ನಟ ವಿಜಯ್ ರಾಘವೇಂದ್ರ ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ಹಾಕಿ ಬಂಕ್ ಸಿಬ್ಬಂದಿಯಿಂದ ಎಡವಟ್ಟು
ಶಿವಮೊಗ್ಗ, ಆಗಸ್ಟ್ 11: ಕನ್ನಡದ ಚಿತ್ರನಟ ವಿಜಯ ರಾಘವೇಂದ್ರ ತಮ್ಮ ಕಾರಿಗೆ ಪೆಟ್ರೋಲ್ ಹಾಕಿಸಲು ಬಂಕ್ ಗೆ ಹೋದಾಗ ಪೆಟ್ರೋಲ್ ಬದಲು ಡೀಸೆಲ್ ಹಾಕಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾ ಅಭಯಾರಣ್ಯಕ್ಕೆ ಇತ್ತೀಚಿಗೆ ನಟ ದರ್ಶನ್ ಭೇಟಿ ನೀಡಿದ ನಂತರ, ನಟ ವಿಜಯ್ ರಾಘವೇಂದ್ರ ಅವರು ಕೂಡಾ ತಮ್ಮ ಕುಟುಂಬ ಸಮೇತ ಭೇಟಿ ಕೊಟ್ಟು, ಫೋಟೋಗ್ರಫಿ ಮಾಡಿ ಸುಂದರ ಪರಿಸರದಲ್ಲಿ ಎಂಜಾಯ್ ಮಾಡಿದ್ದರು.
ನಂತರ ಜೋಗ ಜಲಪಾತ ನೋಡಿಕೊಂಡು ಬೆಂಗಳೂರಿಗೆ ವಾಪಸ್ಸಾಗುವಾಗ ವಿಜಯ್ ರಾಘವೇಂದ್ರ ಅವರು ತಮ್ಮ ಕಾರಿಗೆ ಪೆಟ್ರೋಲ್ ಹಾಕಿಸಿಕೊಳ್ಳಲು ಪೆಟ್ರೋಲ್ ಬಂಕ್ ಬಳಿ ತೆರಳಿದ್ದಾರೆ. ಕಾರಿಗೆ ಪೆಟ್ರೋಲ್ ಹಾಕಿಸಿಕೊಳ್ಳುವ ವೇಳೆ ಪೆಟ್ರೋಲ್ ಬಂಕಿನಲ್ಲಿ ಎಡವಟ್ಟು ಸಂಭವಿಸಿದೆ.

ಪೆಟ್ರೋಲ್ ಬಂಕ್ ಸಿಬ್ಬಂದಿ ಕಾರಿಗೆ ಪೆಟ್ರೋಲ್ ಹಾಕುವ ಬದಲು ನಟ ವಿಜಯ್ ರಾಘವೇಂದ್ರ ಅವರನ್ನು ನೋಡಿದ ಖುಷಿಯಲ್ಲಿ ಕಾರಿಗೆ ಡೀಸೆಲ್ ಹಾಕಿದ್ದಾನೆ. ಆದರೆ ತಾನು ಮಾಡಿದ ತಪ್ಪಿನ ಅರಿವಾಗುತ್ತಿದ್ದಂತೆ ಸಿಬ್ಬಂದಿ ಗಾಬರಿಯಾಗಿದ್ದಾನೆ.
ಈ ವೇಳೆ ಸಿಬ್ಬಂದಿ ಹಾಗೂ ಪೆಟ್ರೋಲ್ ಬಂಕ್ ಮಾಲೀಕರು ವಿಜಯ್ ರಾಘವೇಂದ್ರ ಅವರ ಬಳಿ ಕ್ಷಮೆಯಾಚಿಸಿದ್ದಾರೆ. ನಂತರ ಲಾರಿಯಲ್ಲಿ ವಿಜಯ್ ರಾಘವೇಂದ್ರ ಅವರ ಕಾರನ್ನು ಸರ್ವಿಸ್ಗೆ ಕಳಿಸಲಾಗಿದೆ.

ನಂತರ ಪೆಟ್ರೋಲ್ ಬಂಕ್ನವರೆ ವಿಜಯ್ ರಾಘವೇಂದ್ರ ಹಾಗೂ ಕುಟುಂಬದವರನ್ನು ಬೆಂಗಳೂರಿಗೆ ತೆರಳಲು ಬೇರೆ ಕಾರಿನ ವ್ಯವಸ್ಥೆ ಮಾಡಿದ್ದಾರೆ ಎನ್ನಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications