ಮೊದಲ ದಿನ ಜೋಗ ಜಲಪಾತಕ್ಕೆ ಬಂದ ಪ್ರವಾಸಿಗರಿಗೆ ನಿರಾಸೆ
ಶಿವಮೊಗ್ಗ, ಜೂನ್ 18: ಲಾಕ್ಡೌನ್ ಸಡಿಲಿಕೆಯ ನಂತರ ಜೋಗ ಜಲಪಾತಕ್ಕೆ ಪ್ರವಾಸಿಗರ ಆಗಮನವಾಗಿದೆ. ನಿನ್ನೆಯಿಂದ ಪ್ರವಾಸಿಗರಿಗೆ ಅವಕಾಶ ನೀಡಲಾಗಿದೆ. ಆದರೆ, ಮೊದಲ ದಿನ ಬಂದ ಪ್ರವಾಸಿಗರಿಗೆ ಕೊಂಚ ಬೇಸರವಾಗಿದೆ.
Recommended Video
ಮೊದಲ ದಿನ ನೂರಾರೂ ಸಂಖ್ಯೆಯ ಜನರು ಜೋಗಕ್ಕೆ ಬಂದಿದ್ದರು. ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಕಡ್ಡಾಯವಾಗಿತ್ತು. ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ಕೂಡ ಮಾಡಲಾಯಿತು. ಕಳೆದ ಮೂರು ದಿನಗಳಿಂದ ಒಳ್ಳೆಯ ಮಳೆ ಬೀಳುತ್ತಿದ್ದು, ಜೋಗ ನೋಡುಗರ ಆಕರ್ಷಣೆಗೆ ಕಾರಣವಾಗಿದೆ.
ಸದ್ಯಕ್ಕೆ ಜೋಗ ಜಲಪಾತಕ್ಕೆ ಬಂದ ಪ್ರವಾಸಿಗರಿಗೆ ಕಳೆಗೆ ಬಿಡದಿರಲು ನಿರ್ಧಾರ ಮಾಡಲಾಗಿದೆ. ಸಾಮಾನ್ಯ ದಿನಗಳಲ್ಲಿ ಜನರು ಮೆಟ್ಟಲುಗಳ ಮೂಲಕ ಹೋಗಿ ಜೋಗದ ಗುಂಡಿ ಹತ್ತಿರ ಇಳಿಯಬಹುದು. ಆದರೆ, ಸದ್ಯ ಮೇಲೆ ನಿಂತು ಮಾತ್ರ ನೋಡಬೇಕಿದೆ. ಇದರಿಂದ ಬಂದ ಪ್ರವಾಸಿಗರಿಗೆ ನಿರಾಸೆಯಾಗಿದೆ.

ಜಲಪಾತದ ಬಳಿ ನೆಟ್ವರ್ಕ್ ಸಮಸ್ಯೆ ಇದೆ. ಒಂದೆರಡು ದಿನಗಳಲ್ಲಿ ಬೂಸ್ಟರ್ ಬಳಸಲಿದ್ದು, ಪ್ರವಾಸಿಗರು ಆನ್ ಲೈನ್ ಮೂಲಕ ಶುಲ್ಕ ಪಾವತಿ ಮಾಡಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ರಾಮಕೃಷ್ಣ ತಿಳಿಸಿದ್ದಾರೆ.
ಕೆಎಸ್ಟಿಡಿಸಿ ಮೂಲಕ ಮಯೂರ ಹೋಟೆಲ್ ಹಾಗೂ ಲಾಡ್ಜ್ ಪ್ರಾರಂಭ ಮಾಡಲಾಗಿದೆ. ಈಗಾಗಲೇ ಜಲಪಾತದ ಹಲವು ಕಡೆ ಔಷಧಿ ಸಿಂಪಡನೆ ಮಾಡಿದ್ದು, ಅನೇಕ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಮಳೆಗಾಲದ ಪ್ರಾರಂಭ ಆಗಿದ್ದು, ಪ್ರವಾಸಿಗರ ಸಂಖ್ಯೆ ಕೂಡ ಹೆಚ್ಚಾಗಿ ಇರಲಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications