ಅಯ್ಯಯ್ಯೋ..! ಶಿವಮೊಗ್ಗದಲ್ಲಿ ಸಾಕು ಬೆಕ್ಕು ಕಚ್ಚಿ ಮಹಿಳೆ ಸಾವು.. ಆಗಿದ್ದೇನು..?
ಶಿವಮೊಗ್ಗ, ಆಗಸ್ಟ್ 09: ಮನೆಯಲ್ಲಿ ಸಾಕುವ ಪ್ರಾಣಿಗಳು ಒಮ್ಮೊಮ್ಮೆ ಜೀವಕ್ಕೆ ಕಂಟಕ ತರುತ್ತವೆ ಎನ್ನುವುದಕ್ಕೆ ಅನೇಕ ಉದಾಹರಣೆಗಳಿವೆ. ಈಗ ಇದೇ ರೀತಿಯ ಘಟನೆಯೊಂದು ಶಿವಮೊಗ್ಗದಲ್ಲಿ ನಡೆದಿದ್ದು, ಸಾಕಿದ ಬೆಕ್ಕೊಂದು ಮನೆಯ ಮಹಿಳೆಯನ್ನು ಬಲಿ ಪಡೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಸಾಕು ಬೆಕ್ಕು ಕಚ್ಚಿ ಮಹಿಳೆ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟದಲ್ಲಿ ನಡೆದಿದೆ.
ಗಂಗೀಬಾಯಿ (50) ಮನೆಯ ಸಾಕು ಬೆಕ್ಕು ಕಚ್ಚಿ ಸಾವನ್ನಪ್ಪಿದ ಮಹಿಳೆ ಎಂದು ಗುರುತಿಸಲಾಗಿದೆ. ತರಲಘಟ್ಟದ ಗಂಗೀಬಾಯಿ ಎನ್ನುವವರಿಗೆ ಎರಡು ತಿಂಗಳ ಹಿಂದೆ ಮನೆಯಲ್ಲೇ ಮುದ್ದಾಗಿ ಸಾಕಿದ್ದ ಬೆಕ್ಕು ಕಚ್ಚಿತ್ತು ಎನ್ನಲಾಗಿದೆ. ಈ ಬೆಕ್ಕು ಮೊದಲು ತರಲಘಟ್ಟದ ಕ್ಯಾಂಪ್ನಲ್ಲಿರುವ ಯುವಕನ ಮೇಲೆ ದಾಳಿ ಮಾಡಿತ್ತು. ಬಳಿಕ ಮಹಿಳೆಯ ಮೇಲೂ ದಾಳಿ ಮಾಡಿ ಕಚ್ಚಿ ಗಾಯಗೊಳಿಸಿತ್ತು ಎಂದು ತಿಳಿದು ಬಂದಿದೆ.

ಬೆಕ್ಕು ಕಚ್ಚಿದ ಪರಿಣಾಮ ಗಂಗೀಬಾಯಿ ರೇಬಿಸ್ ಕಾಯಿಲೆಗೆ ತುತ್ತಾಗಿದ್ದಳು. ಬೆಕ್ಕು ಕಚ್ಚಿದ ಬಳಿಕ ಮಹಿಳೆ ಐದು ಇಂಜೆಕ್ಷನ್ ತೆಗೆದುಕೊಳ್ಳಬೇಕಿತ್ತು. ಆದರೆ ಒಂದು ಇಂಜೆಕ್ಷನ್ ಪಡೆದು ಆರೋಗ್ಯವಾಗಿದ್ದೇನೆ ಎಂದುಕೊಂಡ ಗಂಗೀಬಾಯಿ ಉಳಿದ ನಾಲ್ಕು ಇಂಜೆಕ್ಷನ್ ತೆಗೆದುಕೊಳ್ಳದೇ ನಿರ್ಲಕ್ಷ್ಯ ತೋರಿದ್ದಾರೆ ಎನ್ನಲಾಗಿದೆ.
ಮೊದಲ ಇಂಜೆಕ್ಷನ್ ಪಡೆದ ಬಳಿಕ ಗಂಗೀಬಾಯಿ ಆರೋಗ್ಯ ಚೇತರಿಸಿಕೊಂಡಿದ್ದು, ಹುಷಾರಾದ ಬಳಿಕ ಗದ್ದೆಗೆ ನಾಟಿ ಮಾಡಲು ಹೋಗಿದ್ದಾರೆ. ನೀರು ಹಾಗೂ ಕೆಸರಿಗೆ ಇಳಿದ ಕಾರಣ ಬೆಕ್ಕು ಕಚ್ಚಿದ ಗಾಯ ಇನ್ನಷ್ಟು ಉಲ್ಬಣಗೊಂಡಿದೆ. ಜೊತೆಗೆ ರೇಬಿಸ್ ಕಾಯಿಲೆಯ ಲಕ್ಷಣಗಳು ಕೂಡ ಹೆಚ್ಚಾಗಿದ್ದು, ತೀವ್ರ ಅನಾರೋಗ್ಯ ಕಾಡಿ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಈ ಘಟನೆ ಬಳಿಕ ಎಚ್ಚೆತ್ತುಕೊಂಡ ಜಿಲ್ಲಾ ಆರೋಗ್ಯ ಅಧಿಕಾರಿಗಳು ನಾಯಿ ಮಾತ್ರವಲ್ಲ ಬೆಕ್ಕು ಕಚ್ಚಿದರೂ ಸಹ ರೇಬಿಸ್ ರೋಗ ಬರುತ್ತದೆ ಎಂದು ತರಲಘಟ್ಟ ಜನರಿಗೆ ತಿಳಿ ಹೇಳಿದ್ದಾರೆ. ಅಲ್ಲದೇ ಒಂದು ವೇಳೆ ಮನೆಯ ಸಾಕು ಪ್ರಾಣಿಗಳು ಕಚ್ಚಿದರೆ ತಕ್ಷಣವೇ ಚಿಕಿತ್ಸೆ ಪಡೆಯುವಂತೆ ತಿಳಿಸಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications