ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭೂ ಕುಸಿತ, ದಟ್ಟಮಂಜು : ಆಗುಂಬೆ ಘಾಟ್‌ ಸಂಚಾರ ಸ್ಥಗಿತ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಜೂನ್ 27 : ಮಲೆನಾಡಿನಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಭಾರೀ ಮಳೆಯ ಕಾರಣ ಆಗುಂಬೆ ಘಾಟ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಗುರುವಾರ ಸಂಜೆಯಿಂದ ಆಗುಂಬೆ ಘಾಟ್‍ನಲ್ಲಿ ದಟ್ಟ ಮಂಜು ಆವರಿಸಿದೆ. ಇಂದು ಬೆಳಗ್ಗೆ ಘಾಟ್‌ ರಸ್ತೆಯ 7ನೇ ತಿರುವಿನಲ್ಲಿ ಭೂ ಕುಸಿತ ಉಂಟಾಗಿದೆ. ಆದ್ದರಿಂದ, ಶುಕ್ರವಾರ ಬೆಳಗ್ಗೆ ತನಕ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಆಗುಂಬೆ ಘಾಟಿಯಲ್ಲಿ ರಸ್ತೆ ಕುಸಿತ: ಆತಂಕಗೊಂಡ ಪ್ರಯಾಣಿಕರುಆಗುಂಬೆ ಘಾಟಿಯಲ್ಲಿ ರಸ್ತೆ ಕುಸಿತ: ಆತಂಕಗೊಂಡ ಪ್ರಯಾಣಿಕರು

ರಸ್ತೆ ಕುಸಿದ ಬಳಿಕ ಲಘುವಾಹನಗಳಿಗೆ ಮಾತ್ರ ಘಾಟ್‌ ರಸ್ತೆಯಲ್ಲಿ ಸಾಗಲು ಅವಕಾಶ ನೀಡಲಾಗಿತ್ತು. ಆದರೆ, ರಾತ್ರಿ ವೇಳೆ ವಾಹನಗಳ ಮೇಲೆ ನಿಗಾ ವಹಿಸುವುದು ಕಷ್ಟವಾಗುತ್ತದೆ. ಆದ್ದರಿಂದ ಆಗುವ ಅಪಘಾತ ತಪ್ಪಿಸಲು ವಾಹನ ಸಂಚಾರ ನಿಷೇಧಿಸಲಾಗಿದೆ.

Agumbe ghat road closed for traffic after landslide

'ದಟ್ಟ ಮಂಜು ಮತ್ತು ಭೂ ಕುಸಿತದ ಕಾರಣ ರಾತ್ರಿ ವೇಳೆ ವಾಹನಗಳ ಅವಘಡಗಳನ್ನು ತಪ್ಪಿಸುವ ಉದ್ದೇಶದಿಂದ ಆಗುಂಬೆ ರಸ್ತೆಯನ್ನ ಬೆಳಗ್ಗೆ ತನಕ ಬಂದ್ ಮಾಡಲಾಗಿದೆ' ಎಂದು ಪೊಲೀಸರು ಹೇಳಿದ್ದಾರೆ.

ದ.ಕ.ದಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ, ತುಂಬಿದ ನದಿಗಳುದ.ಕ.ದಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ, ತುಂಬಿದ ನದಿಗಳು

ಶಿವಮೊಗ್ಗ ಮೂಲಕ ಮಂಗಳೂರು, ಉಡುಪಿ, ಕುಂದಾಪುರದ ಕಡೆ ತೆರಳುವ ಪ್ರಯಾಣಿಕರು ಹೊಸನಗರದ ಹುಲಿಕಲ್ ಘಾಟ್ ಮಾರ್ಗವಾಗಿ ಸಂಚರಿಸಬೇಕು ಎಂದು ಸೂಚಿಸಲಾಗಿದೆ.

English summary
Shivamogga Mangaluru connecting Agumbe ghat road closed for traffic after landslide and fog in ghat road. Landslide spotted in 7th cross of the road.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X