಿಪಣಿಗಳು, ಸುಧಾರಿತ ಕಂಪ್ಯೂಟರಿಂಗ್ ಮತ್ತು ಸಿಮ್ಯುಲೇಶನ್, ವಿಶೇಷ ವಸ್ತುಗಳು, ನಾಕಾ ವ್ಯವಸ್ಥೆಗಳಂತ ವಿವಿಧ ವಿಭಾಗಗಳನ್ನು ಒಳಗೊಂಡ ರಕ್ಷಣಾ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುವ ಡಿಆರ್ಡಿಒ ಪ್ರಯೋಗಾಲಯ ಸ್ಥಾಪಿಸುವಂತೆ ಸಂಸದ ರಾಘವೇಂದ್ರ ಒತ್ತಾಯಿಸಿದರು.
ಡಿಆರ್ಡಿಒ ಡೈರಕ್ಟರ್ ಜನರಲ್ ಎ.ಕೆ.ಸಿಂಗ್, ಹಿರಿಯ ವಿಜ್ಞಾನಿಗಳಾದ ಡಾ.ಮಣಿಮೋಳಿ ಥಿಯೊಡರ್, ಕೆ.ಕೆ.ಪಾಠಕ್, ದೇವಕಾಂತ ಪಹಾಡ್ ಸಿಂಗ್, ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್, ಸೂಡಾ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ವಿವಿ ಕುಲಪತಿ ಪ್ರೊ.ಬಿ.ಪಿ ವೀರಭದ್ರಪ್ಪ, ಕುಲಸಚಿವ ಪ್ರೊ.ಎಸ್.ಎಸ್ ಪಾಟೀಲ್ ಇತರರಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications